• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ ಸೋತ 6 ತಾಸಿನಲ್ಲೇ ರಾಹುಲ್ ಸಿನೆಮಾಗೆ ಹೋಗುತ್ತಾರೆ ಎಂದರೆ ಅವರ ಮನಸ್ಥಿತಿ ಎಂಥಾದ್ದು.?

TNN Correspondent Posted On December 20, 2017


  • Share On Facebook
  • Tweet It

ದೆಹಲಿ: 2017  ಡಿಸೆಂಬರ್ 18 ರಾಷ್ಟ್ರ ರಾಜಕಾರಣದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದ ದಿನ. ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಧ್ಯೆ ನಡೆದ ಭಾರಿ ಪೈಪೋಟಿಯಲ್ಲಿ ಮೋದಿ ವಿಜಯ ದುಂಧುಬಿ ಮೊಳಗಿಸಿದರು. ನಂತರ ಬಿಜೆಪಿ ವಿಜಯೋತ್ಸವ ಆಚರಿಸಿ, ಮೋದಿ, ಅಮಿತ್ ಶಾ ಕಡಿಮೆ ಫಲಿತಾಂಶ ಬಂದಿರುವುದಕ್ಕೆ ಸಮಾಲೋಚನೆ ನಡೆಸುತ್ತಿದ್ದರು.

ಆದರೆ ಅದೇ ಎರಡು ದಿನಗಳ ಹಿಂದೆ ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಂಡ ರಾಹುಲ್ ಗಾಂಧಿ ಎಂಬ ಕುಟುಂಬದ ಕುಡಿ ತನ್ನ ನಾಲ್ವರು ಗೆಳೆಯರೊಂದಿಗೆ ಸಿನೆಮಾ ನೋಡುತ್ತಾ ಮಜಾ ಮಾಡುತ್ತಿತ್ತು ಎಂಬುದನ್ನು ರಾಷ್ಟ್ರೀಯ ಸುದ್ದಿವಾಹಿನಿಯೊಂದು ತನ್ನ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗಗೊಳಿಸಿದೆ.

ಡಿಸೆಂಬರ್ 18 ರಂದು ರಾತ್ರಿ ಬಿಜೆಪಿ ಅಮಿತ್ ಶಾ ಮತ್ತು ಮೋದಿ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿ, ಕಡಿಮೆ ಸ್ಥಾನ ಬರಲು ಕಾರಣವೇನು ಎಂದು ತಮ್ಮ ಹಿರಿಯ ಸಹೋದ್ಯೋಗಿಗಳೊಂದಿಗೆ ಚರ್ಚಿಸಿದರು. ವಿಜಯೋತ್ಸವ ಕೆಲವೇ ಗಂಟೆಗಳ ನಂತರ ಮೋದಿ ಓಖಿ ಚಂಡ ಮಾರುತದಿಂದ ಸಂಕಷ್ಟಕ್ಕೆ ಸಿಲುಕಿದವರ ನೋವು ಆಲಿಸಲು ಪ್ರಯಾಣ ಬೆಳೆಸಿದ್ದರು. ಅದು ಅವರ ಕಾರ್ಯದ ಬದ್ಧತೆ.

ಗುಜರಾತ್ ನಲ್ಲಿ 77  ಮತ್ತು ಹಿಮಾಚಲ ಪ್ರದೇಶದಲ್ಲಿ 20 ಸ್ಥಾನ ಪಡೆದು ಹೀನಾಯ ಸ್ಥಿತಿಗೆ ಇಳಿದ ಕಾಂಗ್ರೆಸ್ ನೇತೃತ್ವದ ವಹಿಸಿಕೊಂಡ ರಾಹುಲ್ ಗಾಂಧಿ ಇದ್ಯಾವುದನ್ನು ಲೆಕ್ಕಿಸದೇ ಸಿನೆಮಾ ನೋಡುತ್ತಾ ಮಜಾ ಮಾಡುತ್ತಿದ್ದ. ಇತ್ತ ರಾಹುಲ್ ಗಾಂಧಿ ಮೇಲೆ ಭರವಸೆ ಇಟ್ಟು ಬೀದಿ ಬೀದಿ ಅಲೆದು ಮತದಾರರನ್ನು ಸೆಳೆದ ಕಾರ್ಯಕರ್ತ ಹಣೆ ಮೇಲೆ ಕೈಯಿಟ್ಟು ಕುಳಿತುಕೊಳ್ಳುವಂತ ಸ್ಥಿತಿ ನಿರ್ಮಿಸಿದ್ದಾನೆ.

ಒಂದು ಜವಾಬ್ದಾರಿಯುತ ಪಕ್ಷದ ಅಧ್ಯಕ್ಷನಾಗಿ ರಾಹುಲ್ ಗಾಂಧಿ ಚುನಾವಣೆ ಫಲಿತಾಂಶದ ಕುರಿತು ಪರಾಮರ್ಶೆ ನಡೆಸುವುದು ಬಿಟ್ಟು, ಕಾರ್ಯಕರ್ತರ ಅಳಲು ಆಲಿಸುವುದು ಬಿಟ್ಟು, ಭವಿಷ್ಯದಲ್ಲಿ ಸರ್ಕಾರವನ್ನು ಹೇಗೆ ಎಚ್ಚರಿಸಬೇಕು ಎಂಬ ಬದ್ಧತೆಯನ್ನು ಮರೆತು ಸ್ಟಾರ್ ವಾರ್ ಸಿನೆಮಾ ನೋಡಲು ಹೋಗಿರುವುದು ರಾಹುಲ್ ಗಾಂಧಿಯ ನಾಯಕತ್ವದ ಅಪ್ರಬುದ್ಧತೆಗೆ ಸಾಕ್ಷಿ ಎಂಬುದು ಈ ಮೂಲಕ ಮತ್ತೊಮ್ಮೆ ಸಾಬೀತಾಗಿದೆ.

ದೇಶದ ಭವಿಷ್ಯದ ಪ್ರಧಾನಿ ಎಂದೆ ಸ್ವಪಕ್ಷಿಯರಿಂದ ಬಿಂಬಿಸಲಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತನ್ನೆಲ್ಲ ಜವಾಬ್ದಾರಿ ಮರೆತು ನಾಲ್ಕು ಗೆಳೆಯರ ಜತೆ ಸಿನೆಮಾ ನೋಡಲು ಹೋಗಿರುವುದು ಇಡೀ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದರೇ, ಒಂದೆಡೆ ಕಾಂಗ್ರೆಸ್ ನ ಭವಿಷ್ಯದ ಗತಿಯೇನು ಎಂಬ ಚಿಂತೆ ಕಾಂಗ್ರೆಸ್ ಮುಖಂಡರನ್ನು ದೃತಿಗೆಡಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search