• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಜಿಹಾದಿಗಳ, ಉಗ್ರರ, ಪ್ರತ್ಯೇಕವಾದಿಗಳ ಹುಟ್ಟಡಗಿಸಿದ ನಾಲ್ಕು ಅಸ್ತ್ರಗಳು ಇಲ್ಲಿವೆ ಕೇಳಿ..

TNN Correspondent Posted On December 20, 2017
0


0
Shares
  • Share On Facebook
  • Tweet It

ದೆಹಲಿ: ಭಾರತದ ಆತಂರಿಕ ಭದ್ರತೆಗೆ ಸವಾಲಾಗಿದ್ದ ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆಯನ್ನು, ಪ್ರತ್ಯೇಕವಾದಿಗಳನ್ನು ಹುಟ್ಟಡಗಿಸಲಾಗಿದೆ. ಭಯೋತ್ಪಾದನೆ ಮತ್ತು ಪ್ರತ್ಯೇಕವಾದವನ್ನು ತಣ್ಣಗೆ ಮಾಡಲು ಕೇಂದ್ರ ಸರ್ಕಾರ ಬಳಸಿದ್ದು ನಾಲ್ಕೇ ನಾಲ್ಕು ಅಸ್ತ್ರಗಳು ಎಂದರೇ ನೀವು ನಂಬಲೇಬೇಕು.

ಅದನ್ನು ಸಂಸತ್ ಅಧಿವೇಶನದಲ್ಲಿ ಕೇಂದ್ರ ಗೃಹ ಇಲಾಖೆಯೇ ದಾಖಲೆ ಸಮೇತ, ಉದಾಹರಣೆ ಸಹಿತ ಎಳೆ ಎಳೆಯಾಗಿ ಬಿಚ್ಚಿಟ್ಟಿದೆ. ನೋಟ್ಯಂತರ, ಎನ್ಐಎ ತನಿಖೆ ತೀವ್ರ ಮತ್ತು ಬಿಗಿಗೊಳಿಸಿದ್ದು, ಪ್ರಮುಖ ಉಗ್ರರನ್ನು ಹೊಡೆದುರುಳಿಸಿದ್ದು ಮತ್ತು ಕಾಶ್ಮೀರ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ನೇಮಿಸಿರುವ ಸಂಧಾನಕಾರ ದಿನೇಶ್ವರ ಶರ್ಮಾ ಎಂಬುವವೇ ಆ ನಾಲ್ಕು ಕಾರಣಗಳು.

ಭಾರತೀಯ ಸೇನೆ ಕಾಶ್ಮೀರ ಕಣಿವೆಯಲ್ಲಿ ಕಂಟವಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ಉದಾಹರಣೆಗೆ ಎಲ್ ಇಟಿ ಮತ್ತು ಜಮಾತ್ ಉದ್ ದಾವಾ ಸಂಘಟನೆಯ ಉಗ್ರರಾದ ಅಬು ಹಮಾಜ್, ವಾಸೀಮ್ ಶಾ, ಶಹೀದ್ ಶೌಖತ್ ಸೇರಿ ನೂರಾರು ಉಗ್ರರನ್ನು ಸದೆ ಬಡೆಯಲಾಗಿದೆ ಎಂದು ಲೋಕಸಭೆಗೆ ಕೇಂದ್ರ ಗೃಹ ಖಾತೆ ತಿಳಿಸಿದೆ.

ಕೇಂದ್ರ ಸರ್ಕಾರ ಕಾಶ್ಮೀರ ಕಣಿವೆಯಲ್ಲಿ ಶಾಂತಿ ನೆಲೆಸಲು ನೇಮಿಸಿರುವ ಸಂಧಾನಕಾರ ದಿನೇಶ್ವರ ಶರ್ಮಾ ಯಶಸ್ವಿಯಾಗಿ ಕಾರ್ಯಚರಣೆ ನಡೆಸಿದ್ದು, ಪ್ರತ್ಯೇಕವಾದಿಗಳೊಂದಿಗೆ, ಸ್ಥಳೀಯರೊಂದಿಗೆ ಸರ್ಕಾರದ ಸಂವಹನ ಏರ್ಪಡಿಸಿ ತಕ್ಕ ಮಟ್ಟಿಗೆ ಕೇಂದ್ರದ ಹೋರಾಟಕ್ಕೆ ಬಲ ನೀಡಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೋಟ್ಯಂತರ ಉಗ್ರರು ಮತ್ತು ಪ್ರತ್ಯೇಕವಾದಿಗಳಿಗೆ ಮಗ್ಗಲ ಮುಳ್ಳಾಗಿ ಕಾಡಿದಲ್ಲದೇ, ಅವರ ಹೋರಾಟಕ್ಕೆ ಇಂಧನದಂತೆ ಹರಿದು ಬರುತ್ತಿದ್ದ ಕೋಟಾ ನೋಟಿಗೆ ದೊಡ್ಡ ಹೊಡೆತ ಬಿದ್ದಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರತ್ಯೇಕವಾದಿಗಳ ನಡ ಮುರಿದು, ಜೈಲಿಗಟ್ಟಲು ಯಶಸ್ವಿಯಾಗಿದೆ. ಆದ್ದರಿಂದ ಕಣಿವೇ ರಾಜ್ಯಗಳಲ್ಲಿ ಶಾಂತಿ ನೆಲೆಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search