• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನದಲ್ಲಿ ರಾಣಿ ಪದ್ಮಾವತಿ ಪುತ್ಥಳಿ ನಿರ್ಮಿಸಲು ಸರ್ಕಾರ ನಿರ್ಧಾರ!

TNN Correspondent Posted On December 20, 2017
0


0
Shares
  • Share On Facebook
  • Tweet It

ಜೈಪುರ: ರಾಣಿ ಪದ್ಮಾವತಿ ಹಾಗೂ ಅಲ್ಲಾವುದ್ದೀನ್ ಖಿಲ್ಜಿ ಜತೆ ಆತ್ಮೀಯ ದೃಶ್ಯ ಚಿತ್ರೀಕರಿಸಿದ ಆರೋಪದಲ್ಲಿ ಸಂಜಯ್ ಲೀಲಾ ನಿರ್ದೇಶನದ “ಪದ್ಮಾವತಿ” ಚಿತ್ರ ಬಿಡುಗಡೆಗೆ ವ್ಯಾಪಕವಾಗಿ ವಿರೋಧ ವ್ಯಕ್ತವಾದ ಬೆನ್ನಲ್ಲೇ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಾಣಿ ಪದ್ಮಾವತಿ ಪುತ್ಥಳಿ ನಿರ್ಮಿಸಲು ಮುಂದಾಗಿದೆ.

ಈ ಕುರಿತು ಕಳೆದ ನವೆಂಬರ್ ನಲ್ಲಿ ಗೃಹ ಸಚಿವ ಗುಲಾಬ್ ಚಂದ್ ಕಟಾರಿಯಾ ಅವರು ಶಿಲ್ಪಿಗಳ ಜತೆ ಸಭೆ ನಡೆಸಿದ್ದು, ಶೀಘ್ರವೇ ಪದ್ಮಾವತಿಯ 9 ಅಡಿ ಉದ್ದದ ಮೂರ್ತಿ ಸ್ಥಾಪನೆ ಕೈಗೊಂಡು ಮುಗಿಸಬೇಕು ಎಂದು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉದಯಪುರದ ಚಿತ್ತೂರಿನಲ್ಲಿ ಪದ್ಮಾವತಿಯ ಪುತ್ಥಳಿ ಸ್ಥಾಪನೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, 5-6 ತಿಂಗಳಲ್ಲಿ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಅಲ್ಲದೆ, ರಜಪೂತರ ಅರಸರಾದ ಪನ್ನಾ ತೈ, ರಾಣಾ ಕುಂಭ, ಬಪ್ಪ ರವಾಲ್ಜಿ ಸೇರಿ ಹಲವು ಗಣ್ಯರ ಮೂರ್ತಿ ಸ್ಥಾಪನೆ ಮಾಡಬೇಕು ಎಂದು 2016ರಲ್ಲೇ ವಸುಂಧರಾ ರಾಜೆ ಸರ್ಕಾರ ಆದೇಶ ಹೊರಡಿಸಿದೆ.

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದಲ್ಲಿ ಇತಿಹಾಸ ತಿರುಚಲಾಗಿದೆ ಹಾಗೂ ಪದ್ಮಾವತಿಯನ್ನು ಅಸಭ್ಯವಾಗಿ ಚಿತ್ರೀಕರಿಸಲಾಗಿದೆ ಎಂದು ದೇಶಾದ್ಯಂತ ವಿರೋಧ ವ್ಯಕ್ತವಾಗಿತ್ತು.ಅಲ್ಲದೆ, ಕಾಂಗ್ರೆಸ್ ಸರ್ಕಾರವಿರುವ ಪಂಜಾಬ್ ಸೇರಿ ಹಲವು ರಾಷ್ಟ್ರಗಳು ಬಿಡುಗಡೆ ನಿಷೇಧಿಸಿದ್ದವು. ಹಾಗಾಗಿ ಡಿ.1ರಂದು ಬಿಡುಗಡೆಯಾಗಬೇಕಿದ್ದ ಚಿತ್ರ ಮುಂದೂಡಲಾಗಿದೆ. ಏತನ್ಮಧ್ಯೆಯೇ ಸರ್ಕಾರ ರಾಣಿ ಪದ್ಮಿನಿ ಪುತ್ಥಳಿ ಸ್ಥಾಪನೆಗೆ ಮುಂದಾಗಿರುವುದು ರಜಪೂತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search