• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಲಭೂಷಣ ಜಾಧವ್ ಕುಟುಂಬಸ್ಥರಿಗೆ ವೀಸಾ ನೀಡಿದ ಪಾಕಿಸ್ತಾನ!

TNN Correspondent Posted On December 21, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಬೇಹುಗಾರಿಕೆ ಆರೋಪದಲ್ಲಿ ಭಾರತ ನೌಕಾದಳದ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿ ಉದ್ಧಟತನ ಮಾಡಿದ್ದ ಪಾಕಿಸ್ತಾನ, ಜಾಧವ್ ಅವರನ್ನು ಭೇಟಿ ಮಾಡಲು ಕುಟುಂಬಸ್ಥರಿಗೆ ವೀಸಾ ನೀಡಿದೆ.

ಕುಲಭೂಷಣ್ ಜಾಧವ್ ಅವರ ತಾಯಿ ಹಾಗೂ ಪತ್ನಿಗೆ ವೀಸಾ ನೀಡಿದ್ದು, ಸೋಮವಾರ ಇಸ್ಲಾಮಾಬಾದ್ ಗೆ ಆಗಮಿಸುವಂತೆ ತಿಳಿಸಿದೆ. ಅಲ್ಲದೆ ಇಬ್ಬರಿಗೂ ಸೂಕ್ತ ರಕ್ಷಣೆ ಹಾಗೂ ಭದ್ರತೆ ಒದಗಿಸುವುದಾಗಿಯೂ ಪಾಕಿಸ್ತಾನ ಮಾಹಿತಿ ನೀಡಿದೆ.

ದೆಹಲಿಯಲಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ಕುಲಭೂಷಣ್ ಜಾಧವ್ ಪತ್ನಿ ಹಾಗೂ ತಾಯಿಗೆ ವೀಸಾ ನೀಡಿದೆ ಎಂದು ವಿದೇಶ ಕಚೇರಿಯ ವಕ್ತಾರ ಮೊಹಮ್ಮದ್ ಫೈಸಲ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

ಕಳೆದ ಡಿಸೆಂಬರ್ 17ರಂದು “ಜಾಧವ್ ಅವರ ಪತ್ನಿ ಹಾಗೂ ತಾಯಿ ಸಲ್ಲಿಸಿದ ವೀಸಾ ಅರ್ಜಿ ಪರಿಶೀಲಸುತ್ತಿದ್ದು, ವೀಸಾ ಮಂಜೂರು ಮಾಡುವ ಕುರಿತು ಪ್ರಕ್ರಿಯೆ ನಡೆಯುತ್ತಿದೆ ಎಂದು ಪಾಕಿಸ್ತಾನ ತಿಳಿಸಿತ್ತು. ಕೊನೆಗೂ ವೀಸಾ ನೀಡಿದ್ದು, ಜಾಧವ್ ಪತ್ನಿ ಹಾಗೂ ತಾಯಿ ಸೋಮವಾರ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲಿದ್ದಾರೆ.

ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಿ ಜಾಧವ್ ಅವರನ್ನು ಜೈಲಿನಲ್ಲಿಟ್ಟದ್ದ ಪಾಕಿಸ್ತಾನ ಕಳೆದ ಏಪ್ರಿಲ್ 17ರಂದು ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಭಾರತ ಇದನ್ನು ಪ್ರಶ್ನಿಸಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದ್ದಲ್ಲದೇ, ಸಮರ್ಥ ವಾದ ಮಂಡಿಸಿ ಪಾಕಿಸ್ತಾನದ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಮಾಡಿತ್ತು. ಕೊನೆಗೆ ಭಾರತದ ಒತ್ತಡಕ್ಕೆ ಮಣಿದ ಪಾಕಿಸ್ತಾನ ಜಾಧವ್ ಕುಟುಂಬಸ್ಥರ ಭೇಟಿಗೆ ಅನುಮತಿ ನೀಡಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search