• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಲಭೂಷಣ ಜಾಧವ್ ಕುಟುಂಬಸ್ಥರಿಗೆ ವೀಸಾ ನೀಡಿದ ಪಾಕಿಸ್ತಾನ!

TNN Correspondent Posted On December 21, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಬೇಹುಗಾರಿಕೆ ಆರೋಪದಲ್ಲಿ ಭಾರತ ನೌಕಾದಳದ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿ ಉದ್ಧಟತನ ಮಾಡಿದ್ದ ಪಾಕಿಸ್ತಾನ, ಜಾಧವ್ ಅವರನ್ನು ಭೇಟಿ ಮಾಡಲು ಕುಟುಂಬಸ್ಥರಿಗೆ ವೀಸಾ ನೀಡಿದೆ.

ಕುಲಭೂಷಣ್ ಜಾಧವ್ ಅವರ ತಾಯಿ ಹಾಗೂ ಪತ್ನಿಗೆ ವೀಸಾ ನೀಡಿದ್ದು, ಸೋಮವಾರ ಇಸ್ಲಾಮಾಬಾದ್ ಗೆ ಆಗಮಿಸುವಂತೆ ತಿಳಿಸಿದೆ. ಅಲ್ಲದೆ ಇಬ್ಬರಿಗೂ ಸೂಕ್ತ ರಕ್ಷಣೆ ಹಾಗೂ ಭದ್ರತೆ ಒದಗಿಸುವುದಾಗಿಯೂ ಪಾಕಿಸ್ತಾನ ಮಾಹಿತಿ ನೀಡಿದೆ.

ದೆಹಲಿಯಲಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ಕುಲಭೂಷಣ್ ಜಾಧವ್ ಪತ್ನಿ ಹಾಗೂ ತಾಯಿಗೆ ವೀಸಾ ನೀಡಿದೆ ಎಂದು ವಿದೇಶ ಕಚೇರಿಯ ವಕ್ತಾರ ಮೊಹಮ್ಮದ್ ಫೈಸಲ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

ಕಳೆದ ಡಿಸೆಂಬರ್ 17ರಂದು “ಜಾಧವ್ ಅವರ ಪತ್ನಿ ಹಾಗೂ ತಾಯಿ ಸಲ್ಲಿಸಿದ ವೀಸಾ ಅರ್ಜಿ ಪರಿಶೀಲಸುತ್ತಿದ್ದು, ವೀಸಾ ಮಂಜೂರು ಮಾಡುವ ಕುರಿತು ಪ್ರಕ್ರಿಯೆ ನಡೆಯುತ್ತಿದೆ ಎಂದು ಪಾಕಿಸ್ತಾನ ತಿಳಿಸಿತ್ತು. ಕೊನೆಗೂ ವೀಸಾ ನೀಡಿದ್ದು, ಜಾಧವ್ ಪತ್ನಿ ಹಾಗೂ ತಾಯಿ ಸೋಮವಾರ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲಿದ್ದಾರೆ.

ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಿ ಜಾಧವ್ ಅವರನ್ನು ಜೈಲಿನಲ್ಲಿಟ್ಟದ್ದ ಪಾಕಿಸ್ತಾನ ಕಳೆದ ಏಪ್ರಿಲ್ 17ರಂದು ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಭಾರತ ಇದನ್ನು ಪ್ರಶ್ನಿಸಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದ್ದಲ್ಲದೇ, ಸಮರ್ಥ ವಾದ ಮಂಡಿಸಿ ಪಾಕಿಸ್ತಾನದ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಮಾಡಿತ್ತು. ಕೊನೆಗೆ ಭಾರತದ ಒತ್ತಡಕ್ಕೆ ಮಣಿದ ಪಾಕಿಸ್ತಾನ ಜಾಧವ್ ಕುಟುಂಬಸ್ಥರ ಭೇಟಿಗೆ ಅನುಮತಿ ನೀಡಿದೆ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search