• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕುಲಭೂಷಣ ಜಾಧವ್ ಕುಟುಂಬಸ್ಥರಿಗೆ ವೀಸಾ ನೀಡಿದ ಪಾಕಿಸ್ತಾನ!

TNN Correspondent Posted On December 21, 2017


  • Share On Facebook
  • Tweet It

ಇಸ್ಲಾಮಾಬಾದ್: ಬೇಹುಗಾರಿಕೆ ಆರೋಪದಲ್ಲಿ ಭಾರತ ನೌಕಾದಳದ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿ ಉದ್ಧಟತನ ಮಾಡಿದ್ದ ಪಾಕಿಸ್ತಾನ, ಜಾಧವ್ ಅವರನ್ನು ಭೇಟಿ ಮಾಡಲು ಕುಟುಂಬಸ್ಥರಿಗೆ ವೀಸಾ ನೀಡಿದೆ.

ಕುಲಭೂಷಣ್ ಜಾಧವ್ ಅವರ ತಾಯಿ ಹಾಗೂ ಪತ್ನಿಗೆ ವೀಸಾ ನೀಡಿದ್ದು, ಸೋಮವಾರ ಇಸ್ಲಾಮಾಬಾದ್ ಗೆ ಆಗಮಿಸುವಂತೆ ತಿಳಿಸಿದೆ. ಅಲ್ಲದೆ ಇಬ್ಬರಿಗೂ ಸೂಕ್ತ ರಕ್ಷಣೆ ಹಾಗೂ ಭದ್ರತೆ ಒದಗಿಸುವುದಾಗಿಯೂ ಪಾಕಿಸ್ತಾನ ಮಾಹಿತಿ ನೀಡಿದೆ.

ದೆಹಲಿಯಲಲ್ಲಿರುವ ಪಾಕಿಸ್ತಾನ ಹೈ ಕಮಿಷನ್ ಕುಲಭೂಷಣ್ ಜಾಧವ್ ಪತ್ನಿ ಹಾಗೂ ತಾಯಿಗೆ ವೀಸಾ ನೀಡಿದೆ ಎಂದು ವಿದೇಶ ಕಚೇರಿಯ ವಕ್ತಾರ ಮೊಹಮ್ಮದ್ ಫೈಸಲ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

ಕಳೆದ ಡಿಸೆಂಬರ್ 17ರಂದು “ಜಾಧವ್ ಅವರ ಪತ್ನಿ ಹಾಗೂ ತಾಯಿ ಸಲ್ಲಿಸಿದ ವೀಸಾ ಅರ್ಜಿ ಪರಿಶೀಲಸುತ್ತಿದ್ದು, ವೀಸಾ ಮಂಜೂರು ಮಾಡುವ ಕುರಿತು ಪ್ರಕ್ರಿಯೆ ನಡೆಯುತ್ತಿದೆ ಎಂದು ಪಾಕಿಸ್ತಾನ ತಿಳಿಸಿತ್ತು. ಕೊನೆಗೂ ವೀಸಾ ನೀಡಿದ್ದು, ಜಾಧವ್ ಪತ್ನಿ ಹಾಗೂ ತಾಯಿ ಸೋಮವಾರ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲಿದ್ದಾರೆ.

ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಿ ಜಾಧವ್ ಅವರನ್ನು ಜೈಲಿನಲ್ಲಿಟ್ಟದ್ದ ಪಾಕಿಸ್ತಾನ ಕಳೆದ ಏಪ್ರಿಲ್ 17ರಂದು ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಭಾರತ ಇದನ್ನು ಪ್ರಶ್ನಿಸಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದ್ದಲ್ಲದೇ, ಸಮರ್ಥ ವಾದ ಮಂಡಿಸಿ ಪಾಕಿಸ್ತಾನದ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಮಾಡಿತ್ತು. ಕೊನೆಗೆ ಭಾರತದ ಒತ್ತಡಕ್ಕೆ ಮಣಿದ ಪಾಕಿಸ್ತಾನ ಜಾಧವ್ ಕುಟುಂಬಸ್ಥರ ಭೇಟಿಗೆ ಅನುಮತಿ ನೀಡಿದೆ.

  • Share On Facebook
  • Tweet It


- Advertisement -


Trending Now
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Tulunadu News September 27, 2023
ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
Tulunadu News September 27, 2023
Leave A Reply

  • Recent Posts

    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
  • Popular Posts

    • 1
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 2
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 3
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 4
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • 5
      ರೈಲು ಬೋಗಿಗಳು ಆವತ್ತು ಮತ್ತು ಇವತ್ತು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search