• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ರಿಕೆಟ್ ದೇವರು, ಭಾರತ ರತ್ನ ಸಚಿನರನ್ನು ಅವಮಾನ ಮಾಡಿದ ಕಾಂಗ್ರೆಸ್

TNN Correspondent Posted On December 22, 2017
0


0
Shares
  • Share On Facebook
  • Tweet It

ದೆಹಲಿ: ಕ್ರಿಕೆಟ್ ದೇವರು, ಭಾರತ ರತ್ನ, ರಾಜ್ಯಸಭೆ ಸದಸ್ಯ ಸಚಿನ್ ತೆಂಡೂಲ್ಕರ್ ಅವರನ್ನು ರಾಜ್ಯ ಸಭೆ ಕಲಾಪದಲ್ಲಿ ಮಾತನಾಡಲು ಅವಕಾಶ ನೀಡದೆ ಕಾಂಗ್ರೆಸ್ ಸದಸ್ಯರು ಅವಮಾನಿಸಿದ್ದು, ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತದಲ್ಲಿ ಕ್ರೀಡಾ ಭವಿಷ್ಯದ ಬಗ್ಗೆ ಮಾತನಾಡಲು ಸಚಿನ್ ಎದ್ದು ನಿಂತಾಗ ಕಾಂಗ್ರೆಸ್ ಸದಸ್ಯರು ಗದ್ದಲ ಆರಂಭಿಸಿದ್ದರು. 2ಜಿ ಹಗರಣದ ಕುರತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಬಗ್ಗೆ ನೀಡಿರುವ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಸದನದಲ್ಲಿ ತೀವ್ರ ಗದ್ದಲ, ಕೋಲಾಹಲ ಸೃಷ್ಟಿಸಿದರು. ಇದರಿಂದ ಸಚಿನ್ ತೆಂಡೂಲ್ಕರ್ ಗೆ ತೀವ್ರ ಇರಿಸು ಮುರಿಸು ಉಂಟಾಯಿತು.

ರಾಜ್ಯಸಭೆಯಲ್ಲಿ ಪ್ರಥಮ ಭಾರಿಗೆ ಮಾತನಾಡಲು ಸಚಿನ್ ಮುಂದಾದಾಗ ಕಾಂಗ್ರೆಸ್ ಸದಸ್ಯರು ತೀವ್ರ ಗದ್ದಲ ಆರಂಭಿಸಿದ್ದರು. ಇದರಿಂದ ಸಚಿನ್ ಸುಮಾರು 10 ನಿಮಿಷ ನಿಂತುಕೊಂಡೆ ಇದ್ದರು. ಆದರೂ ಕಾಂಗ್ರೆಸ್ ಸದಸ್ಯರು ಗದ್ದಲ ಮುಂದುವರಿಸಿದರು. ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ‘ಭಾರತ ರತ್ನ ಕ್ರಿಕೆಟ್ ದೇವರಿಗೆ ಅವಮಾನ ಮಾಡುವುದು ಸರಿಯಲ್ಲ. ಅವರಿಗೆ ಮಾತನಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರೂ ಕಾಂಗ್ರೆಸ್ ಸದಸ್ಯರು ತಮ್ಮ ಪಟ್ಟು ಸಡಿಲಿಸಲಿಲ್ಲ.

ದೇಶದ ಕ್ರೀಡಾಲೋಕಕ್ಕೆ ಮಹತ್ವದ ಕೊಡುಗೆ ನೀಡಿದವರು ಮಾತನಾಡುತ್ತಿದ್ದಾರೆ. ಕೊನೆ ಪಕ್ಷ ಕ್ರೀಡಾ ಸ್ಫೂರ್ತಿಯನ್ನಾದರೂ ಮೆರೆಯಿರಿ ಎಂದರೂ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರಿಸಿ ಸಚಿನ್ ಗೆ ಮಾತನಾಡಲು ಅವಕಾಶ ನೀಡದೇ ಅವಮಾನ ಮಾಡಿದರು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search