• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ದೊಡ್ಡಣ್ಣ ಅಮೆರಿಕಾದ ವಿರೋಧದ ಮಧ್ಯೆ, ವಿಶ್ವದ ಮುಸ್ಲಿಂ ರಾಷ್ಟ್ರಗಳ ವಾದಕ್ಕೆ ಭಾರತದ ಬೆಂಬಲ

TNN Correspondent Posted On December 22, 2017
0


0
Shares
  • Share On Facebook
  • Tweet It

ದೆಹಲಿ: ಇಸ್ರೆಲ್ ರಾಜಧಾನಿಯಾಗಿ ಜೇರುಸೆಲಂನ್ನು ಅಮೆರಿಕ ಅಧ್ಯಕ್ಷ ಟ್ರಂಪ್ ಬೆಂಬಲಿಸಿರುವ ಮಧ್ಯೆ ಭಾರತವೂ ವಿಶ್ವ ಸಂಸ್ಥೆಯ ಸಭೆಯಲ್ಲಿ ಜೇರುಸೆಲಂ ಇಸ್ರೆಲ್ ರಾಜಧಾನಿ ಎಂಬ ವಾದಕ್ಕೆ ವಿರೋಧ ವ್ಯಕ್ತಪಡಿಸಿದೆ. ಸುಮಾರು ಏಳು ದಶಕಗಳಿಂದ ಇರುವ ಪ್ಯಾಲೆಸ್ತಿನ್ ಮತ್ತು ಇಸ್ರೆಲ್ ಮಧ್ಯದ ವಿವಾದ ಇದೀಗ ಹೊಸ ರೂಪ ಪಡೆದುಕೊಂಡಿದೆ.

ಜೇರುಸೆಲಂ ನ್ನು ಯಾವುದೇ ಕಾರಣಕ್ಕೂ ಇಸ್ರೆಲ್ ರಾಜಧಾನಿಯಾಗಿ ಘೋಷಿಸಬಾರದು ಎಂದು ವಿಶ್ವದ ಮುಸ್ಲಿಂ ರಾಷ್ಟ್ರಗಳು ಆಗ್ರಹಿಸಿದ್ದವು. ಜೇರುಸೆಲಂನ್ನು ಇಸ್ರೆಲ್ ರಾಜಧಾನಿಯಾಗಿ ಘೋಷಿಸಬೇಕು ಎಂಬ ವಾದಕ್ಕೆ ಭಾರತ ಸೇರಿ 100 ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ.

ವಿಶ್ವಸಂಸ್ಥೆ ಜನರಲ್ ಅಸೆಂಬ್ಲಿ ಅಮೆರಿಕದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಂದ ಜೇರು ಸೆಲಂ ಕುರಿತ ಅಭಿಪ್ರಾಯ ಕೇಳಿ ಮತದಾನ ಏರ್ಪಡಿಸಿತ್ತು. ಇದರಲ್ಲಿ ಭಾರತ ವಿಶ್ವದ ಮುಸ್ಲಿಂ ರಾಷ್ಟ್ರಗಳ ವಾದವನ್ನು ಬೆಂಬಲಿಸಿ, ವಿಶ್ವಸಂಸ್ಥೆಯ ವಾದಕ್ಕೆ ಬೆಂಬಲ ಸೂಚಿಸಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಗೆ ಭೇಟಿ ನೀಡಿದ್ದರು. ಈ ವೇಳೆ ಪಕ್ಕದ ಪ್ಯಾಲೆಸ್ತಿನ್ ಗೆ ಭೇಟಿ ನೀಡದಿರುವುದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಮುಂದಿನ ತಿಂಗಳು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತ್ಯಾನುಹ್ ಭಾರತಕ್ಕೆ ಭೇಟಿ ನೀಡಲಿದ್ದು, ಭಾರತದ ಈ ನಿರ್ಧಾರ ತೀವ್ರ ಮಹತ್ವ ಪಡೆದುಕೊಂಡಿದೆ.

ನಮ್ಮ ನಿರ್ಧಾರಗಳು ಕೆಲ ಮೌಲ್ಯಯುತ ತತ್ವಗಳ ಆಧಾರದ ಮೇಲೆ ಕೈಗೊಳ್ಳಲಾಗುತ್ತದೆ. ನಾವು ಸುದೀರ್ಘ ಮತ್ತು ಬಲಿಷ್ಟ ಸಂಬಂಧವನ್ನು ಹೊಂದಲು ಇಚ್ಛಿಸುತ್ತೇವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಡಿಸೆಂಬರ್ 6ರಂದು ಡೋನಾಲ್ಡ್ ಟ್ರಂಪ್ ಘೋಷಿಸಿರುವ ಮಧ್ಯೆಯೇ ಭಾರತದ ನಿಲುವು ಬದಲಾಗಿದೆ ಎನ್ನಲಾಗಿದೆ. ಆದರೆ ಯಾವುದೋ ಮೂರನೇ ರಾಷ್ಟ್ರದ ನಿರ್ಧಾರಕ್ಕೆ ನಾವು ಬೆಂಬಲ ನೀಡುವುದಿಲ್ಲ. ನಮ್ಮ ನಿಲುವು ಸ್ಪಷ್ಟ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search