• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ವಿಜಯ್ ರೂಪಾನಿ ಅವರನ್ನೇ ಸಿಎಂ ಅಗಿ ಮುಂದುವರಿಸಿದ್ದು ಏಕೆ ಗೊತ್ತಾ?

TNN Correspondent Posted On December 23, 2017
0


0
Shares
  • Share On Facebook
  • Tweet It

ಗಾಂಧಿನಗರ: ಈ ಬಾರಿ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಲೇ ಪಟೇಲರೊಬ್ಬರು ಗುಜರಾತ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾತಿಗೆ ತೆರೆ ಬಿದ್ದಿದ್ದು, ಎರಡನೇ ಅವಧಿಗೂ ಜೈನ್ ಬನಿಯಾ ಸಮುದಾಯದ ವಿಜಯ್ ರೂಪಾನಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ನಿತೀನ್ ಪಟೇಲ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಆದರೆ ಬಲಿಷ್ಠ ಸಮುದಾಯ ಪಟೇಲರನ್ನು ಬಿಟ್ಟು ಬಿಜೆಪಿ ವರಿಷ್ಠರೇಕೆ ವಿಜಯ್ ರೂಪಾನಿ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮುಂದುವರಿಯಲು ಅನುವು ಮಾಡಿಕೊಟ್ಟಿದ್ದಾರೆ? ವಿಜಯ್ ರೂಪಾನಿ ಅವರ ಆಡಳಿತದ ಗುಣವೈಶಿಷ್ಟ್ಯಗಳೇನು? ಅವರನ್ನೇ ಮುಂದುವರಿಸಲು ಕಾರಣಗಳೇನು? ಅವರೇ ಏಕೆ ಮತ್ತ ಗುಜರಾತಿನ ಸಿಎಂ ಆಗಬೇಕು? ಈ ಎಲ್ಲ ಕಾರಣ ಗಮನಿಸಿಯೇ ಬಿಜೆಪಿ ಮುಖಂಡರು ವಿಜಯ್ ರೂಪಾನಿ ಅವರನ್ನು ಸಿಎಂ ಆಗಿ ಮುಂದುವರಿಸಲು ತೀರ್ಮಾನಿಸಿದ್ದಾರೆ. ಆ ಕಾರಣಗಳು ಇಲ್ಲಿವೆ.

  • ಗುಜರಾತ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಆನಂದಿಬೆನ್ ಬಳಿಕ ಅಧಿಕಾರ ವಹಿಸಿಕೊಂಡ ವಿಜಯ್ ರೂಪಾನಿ ಉತ್ತಮ ಆಡಳಿತ ನೀಡಿದ್ದಾರೆ.
  • ಉತ್ತಮ ಆಡಳಿತದ ಜತೆಗೆ ನರೇಂದ್ರ ಮೋದಿ ಅವರ ಕ್ಲೀನ್ ಇಮೇಜನ್ನು ಜನರಿಗೆ ನೀಡಿದ ಕೀರ್ತಿ ವಿಜಯ್ ರೂಪಾನಿ ಅವರದ್ದು. ಇವರ ವಿರುದ್ಧ ಯಾವುದೇ ಹಗರಣದ ಆರೋಪ ಕೇಳಿಬಂದಿಲ್ಲ.
  • ವಿಜಯ್ ರೂಪಾನಿ ಅವರು ನರೇಂದ್ರ ಮೋದಿ, ಆನಂದಿಬೆನ್, ಅಮಿತ್ ಶಾ ಅವರಿಗೆ ಆಪ್ತರು. ಅವರ ಮೊದಲ ಅವಧಿಯ ಆಡಳಿತ ಇವರೆಲ್ಲರ ಮೆಚ್ಚುಗೆ ಪಡೆದಿದೆ.
  • ವಿದ್ಯಾರ್ಥಿ ಜೀವನದಿಂದಲೂ ವಿಜಯ್ ರೂಪಾನಿ ಸಂಘಟನೆಯಲ್ಲಿ ತೊಡಗಿದವರು. ಸಂಘಟನಾ ಚತುರ ಎನಿಸಿದವರು. ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿ ಬಂದವರು.
  • ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಇವರು 1971 ಆರೆಸ್ಸೆಸ್, ಬಿಜೆಪಿ (ಆಗಿನ ಜನಸಂಘ) ಸೇರಿದ್ದು, ಅಂದಿನಿಂದ ಇಂದಿನವರೆಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search