• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕಿಸ್ತಾನದಿಂದ ಹಣ ಪಡೆದ ಆರೋಪ, ಗೀಲಾನಿ ಪುತ್ರನಿಗೆ ಎನ್ಐಎ ಸಮನ್ಸ್

TNN Correspondent Posted On December 24, 2017


  • Share On Facebook
  • Tweet It

ಶ್ರೀನಗರ: ಉಗ್ರ ಚಟುವಟಿಕೆಗೆ ಪ್ರೋತ್ಸಾಹ ನೀಡಲು ಪಾಕಿಸ್ತಾನದಿಂದ ಹಣ ಪಡೆದ ಆರೋಪದಲ್ಲಿ ಹುರ್ರಿಯತ್ ಮುಖ್ಯಸ್ಥ ಸಯ್ಯದ್ ಶಾ ಗೀಲಾನಿ ಕುಟುಂಬಕ್ಕೆ ಮತ್ತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶಾಕ್ ನೀಡಿದೆ.

ಪಾಕಿಸ್ತಾನದಿಂದ ಹಣ ಪಡೆದ ಆರೋಪದಲ್ಲಿ ಗೀಲಾನಿಯ ಕಿರಿಯ ಪುತ್ರ ನಾಸೀಂ ಗೀಲಾನಿಗೆ ಎನ್ಐಎ ಸಮನ್ಸ್ ಜಾರಿಗೊಳಿಸಿದೆ. ಅಲ್ಲದೆ ವಿಚಾರಣೆಗಾಗಿ ದೆಹಲಿಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಉಲ್ಲೇಖಿಸಿದೆ.

ಶ್ರೀನಗರದ ಶೇರ್ ಏ ಕಾಶ್ಮೀರ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ನಾಸೀಂ ಗೀಲಾನಿ ಸಹ ಪಾಕಿಸ್ತಾನದಿಂದ ಹಣ ಪಡೆದ ಆರೋಪ ಎದುರಿಸುತ್ತಿದ್ದು, ಮುಂದಿನ ವಾರವೇ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

ಈಗಾಗಲೇ ನಾಸೀಂ ಹಾಗೂ ಈತನ ಅಣ್ಣ ನಯೀಮ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಎರಡು ಬಾರಿ ವಿಚಾರಣೆ ನಡೆಸಿದೆ. ಈಗ ಮೂರನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಕಳೆದ ಮೇ ತಿಂಗಳಿನಿಂದಲೂ ಕಾಶ್ಮೀರದಲ್ಲಿ ಉಗ್ರರಿಂದ ಹಣ ಪಡೆದು ಉಗ್ರ ಚಟುವಟಿಕೆಗೆ ನೀಡಿದ ಆರೋಪದಲ್ಲಿ ಸೈಯದ್ ಶಾ ಗೀಲಾನಿ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಜೂನ್ ನಿಂದ ಹಲವರನ್ನು ತನಿಖೆಗೆ ಒಳಪಡಿಸುತ್ತಿದೆ. ಇದೇ ಪ್ರಕರಣದಲ್ಲಿ ಕಳೆದ ನವೆಂಬರ್ ಏಳರಂದು 9 ಜನರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರಲ್ಲದೆ, 36.5 ಕೋಟಿ ರೂಪಾಯಿ ಹಳೆಯ ನೋಟುಗಳನ್ನು ವಶಪಡಿಸಿಕೊಂಡಿದ್ದರು.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 5
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search