• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಿಂದ ಹಣ ಪಡೆದ ಆರೋಪ, ಗೀಲಾನಿ ಪುತ್ರನಿಗೆ ಎನ್ಐಎ ಸಮನ್ಸ್

TNN Correspondent Posted On December 24, 2017
0


0
Shares
  • Share On Facebook
  • Tweet It

ಶ್ರೀನಗರ: ಉಗ್ರ ಚಟುವಟಿಕೆಗೆ ಪ್ರೋತ್ಸಾಹ ನೀಡಲು ಪಾಕಿಸ್ತಾನದಿಂದ ಹಣ ಪಡೆದ ಆರೋಪದಲ್ಲಿ ಹುರ್ರಿಯತ್ ಮುಖ್ಯಸ್ಥ ಸಯ್ಯದ್ ಶಾ ಗೀಲಾನಿ ಕುಟುಂಬಕ್ಕೆ ಮತ್ತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶಾಕ್ ನೀಡಿದೆ.

ಪಾಕಿಸ್ತಾನದಿಂದ ಹಣ ಪಡೆದ ಆರೋಪದಲ್ಲಿ ಗೀಲಾನಿಯ ಕಿರಿಯ ಪುತ್ರ ನಾಸೀಂ ಗೀಲಾನಿಗೆ ಎನ್ಐಎ ಸಮನ್ಸ್ ಜಾರಿಗೊಳಿಸಿದೆ. ಅಲ್ಲದೆ ವಿಚಾರಣೆಗಾಗಿ ದೆಹಲಿಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಉಲ್ಲೇಖಿಸಿದೆ.

ಶ್ರೀನಗರದ ಶೇರ್ ಏ ಕಾಶ್ಮೀರ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ನಾಸೀಂ ಗೀಲಾನಿ ಸಹ ಪಾಕಿಸ್ತಾನದಿಂದ ಹಣ ಪಡೆದ ಆರೋಪ ಎದುರಿಸುತ್ತಿದ್ದು, ಮುಂದಿನ ವಾರವೇ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

ಈಗಾಗಲೇ ನಾಸೀಂ ಹಾಗೂ ಈತನ ಅಣ್ಣ ನಯೀಮ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಎರಡು ಬಾರಿ ವಿಚಾರಣೆ ನಡೆಸಿದೆ. ಈಗ ಮೂರನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಕಳೆದ ಮೇ ತಿಂಗಳಿನಿಂದಲೂ ಕಾಶ್ಮೀರದಲ್ಲಿ ಉಗ್ರರಿಂದ ಹಣ ಪಡೆದು ಉಗ್ರ ಚಟುವಟಿಕೆಗೆ ನೀಡಿದ ಆರೋಪದಲ್ಲಿ ಸೈಯದ್ ಶಾ ಗೀಲಾನಿ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಜೂನ್ ನಿಂದ ಹಲವರನ್ನು ತನಿಖೆಗೆ ಒಳಪಡಿಸುತ್ತಿದೆ. ಇದೇ ಪ್ರಕರಣದಲ್ಲಿ ಕಳೆದ ನವೆಂಬರ್ ಏಳರಂದು 9 ಜನರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರಲ್ಲದೆ, 36.5 ಕೋಟಿ ರೂಪಾಯಿ ಹಳೆಯ ನೋಟುಗಳನ್ನು ವಶಪಡಿಸಿಕೊಂಡಿದ್ದರು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search