• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ದಿಟ್ಟ ನಿರ್ಧಾರ, ದೇಶದಲ್ಲಿ ರೋಹಿಂಗ್ಯಾಗಳಿಗಿಲ್ಲ ಆಧಾರ

TNN Correspondent Posted On December 24, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೋಹಿಂಗ್ಯಾ ಮುಸ್ಲಿಂ ಅಕ್ರಮ ವಾಸಿಗಳು ದೇಶದ ಭದ್ರತೆಗೆ ಕಂಟಕ ಎಂಬ ದಿಟ್ಟ ನಿರ್ಧಾರ ರೋಹಿಂಗ್ಯಾಗಳಿಗೆ ಉದ್ಯೋಗವಿಲ್ಲದಂತೆ ಮಾಡಿದ್ದು, ರೋಹಿಂಗ್ಯಾ ಮುಸ್ಲಿಮರು ಮರಳಿ ತಮ್ಮ ಮೂಲ ದೇಶಕ್ಕೆ ಹೋಗಲು ಚಿಂತಿಸುತ್ತಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿವೆ.

ಕೇಂದ್ರ ಸರ್ಕಾರ ರೋಹಿಂಗ್ಯಾಗಳು ದೇಶದ ಭದ್ರತೆಗೆ ಕಂಟಕ ಎಂದು ಘೋಷಣೆ ಮಾಡಿರುವುದರಿಂದ ದೇಶದ ನಾನಾ ಕಡೆ ರೋಹಿಂಗ್ಯಾಗಳಿಗೆ ಜನರು ಉದ್ಯೋಗ ನೀಡುತ್ತಿಲ್ಲ. ಇದು ದೇಶದ ರಕ್ಷಣೆಗೆ ಅನುಕೂಲಕರವಾಗಿದ್ದು, ರೋಹಿಂಗ್ಯಾಗಳ ಗಡಿಪಾರಿಗೆ ಸದಾವಕಾಶವನ್ನು ಒದಗಿಸಿದೆ.

ಪಂಜಾಬ್, ದೆಹಲಿ, ಜಮ್ಮು ಕಾಶ್ಮೀರದಲ್ಲಿ ರೋಹಿಂಗ್ಯಾಗಳೆಂದು ಅನುಕಂಪದ ಉದ್ಯೋಗ ಪಡೆದು ದೇಶದ ವಿರುದ್ಧದ ಅಕ್ರಮ ಕಾರ್ಯಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದರು. ಇದೀಗ ಕೇಂದ್ರ ಸರ್ಕಾರ ರೋಹಿಂಗ್ಯಾಗಳು ದೇಶದ ರಕ್ಷಣೆಗೆ ಅಪಾಯ ಎಂಬ ಘೋಷಣೆಯಿಂದ ಯಾವುದೇ ಪ್ರದೇಶದಲ್ಲಿ ಅವರಿಗೆ ಉದ್ಯೋಗ ನೀಡಲು ಜನ ಹಿಂಜರಿಯುತ್ತಿದ್ದಾರೆ ಎನ್ನುತ್ತವೇ ವರದಿಗಳು.

ಕೇಂದ್ರ ಸರ್ಕಾರ ದೇಶದ ಎಲ್ಲ ರಾಜ್ಯಗಳಲ್ಲಿ ಇರುವ ರೋಹಿಂಗ್ಯಾಗಳ ಪಟ್ಟಿಯನ್ನು ನೀಡಿ ಎಂದು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದು, ರೋಹಿಂಗ್ಯಾಗಳನ್ನು ಗುರುತಿಸಲು ಅನುಕೂಲವಾಗಿದೆ. ಇದರಿಂದ ರೋಹಿಂಗ್ಯಾಗಳಿಗೆ ಭಾರತದಲ್ಲಿ ಸೂಕ್ತ ನೆಲೆ ಇಲ್ಲ, ತಾವು ತಮ್ಮ ದೇಶಕ್ಕೆ ಹೋಗಬೇಕು ಎಂಬ ಸಂದೇಶವನ್ನು ಕೇಂದ್ರ ಸರ್ಕಾರ ಪರೋಕ್ಷವಾಗಿ ನೀಡಿದೆ.

ಊಟ, ವಸತಿ, ಕೆಲಸ ಸಿಗದೇ ಸಂಕಷ್ಟಕ್ಕಿಡಾಗಿರುವ ರೋಹಿಂಗ್ಯಾಗಳು ದೇಶ ಬಿಡಲು ಚಿಂತಿಸುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೇ ಭಾಗಶಃ ಎಲ್ಲ ಉದ್ಯೋಗಳಲ್ಲಿ ಆಧಾರ ಕಾರ್ಡ್ ಕಡ್ಡಾಯ ಮಾಡಿದ್ದು, ರೋಹಿಂಗ್ಯಾಗಳನ್ನು ಪತ್ತೆ ಹಚ್ಚಲು ಅನುಕೂಲವಾಗಿದೆ. ಆಧಾರ ಇಲ್ಲದವರಿಗೆ ಉದ್ಯೋಗ ನೀಡಲು ಉದ್ಯಮಿಗಳು, ಸಾರ್ವಜನಿಕರು ಯೋಚಿಸುತ್ತಿರುವುದು ರೋಹಿಂಗ್ಯಾಗಳಿಗೆ ಮತ್ತೊಂದು ಹೊಡೆತ ನೀಡಿದೆ. ಒಂದು ವೇಳೆ ಅದು ಯಶಸ್ವಿಯಾದರೇ ಕೇಂದ್ರ ಸರ್ಕಾರದ ಈ ನಿರ್ಧಾರ ಯಶಸ್ವಿಯಾಗಲಿದ್ದು, ದೇಶದ ರಕ್ಷಣೆಗೆ ಕಂಟಕವಾಗಿರುವ ರೋಹಿಂಗ್ಯಾಗಳನ್ನು ದೇಶದಿಂದ ದೂರವಿಡಬಹುದು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search