• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇಂದ್ರದ ದಿಟ್ಟ ನಿರ್ಧಾರ, ದೇಶದಲ್ಲಿ ರೋಹಿಂಗ್ಯಾಗಳಿಗಿಲ್ಲ ಆಧಾರ

TNN Correspondent Posted On December 24, 2017


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೋಹಿಂಗ್ಯಾ ಮುಸ್ಲಿಂ ಅಕ್ರಮ ವಾಸಿಗಳು ದೇಶದ ಭದ್ರತೆಗೆ ಕಂಟಕ ಎಂಬ ದಿಟ್ಟ ನಿರ್ಧಾರ ರೋಹಿಂಗ್ಯಾಗಳಿಗೆ ಉದ್ಯೋಗವಿಲ್ಲದಂತೆ ಮಾಡಿದ್ದು, ರೋಹಿಂಗ್ಯಾ ಮುಸ್ಲಿಮರು ಮರಳಿ ತಮ್ಮ ಮೂಲ ದೇಶಕ್ಕೆ ಹೋಗಲು ಚಿಂತಿಸುತ್ತಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿವೆ.

ಕೇಂದ್ರ ಸರ್ಕಾರ ರೋಹಿಂಗ್ಯಾಗಳು ದೇಶದ ಭದ್ರತೆಗೆ ಕಂಟಕ ಎಂದು ಘೋಷಣೆ ಮಾಡಿರುವುದರಿಂದ ದೇಶದ ನಾನಾ ಕಡೆ ರೋಹಿಂಗ್ಯಾಗಳಿಗೆ ಜನರು ಉದ್ಯೋಗ ನೀಡುತ್ತಿಲ್ಲ. ಇದು ದೇಶದ ರಕ್ಷಣೆಗೆ ಅನುಕೂಲಕರವಾಗಿದ್ದು, ರೋಹಿಂಗ್ಯಾಗಳ ಗಡಿಪಾರಿಗೆ ಸದಾವಕಾಶವನ್ನು ಒದಗಿಸಿದೆ.

ಪಂಜಾಬ್, ದೆಹಲಿ, ಜಮ್ಮು ಕಾಶ್ಮೀರದಲ್ಲಿ ರೋಹಿಂಗ್ಯಾಗಳೆಂದು ಅನುಕಂಪದ ಉದ್ಯೋಗ ಪಡೆದು ದೇಶದ ವಿರುದ್ಧದ ಅಕ್ರಮ ಕಾರ್ಯಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದರು. ಇದೀಗ ಕೇಂದ್ರ ಸರ್ಕಾರ ರೋಹಿಂಗ್ಯಾಗಳು ದೇಶದ ರಕ್ಷಣೆಗೆ ಅಪಾಯ ಎಂಬ ಘೋಷಣೆಯಿಂದ ಯಾವುದೇ ಪ್ರದೇಶದಲ್ಲಿ ಅವರಿಗೆ ಉದ್ಯೋಗ ನೀಡಲು ಜನ ಹಿಂಜರಿಯುತ್ತಿದ್ದಾರೆ ಎನ್ನುತ್ತವೇ ವರದಿಗಳು.

ಕೇಂದ್ರ ಸರ್ಕಾರ ದೇಶದ ಎಲ್ಲ ರಾಜ್ಯಗಳಲ್ಲಿ ಇರುವ ರೋಹಿಂಗ್ಯಾಗಳ ಪಟ್ಟಿಯನ್ನು ನೀಡಿ ಎಂದು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದು, ರೋಹಿಂಗ್ಯಾಗಳನ್ನು ಗುರುತಿಸಲು ಅನುಕೂಲವಾಗಿದೆ. ಇದರಿಂದ ರೋಹಿಂಗ್ಯಾಗಳಿಗೆ ಭಾರತದಲ್ಲಿ ಸೂಕ್ತ ನೆಲೆ ಇಲ್ಲ, ತಾವು ತಮ್ಮ ದೇಶಕ್ಕೆ ಹೋಗಬೇಕು ಎಂಬ ಸಂದೇಶವನ್ನು ಕೇಂದ್ರ ಸರ್ಕಾರ ಪರೋಕ್ಷವಾಗಿ ನೀಡಿದೆ.

ಊಟ, ವಸತಿ, ಕೆಲಸ ಸಿಗದೇ ಸಂಕಷ್ಟಕ್ಕಿಡಾಗಿರುವ ರೋಹಿಂಗ್ಯಾಗಳು ದೇಶ ಬಿಡಲು ಚಿಂತಿಸುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೇ ಭಾಗಶಃ ಎಲ್ಲ ಉದ್ಯೋಗಳಲ್ಲಿ ಆಧಾರ ಕಾರ್ಡ್ ಕಡ್ಡಾಯ ಮಾಡಿದ್ದು, ರೋಹಿಂಗ್ಯಾಗಳನ್ನು ಪತ್ತೆ ಹಚ್ಚಲು ಅನುಕೂಲವಾಗಿದೆ. ಆಧಾರ ಇಲ್ಲದವರಿಗೆ ಉದ್ಯೋಗ ನೀಡಲು ಉದ್ಯಮಿಗಳು, ಸಾರ್ವಜನಿಕರು ಯೋಚಿಸುತ್ತಿರುವುದು ರೋಹಿಂಗ್ಯಾಗಳಿಗೆ ಮತ್ತೊಂದು ಹೊಡೆತ ನೀಡಿದೆ. ಒಂದು ವೇಳೆ ಅದು ಯಶಸ್ವಿಯಾದರೇ ಕೇಂದ್ರ ಸರ್ಕಾರದ ಈ ನಿರ್ಧಾರ ಯಶಸ್ವಿಯಾಗಲಿದ್ದು, ದೇಶದ ರಕ್ಷಣೆಗೆ ಕಂಟಕವಾಗಿರುವ ರೋಹಿಂಗ್ಯಾಗಳನ್ನು ದೇಶದಿಂದ ದೂರವಿಡಬಹುದು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search