• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತ್ರಿವಳಿ ತಲಾಖ್ ನಿಷೇಧ ವಿಧೇಯಕ ವಾಪಸ್ ಪಡೆಯಬೇಕು ಎಂದು ಹೇಳಿದ ಆ ಸಂಘಟನೆ ಯಾವುದು ಗೊತ್ತಾ?

TNN Correspondent Posted On December 25, 2017


  • Share On Facebook
  • Tweet It

ದೆಹಲಿ: ದೇಶಾದ್ಯಂತ ಮುಸ್ಲಿಂ ಮಹಿಳೆಯರಿಗೆ ಮಾರಕವಾಗಿರುವ ತ್ರಿವಳಿ ತಲಾಖ್ ನಿಷೇಧಿಸಬೇಕು ಎಂದು ಅಖಿಲ ಭಾರತ ಮುಸ್ಲಿಂ ಮಹಿಳಾ ಆಂದೋಲನ ಸಮಿತಿ ಸದಸ್ಯೆಯರು ಅಭಿಯಾನ ನಡೆಸಿದ ಫಲವಾಗಿ, ಸುಪ್ರೀಂ ಕೋರ್ಟೇ ತ್ರಿವಳಿ ತಲಾಖ್ ನಿಷೇಧಿಸಿದ್ದರೂ, ತಲಾಖ್ ಪರ ಮಾತನಾಡುವವರ ಸಂಖ್ಯೆ ಮಾತ್ರ ಕಡಿಮೆಯಿಲ್ಲ.

ಇದೇ ಸಾಲಿನಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ ಬಿ) ನಿಂತಿದ್ದು, ತ್ರಿವಳಿ ತಲಾಖ್ ವಿರುದ್ಧ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ತ್ರಿವಳಿ ತಲಾಖ್ ವಿಧೇಯಕ ವಾಪಸ್ ಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ಸಂಘಟನೆ ತೀರ್ಮಾನಿಸಿದೆ.

ಅದಕ್ಕಾಗಿ ದೆಹಲಿಯಲ್ಲಿ ಸಂಘಟನೆ ಸದಸ್ಯರು ಹಾಗೂ ಮುಖಂಡರೊಂದಿಗೆ ತುರ್ತು ಸಭೆ ನಡೆಸಿದ್ದು, ತ್ರಿವಳಿ ತಲಾಖ್ ನಿಷೇಧ ವಿಧೇಯಕ ಮಹಿಳೆಯರ ವಿರೋಧಿಯಾಗಿದೆ. ಇದರಿಂದ ವಿವಿಧ ಕುಟುಂಬಗಳು ನಾಶವಾಗಲಿವೆ. ಹಾಗಾಗಿ ವಿಧೇಯಕ ವಾಪಸ್ ಪಡೆಯುವಂತೆ ಮೋದಿ ಅವರಿಗೆ ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ದಿಢೀರ್ ಅಂತ ತ್ರಿವಳಿ ತಲಾಖ್ ನೀಡುವುದನ್ನು ಸಂಘಟನೆಯೂ ವಿರೋಧಿಸುತ್ತದೆ. ಆದರೆ ನಿಷೇಧ ವಿಧೇಯಕ ಮಂಡನೆ ವೇಳೆ ಸರ್ಕಾರ ಸಂಬಂಧಪಟ್ಟವರನ್ನು ಸಂಪರ್ಕಿಸಿಲ್ಲ. ತಲಾಖ್ ನೀಡಿದರೆ ಪರಿಹಾರ ಹಾಗೂ ಜೈಲು ಎರಡನ್ನೂ ವಿಧಿಸಲಾಗಿರುವುದು ಸಮಂಜಸ ಅಲ್ಲ. ಹಾಗಾಗಿ ವಾಪಸ್ ಪಡೆಯಬೇಕು ಎಂದು ಸಂಘಟನೆ ಮುಖಂಡರು ಹೇಳಿದ್ದಾರೆ.

ಆದರೆ ಲಕ್ಷಾಂತರ ಮುಸ್ಲಿಂ ಮಹಿಳೆಯರ ಒಕ್ಕೊರಲ ಧ್ವನಿಗೆ ಓಗೊಟ್ಟ ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ರದ್ದುಗೊಳಿಸಿ ಆದೇಶಿಸಿದೆ. ಇದೇ ದಿಸೆಯಲ್ಲಿ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧ ಕರಡು ರಚಿಸಿ ದೇಶದ ಎಲ್ಲ ರಾಜ್ಯಗಳಿಗೆ ರವಾನಿಸಿ, ಸಲಹೆ ಪಡೆಯಲು ಮುಂದಾಗಿದೆ. ಆದರೂ ಇಂಥ ಸಂಘಟನೆಗಳು ಮಾತ್ರ ತ್ರಿವಳಿ ತಲಾಖ್ ನಿಂದ ಕುಟುಂಬ ನಾಶವಾಗುತ್ತಿವೆ ಎಂದು ಬೊಬ್ಬೆ ಹಾಕುತ್ತಿವೆ.

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search