• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವಳಿ ತಲಾಖ್ ನಿಷೇಧ ವಿಧೇಯಕ ವಾಪಸ್ ಪಡೆಯಬೇಕು ಎಂದು ಹೇಳಿದ ಆ ಸಂಘಟನೆ ಯಾವುದು ಗೊತ್ತಾ?

TNN Correspondent Posted On December 25, 2017
0


0
Shares
  • Share On Facebook
  • Tweet It

ದೆಹಲಿ: ದೇಶಾದ್ಯಂತ ಮುಸ್ಲಿಂ ಮಹಿಳೆಯರಿಗೆ ಮಾರಕವಾಗಿರುವ ತ್ರಿವಳಿ ತಲಾಖ್ ನಿಷೇಧಿಸಬೇಕು ಎಂದು ಅಖಿಲ ಭಾರತ ಮುಸ್ಲಿಂ ಮಹಿಳಾ ಆಂದೋಲನ ಸಮಿತಿ ಸದಸ್ಯೆಯರು ಅಭಿಯಾನ ನಡೆಸಿದ ಫಲವಾಗಿ, ಸುಪ್ರೀಂ ಕೋರ್ಟೇ ತ್ರಿವಳಿ ತಲಾಖ್ ನಿಷೇಧಿಸಿದ್ದರೂ, ತಲಾಖ್ ಪರ ಮಾತನಾಡುವವರ ಸಂಖ್ಯೆ ಮಾತ್ರ ಕಡಿಮೆಯಿಲ್ಲ.

ಇದೇ ಸಾಲಿನಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ ಬಿ) ನಿಂತಿದ್ದು, ತ್ರಿವಳಿ ತಲಾಖ್ ವಿರುದ್ಧ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ತ್ರಿವಳಿ ತಲಾಖ್ ವಿಧೇಯಕ ವಾಪಸ್ ಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ಸಂಘಟನೆ ತೀರ್ಮಾನಿಸಿದೆ.

ಅದಕ್ಕಾಗಿ ದೆಹಲಿಯಲ್ಲಿ ಸಂಘಟನೆ ಸದಸ್ಯರು ಹಾಗೂ ಮುಖಂಡರೊಂದಿಗೆ ತುರ್ತು ಸಭೆ ನಡೆಸಿದ್ದು, ತ್ರಿವಳಿ ತಲಾಖ್ ನಿಷೇಧ ವಿಧೇಯಕ ಮಹಿಳೆಯರ ವಿರೋಧಿಯಾಗಿದೆ. ಇದರಿಂದ ವಿವಿಧ ಕುಟುಂಬಗಳು ನಾಶವಾಗಲಿವೆ. ಹಾಗಾಗಿ ವಿಧೇಯಕ ವಾಪಸ್ ಪಡೆಯುವಂತೆ ಮೋದಿ ಅವರಿಗೆ ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ದಿಢೀರ್ ಅಂತ ತ್ರಿವಳಿ ತಲಾಖ್ ನೀಡುವುದನ್ನು ಸಂಘಟನೆಯೂ ವಿರೋಧಿಸುತ್ತದೆ. ಆದರೆ ನಿಷೇಧ ವಿಧೇಯಕ ಮಂಡನೆ ವೇಳೆ ಸರ್ಕಾರ ಸಂಬಂಧಪಟ್ಟವರನ್ನು ಸಂಪರ್ಕಿಸಿಲ್ಲ. ತಲಾಖ್ ನೀಡಿದರೆ ಪರಿಹಾರ ಹಾಗೂ ಜೈಲು ಎರಡನ್ನೂ ವಿಧಿಸಲಾಗಿರುವುದು ಸಮಂಜಸ ಅಲ್ಲ. ಹಾಗಾಗಿ ವಾಪಸ್ ಪಡೆಯಬೇಕು ಎಂದು ಸಂಘಟನೆ ಮುಖಂಡರು ಹೇಳಿದ್ದಾರೆ.

ಆದರೆ ಲಕ್ಷಾಂತರ ಮುಸ್ಲಿಂ ಮಹಿಳೆಯರ ಒಕ್ಕೊರಲ ಧ್ವನಿಗೆ ಓಗೊಟ್ಟ ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ರದ್ದುಗೊಳಿಸಿ ಆದೇಶಿಸಿದೆ. ಇದೇ ದಿಸೆಯಲ್ಲಿ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧ ಕರಡು ರಚಿಸಿ ದೇಶದ ಎಲ್ಲ ರಾಜ್ಯಗಳಿಗೆ ರವಾನಿಸಿ, ಸಲಹೆ ಪಡೆಯಲು ಮುಂದಾಗಿದೆ. ಆದರೂ ಇಂಥ ಸಂಘಟನೆಗಳು ಮಾತ್ರ ತ್ರಿವಳಿ ತಲಾಖ್ ನಿಂದ ಕುಟುಂಬ ನಾಶವಾಗುತ್ತಿವೆ ಎಂದು ಬೊಬ್ಬೆ ಹಾಕುತ್ತಿವೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search