• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತ್ರಿವಳಿ ತಲಾಖ್ ನಿಷೇಧ ವಿಧೇಯಕ ವಾಪಸ್ ಪಡೆಯಬೇಕು ಎಂದು ಹೇಳಿದ ಆ ಸಂಘಟನೆ ಯಾವುದು ಗೊತ್ತಾ?

TNN Correspondent Posted On December 25, 2017


  • Share On Facebook
  • Tweet It

ದೆಹಲಿ: ದೇಶಾದ್ಯಂತ ಮುಸ್ಲಿಂ ಮಹಿಳೆಯರಿಗೆ ಮಾರಕವಾಗಿರುವ ತ್ರಿವಳಿ ತಲಾಖ್ ನಿಷೇಧಿಸಬೇಕು ಎಂದು ಅಖಿಲ ಭಾರತ ಮುಸ್ಲಿಂ ಮಹಿಳಾ ಆಂದೋಲನ ಸಮಿತಿ ಸದಸ್ಯೆಯರು ಅಭಿಯಾನ ನಡೆಸಿದ ಫಲವಾಗಿ, ಸುಪ್ರೀಂ ಕೋರ್ಟೇ ತ್ರಿವಳಿ ತಲಾಖ್ ನಿಷೇಧಿಸಿದ್ದರೂ, ತಲಾಖ್ ಪರ ಮಾತನಾಡುವವರ ಸಂಖ್ಯೆ ಮಾತ್ರ ಕಡಿಮೆಯಿಲ್ಲ.

ಇದೇ ಸಾಲಿನಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ ಬಿ) ನಿಂತಿದ್ದು, ತ್ರಿವಳಿ ತಲಾಖ್ ವಿರುದ್ಧ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ತ್ರಿವಳಿ ತಲಾಖ್ ವಿಧೇಯಕ ವಾಪಸ್ ಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ಸಂಘಟನೆ ತೀರ್ಮಾನಿಸಿದೆ.

ಅದಕ್ಕಾಗಿ ದೆಹಲಿಯಲ್ಲಿ ಸಂಘಟನೆ ಸದಸ್ಯರು ಹಾಗೂ ಮುಖಂಡರೊಂದಿಗೆ ತುರ್ತು ಸಭೆ ನಡೆಸಿದ್ದು, ತ್ರಿವಳಿ ತಲಾಖ್ ನಿಷೇಧ ವಿಧೇಯಕ ಮಹಿಳೆಯರ ವಿರೋಧಿಯಾಗಿದೆ. ಇದರಿಂದ ವಿವಿಧ ಕುಟುಂಬಗಳು ನಾಶವಾಗಲಿವೆ. ಹಾಗಾಗಿ ವಿಧೇಯಕ ವಾಪಸ್ ಪಡೆಯುವಂತೆ ಮೋದಿ ಅವರಿಗೆ ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ದಿಢೀರ್ ಅಂತ ತ್ರಿವಳಿ ತಲಾಖ್ ನೀಡುವುದನ್ನು ಸಂಘಟನೆಯೂ ವಿರೋಧಿಸುತ್ತದೆ. ಆದರೆ ನಿಷೇಧ ವಿಧೇಯಕ ಮಂಡನೆ ವೇಳೆ ಸರ್ಕಾರ ಸಂಬಂಧಪಟ್ಟವರನ್ನು ಸಂಪರ್ಕಿಸಿಲ್ಲ. ತಲಾಖ್ ನೀಡಿದರೆ ಪರಿಹಾರ ಹಾಗೂ ಜೈಲು ಎರಡನ್ನೂ ವಿಧಿಸಲಾಗಿರುವುದು ಸಮಂಜಸ ಅಲ್ಲ. ಹಾಗಾಗಿ ವಾಪಸ್ ಪಡೆಯಬೇಕು ಎಂದು ಸಂಘಟನೆ ಮುಖಂಡರು ಹೇಳಿದ್ದಾರೆ.

ಆದರೆ ಲಕ್ಷಾಂತರ ಮುಸ್ಲಿಂ ಮಹಿಳೆಯರ ಒಕ್ಕೊರಲ ಧ್ವನಿಗೆ ಓಗೊಟ್ಟ ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ರದ್ದುಗೊಳಿಸಿ ಆದೇಶಿಸಿದೆ. ಇದೇ ದಿಸೆಯಲ್ಲಿ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧ ಕರಡು ರಚಿಸಿ ದೇಶದ ಎಲ್ಲ ರಾಜ್ಯಗಳಿಗೆ ರವಾನಿಸಿ, ಸಲಹೆ ಪಡೆಯಲು ಮುಂದಾಗಿದೆ. ಆದರೂ ಇಂಥ ಸಂಘಟನೆಗಳು ಮಾತ್ರ ತ್ರಿವಳಿ ತಲಾಖ್ ನಿಂದ ಕುಟುಂಬ ನಾಶವಾಗುತ್ತಿವೆ ಎಂದು ಬೊಬ್ಬೆ ಹಾಕುತ್ತಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search