• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಂದಿನ ವರ್ಷವೂ ಜಿಡಿಪಿ ನೆಗೆತ, ಮೋದಿ ವಿರೋಧಿಗಳಿಗೆ ಇರಿತ

TNN Correspondent Posted On December 25, 2017


  • Share On Facebook
  • Tweet It

ದೆಹಲಿ: ನೋಟು ನಿಷೇಧ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಯಿಂದಲೇ ದೇಶದ ವಿತ್ತೀಯ ಸ್ಥಿತಿ ಪಾತಾಳ ಕಂಡಿದೆ. ದೇಶದ ವಿತ್ತ ವ್ಯವಸ್ಥೆ ಹಾಳಾಗುತ್ತಿದೆ. ಇದಕ್ಕೆ ಉದಾಹರಣೆ ಎಂದರೆ ದೇಶದ ಜಿಪಿಡಿ ದರದ ಕುಸಿತ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದವರಿಗೆ ಕಹಿ ಸುದ್ದಿಯೊಂದು ಕಾದಿದೆ.

ಇತ್ತೀಚೆಗಷ್ಟೇ ದೇಶದ ಜಿಡಿಪಿ ದರ ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಜಪಾನಿನ ಸಂಸ್ಥೆಯೊಂದು ಭಾರತದ ಆರ್ಥಿಕ ಸ್ಥಿತಿ ಬಗ್ಗೆ ಅವಲೋಕನ ನಡೆಸಿದ್ದು, 2018ರಲ್ಲೂ ಭಾರತದ ಜಿಡಿಪಿ ಔನ್ನತ್ಯಕ್ಕೇರಲಿದೆ. ಜಿಡಿಪಿ ದರ ಶೇ.7.5ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದೆ.

ಜಪಾನಿನ ವಿತ್ತೀಯ ಸೇವೆಗಳ ಪ್ರಧಾನ ಸಂಸ್ಥೆ ನೊಮುರಾದ ಕಾಂಪೋಸಿಟ್ ಲೀಡಿಂಗ್ ಸೂಚ್ಯಂಕದಲ್ಲಿ ಈ ಅಂಶ ಬಹಿರಂಗವಾಗಿದೆ. ಭಾರತದಲ್ಲಿನ ಉತ್ಪಾದನೆ ಹಾಗೂ ಜಾಗತಿಕ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಭಾರತದ ಜಿಡಿಪಿ ಹೆಚ್ಚಾಗಲಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಬಿಡುಗಡೆಯಾಗಿದ್ದ ವಿತ್ತೀಯ ವರ್ಷದ ತ್ರೈಮಾಸಿಕ ವರದಿಯಲ್ಲಿ ಭಾರತದ ಜಿಡಿಪಿ ಶೇ.6.3ರಿಂದ ಶೇ.6.7ಕ್ಕೆ ತಲುಪಿ, ದೇಶದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಮುನ್ಸೂಚನೆ ನೀಡಿತ್ತು.

ಆದರೆ ಇದಕ್ಕೂ ಮೊದಲು ಜಿಡಿಪಿ ದರದಲ್ಲಿ ತುಸು ಕುಸಿತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿಗರು, ಎಡಬಿಡಂಗಿಗಳು ಮೋದಿ ಅವರ ನಿರ್ಧಾರಗಳಿಂದಲೇ ದೇಶದ ಜಿಡಿಪಿ ಕುಸಿಯುತ್ತಿದೆ ಎಂದು ಟೀಕಿಸಿದ್ದರು. ಆದರೆ ಭಾರತದ ಆರ್ಥಿಕ ಬೆಳವಣಿಗೆ ವೇಗವಾಗಿ ಆಗುತ್ತಿದ್ದು, ಇವರೆಲ್ಲರ ಬಾಯಿಗೆ ಬೀಗ ಜಡಿದಂತಾಗಿದೆ.

  • Share On Facebook
  • Tweet It


- Advertisement -


Trending Now
ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
Tulunadu News December 5, 2023
ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
Tulunadu News December 5, 2023
Leave A Reply

  • Recent Posts

    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
  • Popular Posts

    • 1
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 2
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 3
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 4
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 5
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search