• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1975ರ ತುರ್ತು ಪರಿಸ್ಥಿತಿಯಲ್ಲಿ ಜೈಲು ಪಾಲಾದವರಿಗೆ ಸ್ವಾತಂತ್ರ ಹೋರಾಟಗಾರರ ಪಟ್ಟ

TNN Correspondent Posted On December 25, 2017
0


0
Shares
  • Share On Facebook
  • Tweet It

ಮುಂಬೈ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಧರ್ಪದಿಂದ ದೇಶದ ಇತಿಹಾಸದಲ್ಲೇ ಕರಾಳ ದಿನಗಳಾಗಿದ್ದ 1975ರ ತುರ್ತು ಪರಿಸ್ಥಿತಿ ವಿರೋಧಿಸಿ, ಹೋರಾಡಿ, ಜೈಲುವಾಸ ಅನುಭವಿಸಿದವರಿಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಥಾನ ನೀಡಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ. ಈ ಚಿಂತನೆಗೆ ಬಿಜೆಪಿ ಮತ್ತು ಶಿವಸೇನೆಯ ಎಲ್ಲ ಶಾಸಕರ, ಮುಖಂಡರ ಬೆಂಬಲವೂ ವ್ಯಕ್ತವಾಗಿದೆ.

ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾಹಿತಿ ನೀಡಿದ್ದು, ‘2018ರ ಜನವರಿಯಲ್ಲಿ ನಡೆಯುವ ಪ್ರಥಮ ಸಚಿವ ಸಂಪುಟದಲ್ಲಿ ಚರ್ಚಿಸಿ, ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಭಾರತದ ಇತಿಹಾಸದಲ್ಲೇ ಸರ್ವಾಧಿಕಾರದ ಆಡಳಿತ ನಡೆಸಿ, ಜನರ ಸ್ವಾತಂತ್ರ್ಯವನ್ನೇ ಕಸಿದುಕೊಂಡಿದ್ದ 1975ರ ಕರಾಳ ದಿನಗಳಲ್ಲಿ, ಲಕ್ಷಾಂತರ ಜನರು ಜೈಲುವಾಸ ಅನುಭವಿಸಿದ್ದರು. ಆದ್ದರಿಂದ ಈ ಮೂಲಕ ಅವರೆಲ್ಲರಿಗೂ ಗೌರವ ನೀಡುವ ಉದ್ದೇಶ ಹೊಂದಲಾಗಿದೆ. ಅಲ್ಲದೇ ದೇಶದ ಪ್ರಜಾಪ್ರಭುತ್ವದ ಮಹತ್ವ ಸಾರಲು ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎನ್ನಲಾಗಿದೆ. ದೇಶದ 19 ರಾಜ್ಯಗಳಲ್ಲೂ ಈ ಚಿಂತನೆ ಜಾರಿ ತರಲು ಉದ್ದೇಶಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಈಗಾಗಲೇ 1975ರ ತುರ್ತು ಪರಿಸ್ಥಿತಿಯಲ್ಲಿ ಹೋರಾಟ ಮಾಡಿ ಜೈಲುವಾಸ ಅನುಭವಿಸಿದವರ ಸಮೀಕ್ಷೆ ಮತ್ತು ಹೋರಾಟಗಾರರನ್ನು ಗುರುತಿಸುವ ಮಹತ್ತರ ಕಾರ್ಯ ಚಾಲನೆಯಲ್ಲಿದ್ದು, ಹೋರಾಟಗಾರರಿಗೆ ಸ್ವಾಂತಂತ್ರ್ಯ ಹೋರಾಟಗಾರರ ಗೌರವಯುತ ಸ್ಥಾನ ನೀಡಲಾಗುವುದು ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಇದು ಬಿಜೆಪಿ ಸರ್ಕಾರ ರಾಜಕೀಯ. ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಕೋಟ್ಯಂತರ ಜನರು ಜೀವ ನೀಡಿದ್ದಾರೆ. ಆದರೆ ದೇಶದ ಆಂತರಿಕ ಸಮಸ್ಯೆ ವಿರುದ್ಧ ಹೋರಾಡಿದವರು ಸ್ವಾತಂತ್ರ್ಯ ಹೋರಾಟಗಾರರಾಗಲು ಅಸಾಧ್ಯ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search