• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1975ರ ತುರ್ತು ಪರಿಸ್ಥಿತಿಯಲ್ಲಿ ಜೈಲು ಪಾಲಾದವರಿಗೆ ಸ್ವಾತಂತ್ರ ಹೋರಾಟಗಾರರ ಪಟ್ಟ

TNN Correspondent Posted On December 25, 2017
0


0
Shares
  • Share On Facebook
  • Tweet It

ಮುಂಬೈ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಧರ್ಪದಿಂದ ದೇಶದ ಇತಿಹಾಸದಲ್ಲೇ ಕರಾಳ ದಿನಗಳಾಗಿದ್ದ 1975ರ ತುರ್ತು ಪರಿಸ್ಥಿತಿ ವಿರೋಧಿಸಿ, ಹೋರಾಡಿ, ಜೈಲುವಾಸ ಅನುಭವಿಸಿದವರಿಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಥಾನ ನೀಡಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ. ಈ ಚಿಂತನೆಗೆ ಬಿಜೆಪಿ ಮತ್ತು ಶಿವಸೇನೆಯ ಎಲ್ಲ ಶಾಸಕರ, ಮುಖಂಡರ ಬೆಂಬಲವೂ ವ್ಯಕ್ತವಾಗಿದೆ.

ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾಹಿತಿ ನೀಡಿದ್ದು, ‘2018ರ ಜನವರಿಯಲ್ಲಿ ನಡೆಯುವ ಪ್ರಥಮ ಸಚಿವ ಸಂಪುಟದಲ್ಲಿ ಚರ್ಚಿಸಿ, ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಭಾರತದ ಇತಿಹಾಸದಲ್ಲೇ ಸರ್ವಾಧಿಕಾರದ ಆಡಳಿತ ನಡೆಸಿ, ಜನರ ಸ್ವಾತಂತ್ರ್ಯವನ್ನೇ ಕಸಿದುಕೊಂಡಿದ್ದ 1975ರ ಕರಾಳ ದಿನಗಳಲ್ಲಿ, ಲಕ್ಷಾಂತರ ಜನರು ಜೈಲುವಾಸ ಅನುಭವಿಸಿದ್ದರು. ಆದ್ದರಿಂದ ಈ ಮೂಲಕ ಅವರೆಲ್ಲರಿಗೂ ಗೌರವ ನೀಡುವ ಉದ್ದೇಶ ಹೊಂದಲಾಗಿದೆ. ಅಲ್ಲದೇ ದೇಶದ ಪ್ರಜಾಪ್ರಭುತ್ವದ ಮಹತ್ವ ಸಾರಲು ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎನ್ನಲಾಗಿದೆ. ದೇಶದ 19 ರಾಜ್ಯಗಳಲ್ಲೂ ಈ ಚಿಂತನೆ ಜಾರಿ ತರಲು ಉದ್ದೇಶಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಈಗಾಗಲೇ 1975ರ ತುರ್ತು ಪರಿಸ್ಥಿತಿಯಲ್ಲಿ ಹೋರಾಟ ಮಾಡಿ ಜೈಲುವಾಸ ಅನುಭವಿಸಿದವರ ಸಮೀಕ್ಷೆ ಮತ್ತು ಹೋರಾಟಗಾರರನ್ನು ಗುರುತಿಸುವ ಮಹತ್ತರ ಕಾರ್ಯ ಚಾಲನೆಯಲ್ಲಿದ್ದು, ಹೋರಾಟಗಾರರಿಗೆ ಸ್ವಾಂತಂತ್ರ್ಯ ಹೋರಾಟಗಾರರ ಗೌರವಯುತ ಸ್ಥಾನ ನೀಡಲಾಗುವುದು ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಇದು ಬಿಜೆಪಿ ಸರ್ಕಾರ ರಾಜಕೀಯ. ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಕೋಟ್ಯಂತರ ಜನರು ಜೀವ ನೀಡಿದ್ದಾರೆ. ಆದರೆ ದೇಶದ ಆಂತರಿಕ ಸಮಸ್ಯೆ ವಿರುದ್ಧ ಹೋರಾಡಿದವರು ಸ್ವಾತಂತ್ರ್ಯ ಹೋರಾಟಗಾರರಾಗಲು ಅಸಾಧ್ಯ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search