• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಯುವ ಶಾಸಕನಾಗಿದ್ದಾಗ ವಿಧಾನಸಭೆಗೆ ಬಿಡದೇ ದರ್ಪ ಮೆರೆದ ಕಾಂಗ್ರೆಸ್ಸಿಗರ ಎದುರೇ ಸಿಎಂ ಗದ್ದುಗೆ ಏರಿದ ಜೈರಾಮ್ ಠಾಕೂರ್

ತೇಜಸ್ವಿಪ್ರತಾಪ್, ಮಂಗಳೂರು Posted On December 25, 2017
0


0
Shares
  • Share On Facebook
  • Tweet It

ಅದು 2013ರ ಮಳೆಗಾಲದ ಸಮಯ, ಹಿಮಾಚಲದ ಶಿಮ್ಲಾ ಹಸುರು ಮೈತುಂಬಿಕೊಂಡು ನಿಂತಿತ್ತು. ಅದೇ ವೇಳೆ ಕಾಂಗ್ರೆಸ್ ನ ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿತ್ತು. ದೇಶದ ನಾನಾ ರಾಜ್ಯಗಳ ಘಟಾನುಘಟಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ನಾಲ್ಕನೇ ಭಾರಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ವೀರಭದ್ರ ಸಿಂಗ್ ಕಾಂಗ್ರೆಸ್ ರಾಷ್ಟ್ರೀಯ ಸಮಾವೇಶವನ್ನು ಅದ್ಧೂರಿಯಾಗಿ ಏರ್ಪಡಿಸಿ, ಹೈ ಕಮಾಂಡ್ ಗೆ ಧನ್ಯತೆ ಅರ್ಪಿಸಿದ್ದರು. ಸೋನಿಯಾ ಗಾಂಧಿ ನೇತೃತ್ವದ ಆ ಸಮಾವೇಶದಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ, ದಿಗ್ವಿಜಯ್ ಸಿಂಗ್, ಅಶೋಕ್ ಗೆಹ್ಲೋಟ್, ಶೀಲಾ ದಿಕ್ಷಿತ್, ವಿಲಾಸರಾವ್ ದೇಶಮುಖ್ ಮತ್ತು ಅಮರಿಂದರ್ ಸಿಂಗ್ ಸೇರಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರ ಸಮಾಗಮವೇ ಆಗಿತ್ತು.

ಅತ್ತ ಕಾಂಗ್ರೆಸ್ ಅದ್ಧೂರಿ, ವೈಭವೋಪೇತ ಕಾರ್ಯಕ್ರಮ ನಡೆಯುತ್ತಿದ್ದರೇ, ಸಮಾವೇಶದ ಅನತಿ ದೂರದಲ್ಲೇ ಶಾಸಕನಾಗಿ ಆಯ್ಕೆಯಾಗಿದ್ದ ಯುವಕನೊಬ್ಬನಿಗೆ ವಿಧಾನಸಭೆ ಕಟ್ಟದೊಳಗೆ ಹೋಗಲು ಬಿಡಲಿಲ್ಲ. ಇನ್ನು ಅದೇ ವೇಳೆ ಅತ್ತ ಆಗಮಿಸಿದ್ದ ಸೋನಿಯಾ ಗಾಂಧಿ, ವೀರಭದ್ರ ಸಿಂಗ್ ರನ್ನು ಒಳಬಿಟ್ಟ ಬೆಂಗಾವಲು ಪಡೆಯುವರು ಆ ಯುವ ಶಾಸಕನನ್ನು ಅರ್ಧ ಗಂಟೆ ಕಾಯಿಸಿದರು.

ಆಗ ಯುವ ಶಾಸಕ ‘ನಾನು ಶಾಸಕ, ನನಗೇಕೆ ವಿಧಾನಸಭೆ ಕಚೇರಿಯೊಳಗೆ ಬಿಡುತ್ತಿಲ್ಲ. ಇದು ಪ್ರಜಾಪ್ರಭುತ್ವ. ಅವರೇನು ರಾಜ್ಯಾಡಳಿತದಲ್ಲಿದ್ದಾರೆ. ಈ ದರಿದ್ರ ಸಂಸ್ಕೃತಿಗೆ ತಡೆ ಹಾಕಬೇಕು ಎಂದು ಅಲ್ಲೇ ಇದ್ದ ವರದಿಗಾರರ ಎದುರು ಆಕ್ರೋಶ ವ್ಯಕ್ತಪಡಿಸಿದ್ದ.

‘ಆ ದರಿದ್ರ ಸಂಸ್ಕೃತಿಗೆ ತಡೆ ಹಾಕಬೇಕಾದರೆ ನೀನು ಸಿಎಂ ಆಗಬೇಕು’ ಎಂದು ಹೀಯಾಳಿಸಿ, ಪುಕಟ್ಟೆ ಸಲಹೆ ನೀಡಿದ್ದರು ಸಂಬಂಧಿಕರೊಬ್ಬರು. ಯುವಕ ಮುಗುಳು ನಗೆ ಬೀರಿ ಸುಮ್ಮನಾಗಿದ್ದ.

ಅಂದು ಯುವಕನಾಗಿದ್ದ ಆ ಯುವಕನಿಗೆ ಇದೀಗ 52 ವರ್ಷ ವಯಸ್ಸಾಗಿರುವ ಜೈರಾಮ್ ಠಾಕೂರ್ ಇಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ. ಶಾಸಕನಾಗಿದ್ದರು ವಿಧಾನ ಸಭೆ ಕಚೇರಿಯೊಳಗೆ ಬಿಡದೇ ದಾಷ್ಟ್ರ್ಯ ಮೆರೆದ ಕಾಂಗ್ರೆಸ್ ನ ದರ್ಪಾಡಳಿತವನ್ನು ಮೆಟ್ಟಿ ನಿಂತು ಅದೇ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು ಪ್ರಜಾಪ್ರಭುತ್ವಕ್ಕೆ ಜಯವೇ ಸರಿ.

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಡ ಕುಟುಂಬದಿಂದ ಹೋರಾಟದ ಮೂಲಕವೇ ಮುನ್ನೆಲೆಗೆ ಬಂದಿರುವ ಜೈರಾಮ್ ಠಾಕೂರ್ ರಾಜಕೀಯ ಜೀವನವೇ ಅದ್ಭುತ. 1965ರಲ್ಲಿ ಬಡ, ರೈತ ಕುಟುಂಬದಲ್ಲಿ ಜನಿಸಿರುವ ಜೈರಾಮ್ ಅವರಿಗೆ ಇಬ್ಬರು ಸಹೋದರರು ಮತ್ತು ಇಬ್ಬರು ಸಹೋದರಿಯರಿದ್ದಾರೆ. ಇಡೀ ಕುಟುಂಬವನ್ನು ಜೈ ರಾಮ್ ಅವರ ತಂದೆ ಕಷ್ಟದಲ್ಲೇ ಸಲಹಿದ್ದರು. ಜೈರಾಮ್ ಶಿಕ್ಷಣಕ್ಕೆ ಅವರ ಅಪ್ಪ ನಿತ್ಯ ಕೃಷಿ ಮಾಡಿ ಸಹಾಯ ಮಾಡಿದ್ದರು. ಚಂಡಿಗಡದ ಪಂಜಾಬ್ ವಿವಿಯಿಂದ ಎಂಎ ಪಡೆದ ನಂತರ ಕೃಷಿಗೆ ಸಹಾಯ ಮಾಡಲು ಕುಟುಂಬಸ್ಥರು ಆಹ್ವಾನ ನೀಡಿದ್ದರು.

ಆದರೆ ಠಾಕೂರ್ ತಮ್ಮ ಕುಟುಂಬಸ್ಥರ ವಿರೋಧದ ಮಧ್ಯೆ 1993ರಲ್ಲಿ ಶಾಸಕ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿ ಉತ್ತಮ ಪೈಪೋಟಿ ನೀಡಿ ಸೋಲಂಡರು. 1998ರ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧಿಸಿ ವಿಜಯಿಯಾಗಿದ್ದರು. ನಂತರ ಅವರ ವಿಜಯ ಯಾತ್ರೆಯನ್ನು ತಡೆದವರಿಲ್ಲ. ಐದು ಭಾರಿ ಒಂದೇ ಕ್ಷೇತ್ರದಿಂದ ನಿರಂತರವಾಗಿ ವಿಜಯಶಾಲಿಯಾಗಿದ್ದಾರೆ.

ಹಲವು ಮಹತ್ತರ ಘಟಗಳನ್ನು ಎದುರಿಸಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ, ಸಚಿವರಾಗಿ, ಕಾರ್ಯನಿರ್ವಹಿಸಿರುವ ಜೈರಾಮ್ ಠಾಕೂರ್ ತಳಮಟ್ಟದ ಜನರ ನೋವು ಅರಿತವರು. ಇವರ ಪತ್ನಿ ಕರ್ನಾಟಕದ ಶಿವಮೊಗ್ಗದ ಡಾ.ಸಾಧನಾ ಕನ್ನಡತಿ ಎಂಬುದು ಹೆಮ್ಮೆಯಾದರೇ, ಅವರೂ  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ಕಾರ್ಯಕರ್ತೆಯಾಗಿ ಹೋರಾಟದ ಹಿನ್ನೆಲೆಯಲ್ಲಿ ಬಂದವರು.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
ತೇಜಸ್ವಿಪ್ರತಾಪ್, ಮಂಗಳೂರು July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
ತೇಜಸ್ವಿಪ್ರತಾಪ್, ಮಂಗಳೂರು July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search