• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊನೆಗೂ ಮಣಿದ ಪಾಕಿಸ್ತಾನ, ಕುಲಭೂಷಣ ಜಾಧವ್ ಅವರಿಗೆ ರಾಯಭಾರ ಒಪ್ಪಿಗೆ

TNN Correspondent Posted On December 25, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಬೇಹುಗಾರಿಕೆ ಆರೋಪದಲ್ಲಿ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನ ಜಾಧವ್ ಅವರ ತಾಯಿ ಹಾಗೂ ಪತ್ನಿಯ ಭೇಟಿಗೆ ಸೋಮವಾರ ಅವಕಾಶ ನೀಡಿರುವ ಬೆನ್ನಲ್ಲೇ ರಾಯಭಾರ ಒಪ್ಪಿಗೆ ನೀಡುವುದಾಗಿ ಸಹ ತೀರ್ಮಾನಿಸಿದೆ.

ರಾಯಭಾರ ಒಪ್ಪಿಗೆಗೆ ಭಾರತ ಇದುವರೆಗೆ ಸಲ್ಲಿಸಿದ್ದ 22 ಮನವಿ ತಿರಸ್ಕರಿಸಿದ್ದ ಪಾಕಿಸ್ತಾನ ಕೊನೆಗೂ ಮಣಿದು ಸೋಮವಾರ ರಾಯಭಾರ ಅನುಮತಿಗೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಒಪ್ಪಿಗೆ ಸೂಚಿಸಿದೆ.

ಅತ್ತ ಜಾಧವ್ ಅವರ ಪತ್ನಿ ಹಾಗೂ ತಾಯಿ ಪಾಕಿಸ್ತಾನ ತಲುಪುವ ವಿಮಾನ ತಡವಾಗಿದ್ದು,ಇಬ್ಬರೂ ಪಾಕಿಸ್ತಾನದಲ್ಲಿ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಜಾಧವ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ವಿರುದ್ಧ ಬೇಹುಗಾರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಕುಲಭೂಷಣ ಜಾಧವ್ ಅವರನ್ನು ಬಂಧಿಸಿ ಉದ್ಧಟತನ ಮೆರೆದಿದ್ದಲ್ಲದೆ, ಅವರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಆದರೆ ಭಾರತ ಪ್ರಕರಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಕೊಂಡೊಯ್ದು ಸಮರ್ಪಕವಾಗಿ ವಾದ ಮಾಡಿತ್ತಲ್ಲದೇ, ಅಂತಾರಾಷ್ಟ್ರೀಯ ನ್ಯಾಯಾಲಯ ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಮಾಡಿತ್ತು.

ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಬಳಿಕ ಮುಖಭಂಗ ಅನುಭವಿಸಿದ್ದ ಪಾಕಿಸ್ತಾನ ಮೆತ್ತಗಾಗಿದ್ದು, ಜಾಧವ್ ಅವರ ಪತ್ನಿ ಹಾಗೂ ತಾಯಿಗೆ ಭೇಟಿ ನೀಡಲು ಅವಕಾಶ ನೀಡಿತ್ತು. ಈಗ ರಾಯಭಾರ ಒಪ್ಪಿಗೆ ಸಹ ನೀಡಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search