• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊನೆಗೂ ಮಣಿದ ಪಾಕಿಸ್ತಾನ, ಕುಲಭೂಷಣ ಜಾಧವ್ ಅವರಿಗೆ ರಾಯಭಾರ ಒಪ್ಪಿಗೆ

TNN Correspondent Posted On December 25, 2017
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಬೇಹುಗಾರಿಕೆ ಆರೋಪದಲ್ಲಿ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನ ಜಾಧವ್ ಅವರ ತಾಯಿ ಹಾಗೂ ಪತ್ನಿಯ ಭೇಟಿಗೆ ಸೋಮವಾರ ಅವಕಾಶ ನೀಡಿರುವ ಬೆನ್ನಲ್ಲೇ ರಾಯಭಾರ ಒಪ್ಪಿಗೆ ನೀಡುವುದಾಗಿ ಸಹ ತೀರ್ಮಾನಿಸಿದೆ.

ರಾಯಭಾರ ಒಪ್ಪಿಗೆಗೆ ಭಾರತ ಇದುವರೆಗೆ ಸಲ್ಲಿಸಿದ್ದ 22 ಮನವಿ ತಿರಸ್ಕರಿಸಿದ್ದ ಪಾಕಿಸ್ತಾನ ಕೊನೆಗೂ ಮಣಿದು ಸೋಮವಾರ ರಾಯಭಾರ ಅನುಮತಿಗೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಒಪ್ಪಿಗೆ ಸೂಚಿಸಿದೆ.

ಅತ್ತ ಜಾಧವ್ ಅವರ ಪತ್ನಿ ಹಾಗೂ ತಾಯಿ ಪಾಕಿಸ್ತಾನ ತಲುಪುವ ವಿಮಾನ ತಡವಾಗಿದ್ದು,ಇಬ್ಬರೂ ಪಾಕಿಸ್ತಾನದಲ್ಲಿ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಜಾಧವ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ವಿರುದ್ಧ ಬೇಹುಗಾರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಕುಲಭೂಷಣ ಜಾಧವ್ ಅವರನ್ನು ಬಂಧಿಸಿ ಉದ್ಧಟತನ ಮೆರೆದಿದ್ದಲ್ಲದೆ, ಅವರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಆದರೆ ಭಾರತ ಪ್ರಕರಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಕೊಂಡೊಯ್ದು ಸಮರ್ಪಕವಾಗಿ ವಾದ ಮಾಡಿತ್ತಲ್ಲದೇ, ಅಂತಾರಾಷ್ಟ್ರೀಯ ನ್ಯಾಯಾಲಯ ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಮಾಡಿತ್ತು.

ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಬಳಿಕ ಮುಖಭಂಗ ಅನುಭವಿಸಿದ್ದ ಪಾಕಿಸ್ತಾನ ಮೆತ್ತಗಾಗಿದ್ದು, ಜಾಧವ್ ಅವರ ಪತ್ನಿ ಹಾಗೂ ತಾಯಿಗೆ ಭೇಟಿ ನೀಡಲು ಅವಕಾಶ ನೀಡಿತ್ತು. ಈಗ ರಾಯಭಾರ ಒಪ್ಪಿಗೆ ಸಹ ನೀಡಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search