• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಆಸ್ಪತ್ರೆಗೆ ವೀಲ್ ಚೇರ್ ,ವಾಟರ್ ಹೀಟರ್ ಮತ್ತು ಹಣ್ಣುಹಂಪಲುಗಳನ್ನು ವಿತರಿಸಿ ಅಟಲ್ ಜೀ ಜನ್ಮದಿನಾಚರಣೆ

SHRINATH Posted On December 25, 2017
0


0
Shares
  • Share On Facebook
  • Tweet It

ಮಾಜಿ ಪ್ರಧಾನ ಮಂತ್ರಿ, ದೇಶ ಕಂಡ ಅಪ್ರತಿಮ ನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 93ನೇ ಹುಟ್ಟುಹಬ್ಬವನ್ನು ಮಂಗಳೂರು ನಗರ ದಕ್ಷಿಣ ಭಾರತೀಯ ಜನತಾ ಪಾರ್ಟಿಯು ಅರ್ಥಪೂರ್ಣವಾಗಿ ಆಚರಿಸಿತು.ವೆನ್ ಲಾಕ್ ಆಸ್ಪತ್ರೆಗೆ ಐದು ವಿಲ್ ಚೇರ್ ಗಳನ್ನು ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಹಸ್ತಾಂತರಿಸಿದರೆ, ಲೇಡಿಗೋಶನ್ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಯಂತ್ರ, ವಾಟರ್ ಹೀಟರ್ ಮತ್ತು ರೋಗಿಗಳಿಗೆ ಹಣ್ಣುಹಂಪಲುಗಳನ್ನು ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಪೂರ್ಣಿಮಾ ಅವರು ವಿತರಿಸಿದರು.

ಕೊಡಿಯಾಲ್ ಬೈಲ್ ನಲ್ಲಿರುವ ಡಾ| ಗಿರಿಧರ್ ರಾವ್ ಸಂಜೀವ್ ಬಾಯಿ ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರಿಗೆ ಹಣ್ಣುಹಂಪಲುಗಳನ್ನು ಯೋಗೀಶ್ ಭಟ್ ಅವರು ವಿತರಿಸಿದರೆ,
ಜೆಪ್ಪು ಮಾರುಕಟ್ಟೆಯಲ್ಲಿರುವ ಭಗಿನಿ ಸಮಾಜ ಶಿಶು ನಿಲಯದಲ್ಲಿ ಭೋಜನ ವ್ಯವಸ್ಥೆ ಏರ್ಪಡಿಸಿ, ಹಣ್ಣು ಹಂಪಲು ಜೊತೆಗೆ ಅಗತ್ಯ ವಸ್ತುಗಳನ್ನು ವಿತರಿಸಿ ವಾಜಪೇಯಿಯವರ ಆರೋಗ್ಯ ಹಾಗೂ ಆಯುಷ್ಯ ವೃದ್ಧಿಸುವಂತೆ ಮೋನಪ್ಪ ಭಂಡಾರಿಯವರು ಪ್ರಾರ್ಥಿಸಿದರು.ಶಿವಭಾಗ್ ನಲ್ಲಿರುವ ಸಿಟಿಜನ್ ಎಲೈಯನ್ಸ್ ಫಾರ್ ರೂರಲ್ ಡೆವೆಲಪ್ ಮೆಂಟ್ ಮತ್ತು ಸಂವೇದನಾ ಸೊಸೈಟಿಗೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ ಹಾಗೂ ಮಂಜುಳಾ ರಾವ್ ಅವರು ಹಣ್ಣುಹಂಪಲು ವಿತರಿಸಿದರು.

ಈ ಎಲ್ಲಾ ಕಾರ್ಯಕ್ರಮಗಳ ಅಧ್ಯಕ್ಷತೆ ಹಾಗೂ ನೇತೃತ್ವವನ್ನು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ವೇದವ್ಯಾಸ ಕಾಮತ್ ಅವರು ವಹಿಸಿಕೊಂಡಿದ್ದರು.ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ರೂಪಾ ಡಿ ಬಂಗೇರ, ರಾಜೇಂದ್ರ, ಕ್ಯಾ.ಬ್ರಿಜೇಶ್ ಚೌಟ, ಪ್ರಭಾ ಮಾಲಿನಿ, ಪೂರ್ಣಿಮ ರಾವ್, ಸಂಜಯ್ ಪ್ರಭು, ಭಾಸ್ಕರ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ವಸಂತ ಜೆ ಪೂಜಾರಿ, ದೇವೋಜಿ ರಾವ್, ಜನಾರ್ಧನ ಕುಡ್ವ, ರಮೇಶ್ ಹೆಗ್ಡೆ, ಅಜಯ್, ಗ್ಲಾಡ್ವಿನ್ ಡಿಸೋಜ, ಅನಿಲ್ ಕುಮಾರ್, ಲಲ್ಲೇಶ್, ಶ್ರೀನಿವಾಸ ಶೇಟ್, ಪ್ರದೀಪ್, ಕಿಶೋರ್ ಕೊಟ್ಟಾರಿ, ಗಿರೀಶ್ ಕೊಟ್ಟಾರಿ, ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
SHRINATH November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
SHRINATH October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search