• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಾರಾಷ್ಟ್ರ ಸರ್ಕಾರದ ದಿಟ್ಟ ಕ್ರಮ, ಶೇ.70 ರಷ್ಟು ಗೋ ಅಕ್ರಮ ಸಾಗಣೆ ಇಳಿಕೆ

TNN Correspondent Posted On December 26, 2017
0


0
Shares
  • Share On Facebook
  • Tweet It

ಮುಂಬೈ: ಎರಡು ವರ್ಷದಿಂದ ಬಿಜೆಪಿ ಆಡಳಿತದಲ್ಲಿರುವ ಮಹರಾಷ್ಟ್ರ ಸರ್ಕಾರದ ಗೋ ರಕ್ಷಣೆ ಕಾಯ್ದೆ  ಜಾರಿ ಮತ್ತು ಗೋ ರಕ್ಷಣೆಗೆ ಕೈಗೊಂಡ ದಿಟ್ಟ ನಿರ್ಧಾರದಿಂದ ಎರಡು ವರ್ಷದಿಂದ ಮಹಾರಾಷ್ಟ್ರದಲ್ಲಿ ಶೇ.70 ರಷ್ಟು ಗೋ ಅಕ್ರಮ ಸಾಗಣೆಯಲ್ಲಿ ಇಳಿಕೆಯಾಗಿದೆ. ಸರ್ಕಾರ ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವುದು ಮತ್ತು ಪ್ರಾಣಿ ಹತ್ಯೆ ತಡೆ ಕಾಯ್ದೆ ಅಡಿಯಲ್ಲಿ ಹಲವರ ವಿರುದ್ಧ ದೂರು ದಾಖಲಿಸಿದ್ದರಿಂದ ಎರಡು ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.

2016ರಕ್ಕೆ ಹೋಲಿಸಿದರೇ 2017ಕ್ಕೆ ಶೇ.70ರಷ್ಟು ಗೋ ಅಕ್ರಮ ಸಾಗಣೆ ಪ್ರಮಾಣ ಕಡಿಮೆಯಾಗಿದೆ. 2017ರಲ್ಲಿ 2.617 ಗೋವುಗಳನ್ನು ಸರ್ಕಾರ ರಕ್ಷಿಸಿದೆ. 2016ರಲ್ಲಿ 15.250 ಮತ್ತು 2015ರಲ್ಲಿ 6.056 ಗೋವುಗಳನ್ನು ಮಹಾರಾಷ್ಟ್ರ ಪೊಲೀಸರು ರಕ್ಷಣೆ ಮಾಡಿದ್ದರು. ಗೋ ರಕ್ಷಣೆ ವಿಷಯದಲ್ಲಿ ಸರ್ಕಾರದ ಕಟ್ಟುನಿಟ್ಟಿನ ನಿರ್ಧಾರದಿಂದ ಗೋ ರಕ್ಷಕರ ಕಾಟವು ಕಡಿಮೆಯಾಗಿದ್ದು, ಅವರ ಮೇಲೂ ಪೊಲೀಸರು ಕಣಿಟ್ಟಿದ್ದಾರೆ.

ಗೋ ರಕ್ಷಣೆ ಕಾಯ್ದೆ ಅಡಿಯಲ್ಲಿ 2017ರಲ್ಲಿ ಅಕ್ರಮ ಗೋ ಸಾಗಣೆಯಲ್ಲಿ ಭಾಗಿಯಾಗಿರುವ ಆರೋಪದಲ್ಲಿ 417 ಜನರನ್ನು ಬಂಧಿಸಲಾಗಿದೆ, 2016ರಲ್ಲಿ 1,819 ಜನರನ್ನು ಬಂಧಿಸಲಾಗಿದೆ, ಅಲ್ಲದೇ 2015ರಲ್ಲಿ 1,366 ಜನರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

ಗೋ ಅಕ್ರಮ ಸಾಗಣೆ ಕಾಯ್ದೆ ದುರ್ಬಳಕೆಯಾಗಬಾರದು. ಕಾಯ್ದೆ ನೆಪದಲ್ಲಿ ವ್ಯಾಪಾರಿಗಳನ್ನು ವಿನಾಕಾರಣ ಬಂಧಿಸುವುದು, ವಿಚಾರಣೆ ನಡೆಸುವುದು ಮಾಡಬಾರದು. ಅವರು ಗೋ ಸಾಗಣೆ ಮಾಂಸಕ್ಕಾಗಿ ಮಾಡುತ್ತಿದ್ದಾರೆ ಎಂಬುದನ್ನು ಖಚಿತಪಡಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ ಅಧಿಕಾರಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search