• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡ್ಡ ಬೋಳಿಸದ 10 ಮುಸ್ಲಿಮರನ್ನು ಎನ್ ಸಿಸಿ ಶಿಬಿರದಿಂದ ಹೊರಹಾಕಿದ ಆಡಳಿತ ಮಂಡಳಿ!

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಎನ್ ಸಿಸಿ) ಶಿಬಿರ ಅಥವಾ ತರಬೇತಿ ಎಂದರೇನೇ ಶಿಸ್ತಿಗೆ ಹೆಸರಾಗಿದೆ. ಆದರೆ ಈ ಶಿಬಿರದಲ್ಲೂ ಗಡ್ಡ ಬೋಳಿಸದೆ ಅಶಿಸ್ತಿನಿಂದ ಭಾಗಿಯಾದ ಆರೋಪದಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಎನ್ ಸಿಸಿ ವಿಭಾಗದ 10 ಮುಸ್ಲಿಂ ವಿದ್ಯಾರ್ಥಿಗಳನನ್ನು ಶಿಬಿರದಿಂದಲೇ ಹೊರಹಾಕಲಾಗಿದೆ.

ರೋಹಿಣಿ ಎಂಬ ಪ್ರದೇಶದಲ್ಲಿ ಶಿಬಿರ ನಡೆಯುತ್ತಿದ್ದು, ಆಡಳಿತ ಮಂಡಳಿ ಶಿಸ್ತಿನ ಕಾರಣದಿಂದ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಸೂಚನೆ ನೀಡಿದೆ. ಆದರೆ ವಿದ್ಯಾರ್ಥಿಗಳು ನಿರಾಕರಿಸಿದ ಕಾರಣ ಶಿಬಿರದಿಂದ ಹೊರಹಾಕಿ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

ಆದರೆ ನಮ್ಮನ್ನು ಶಿಬಿರದಿಂದ ಹೊರಹಾಕಲು ಸೂಕ್ತ ಕಾರಣ ನೀಡದೆ, “ಅಶಿಸ್ತು” ಎಂದು ಮಾತ್ರ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ಆಗಮಿಸಿ ಪ್ರತಿಭಟನೆ ಸಹ ನಡೆಸಿದ್ದಾರೆ.

ನಾವು ಎನ್ ಸಿಸಿ ಶಿಬಿರದಲ್ಲಿ ಪಾಲ್ಗೊಳ್ಳುವ ಆಸಕ್ತಿ ಹೊಂದಿದ್ದರೂ ಬರೀ ಗಡ್ಡ ಬೋಳಿಸಿಲ್ಲ ಎಂಬ ಕಾರಣಕ್ಕಾಗಿಯೇ ಶಿಬಿರದಿಂದ ಹೊರಹಾಕಲಾಗಿದೆ. ಆದರೆ ನಮ್ಮ ಗಡ್ಡದಿಂದ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ ಎಂದು ಶಿಬಿರಾರ್ಥಿ ದಿಲ್ಶಾದ್ ಅಹ್ಮದ್ ಹೇಳಿದ್ದಾರೆ.

ಶಿಬಿರದ ನೇತೃತ್ವ ವಹಿಸಿಕೊಂಡಿದ್ದ ಲೆಫ್ಟಿನೆಂಟ್ ಕರ್ನಲ್ ಬಿ.ಎಸ್.ಯಾದವ್ ಈ ಕುರಿತು ಸ್ಪಷ್ಟನೆ ನೀಡಿದ್ದು, ನಾನು 26 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ಎನ್ ಸಿಸಿಯಲ್ಲಿ ಎಲ್ಲರೂ ಗಡ್ಡ ಬೋಳಿಸಿಕೊಂಡು ಶಿಸ್ತಿನಿಂದ ಇರಬೇಕು ಎಂಬುದು ನಿಯಮ. ನಾವು ಸಹ ಆ ವಿದ್ಯಾರ್ಥಿಗಳಿಗೆ ಶಿಷ್ಟಾಚಾರ ಪಾಲಿಸುವಂತೆ ತಿಳಿಸಿದ್ದೆವು. ಆದರೆ ಧರ್ಮದ ಕಾರಣವೊಡ್ಡಿ ಅವರು ಶಿಬಿರ ಬಿಟ್ಟು ತೊರೆದಿದ್ದಾರೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search