• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿದೇಶಿ ದೇಣಿಗೆ ಪಡೆದು ಅಸಹಿಷ್ಣು ನಾಟಕವಾಡುತ್ತಿದ್ದ ಎನ್ ಜಿಓಗಳಿಗೆ ಕೇಂದ್ರದ ಭಾರಿ ಹೊಡೆತ

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ವಿದೇಶಿ ದೇಣಿಗೆ ಪಡೆದು ದೇಶದ ವಿರುದ್ಧವೇ ಷಡ್ಯಂತ್ರ ಹೂಡುತ್ತಿದ್ದ ಸರ್ಕಾರೇತರ ಸಂಸ್ಥೆ (ಎನ್ ಜಿಒ)ಗಳಿಗೆ ಕೇಂದ್ರ ಸರ್ಕಾರ ಮೂಗುದಾರ ಹಾಕಲು ನಿರ್ಧರಿಸಿದೆ.  ವಿದೇಶಿ ದೇಣಿಗೆ ಸ್ವೀಕರಿಸುವ ಹಣವನ್ನು ಎಫ್ ಸಿಆರ್ ಎ 2010 ಕಾಯ್ದೆ ಪ್ರಕಾರ ಸೂಚಿಸಿರುವ ಬ್ಯಾಂಕ್ ಗಳಲ್ಲಿ ಖಾತೆ ತೆರೆದು ಹಣ ಸಂಗ್ರಹಿಸಬೇಕು ಎಂದು ಕೇಂದ್ರ ಸರ್ಕಾರ ಸರ್ಕಾರೇತರ ಸಂಸ್ಥೆಗಳಿಗೆ ಸೂಚಿಸಿದೆ.

ಸಾರ್ವಜನಿಕ ಹಣಕಾಸು ನಿರ್ವಹಣೆ ವ್ಯವಸ್ಥೆಯಲ್ಲಿ ಎನ್ ಜಿ ಓಗಳ ಹಣಕಾಸು ವ್ಯವಹಾರವನ್ನು ಮುಖ್ಯವಾಹಿನಿಗೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಎಲ್ಲ ಎನ್ ಜಿ ಓ ಗಳಿಗೆ ನೋಟಿಸ್ ನೀಡಿದ್ದು, ಖಾತೆ ತೆರೆಯಲು ಒಂದು ತಿಂಗಳು ಕಾಲಾವಕಾಶ ನೀಡಲು ಸೂಚಿಸಿದೆ.

ರಾಷ್ಟ್ರೀಯ ಹಿತಾಸಕ್ತಿ ಕಾಪಾಡಲು ಈ ನಿರ್ಧಾರ ಕೈಗೊಂಡಿದೆ. ವಿದೇಶಿ ದೇಣಿಗೆ ಕಾಯ್ದೆ 2010 ಪ್ರಕಾರ ಈ ನಿಯಮ ಜಾರಿಗೆ ತರಲಾಗಿದ್ದು, ವಿದೇಶಿ ಸಹಾಯಧನ ಪಡೆಯುವ ಕಂಪೆನಿಗಳು, ಎಜ್ ಜಿಓಗಳು, ಸಂಘಟನೆಗಳು ಈ ನಿಯಮದ ವ್ಯಾಪ್ತಿಗೆ ಬರುತ್ತಿದ್ದು, ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ಹಣ ಬಳಸುತ್ತಿರುವುದರಿಂದ ಈ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ 32 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಾತ್ರ ಒಂದು ತಿಂಗಳಲ್ಲಿ ಖಾತೆ ತೆರೆಯಲು ಸೂಚನೆ ನೀಡಿದೆ.

ಈ ನಿರ್ಧಾರದಿಂದ ಎಜ್ ಜಿಓಗಳ ಹಣಕಾಸಿನ ವ್ಯವಹಾರದ ಮೇಲೆ ಕಣ್ಗಾವಲು ಇಡಲು ಅನುಕೂಲವಾಗಲಿದ್ದು, ಎನ್ ಜಿಓಗಳ ಯೋಜನೆಗಳು, ದಾಖಲೆಗಳನ್ನು ಸಂಗ್ರಹಿಸಲು ಮತ್ತು ಕೋರ್ ಬ್ಯಾಂಕಿಂಗ್ ಗೂ ಸಹಾಯಕವಾಗಲಿದೆ. ಅಲ್ಲದೇ ಎಜ್ ಜಿಓಗಳು ಒಂದೇ ವ್ಯವಸ್ಥೆಯ ಅಡಿಯಲ್ಲಿ ಬರುವುದರಿಂದ ಆಡಳಿತಕ್ಕೂ ಅನುಕೂಲವಾಗಲಿದೆ.

ಇನ್ನು ಈ ನಿರ್ಧಾರಿಂದ ವಿದೇಶಗಳಿಂದ ಬೇಕಾಬಿಟ್ಟಿಯಾಗಿ ಹಣ ಪಡೆದು, ದೇಶದ ವಿರುದ್ಧವೇ ಷಡ್ಯಂತ್ರ ಮಾಡುತ್ತಿರುವ ಎಜ್ ಜಿಓಗಳಿಗೆ ಭಾರಿ ಹೊಡೆತ ಬಿದ್ದಿದೆ. ದೇಶದಲ್ಲಿ ಅಶಾಂತಿ ಸೃಷ್ಟಿಸುವಲ್ಲಿ ಕೆಲ ವಿದೇಶಿ ದೇಣಿಗೆ ಆಶ್ರಯಿತ ಎನ್ ಜಿಓಗಳು ಷಡ್ಯಂತ್ರ ರೂಪಿಸುತ್ತಿದ್ದವು, ಇದೀಗ ಅವುಗಳಿಗೆ ಭಾರಿ ಹೊಡೆತ ಬಿದ್ದಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search