• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿದೇಶಿ ದೇಣಿಗೆ ಪಡೆದು ಅಸಹಿಷ್ಣು ನಾಟಕವಾಡುತ್ತಿದ್ದ ಎನ್ ಜಿಓಗಳಿಗೆ ಕೇಂದ್ರದ ಭಾರಿ ಹೊಡೆತ

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ವಿದೇಶಿ ದೇಣಿಗೆ ಪಡೆದು ದೇಶದ ವಿರುದ್ಧವೇ ಷಡ್ಯಂತ್ರ ಹೂಡುತ್ತಿದ್ದ ಸರ್ಕಾರೇತರ ಸಂಸ್ಥೆ (ಎನ್ ಜಿಒ)ಗಳಿಗೆ ಕೇಂದ್ರ ಸರ್ಕಾರ ಮೂಗುದಾರ ಹಾಕಲು ನಿರ್ಧರಿಸಿದೆ.  ವಿದೇಶಿ ದೇಣಿಗೆ ಸ್ವೀಕರಿಸುವ ಹಣವನ್ನು ಎಫ್ ಸಿಆರ್ ಎ 2010 ಕಾಯ್ದೆ ಪ್ರಕಾರ ಸೂಚಿಸಿರುವ ಬ್ಯಾಂಕ್ ಗಳಲ್ಲಿ ಖಾತೆ ತೆರೆದು ಹಣ ಸಂಗ್ರಹಿಸಬೇಕು ಎಂದು ಕೇಂದ್ರ ಸರ್ಕಾರ ಸರ್ಕಾರೇತರ ಸಂಸ್ಥೆಗಳಿಗೆ ಸೂಚಿಸಿದೆ.

ಸಾರ್ವಜನಿಕ ಹಣಕಾಸು ನಿರ್ವಹಣೆ ವ್ಯವಸ್ಥೆಯಲ್ಲಿ ಎನ್ ಜಿ ಓಗಳ ಹಣಕಾಸು ವ್ಯವಹಾರವನ್ನು ಮುಖ್ಯವಾಹಿನಿಗೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಎಲ್ಲ ಎನ್ ಜಿ ಓ ಗಳಿಗೆ ನೋಟಿಸ್ ನೀಡಿದ್ದು, ಖಾತೆ ತೆರೆಯಲು ಒಂದು ತಿಂಗಳು ಕಾಲಾವಕಾಶ ನೀಡಲು ಸೂಚಿಸಿದೆ.

ರಾಷ್ಟ್ರೀಯ ಹಿತಾಸಕ್ತಿ ಕಾಪಾಡಲು ಈ ನಿರ್ಧಾರ ಕೈಗೊಂಡಿದೆ. ವಿದೇಶಿ ದೇಣಿಗೆ ಕಾಯ್ದೆ 2010 ಪ್ರಕಾರ ಈ ನಿಯಮ ಜಾರಿಗೆ ತರಲಾಗಿದ್ದು, ವಿದೇಶಿ ಸಹಾಯಧನ ಪಡೆಯುವ ಕಂಪೆನಿಗಳು, ಎಜ್ ಜಿಓಗಳು, ಸಂಘಟನೆಗಳು ಈ ನಿಯಮದ ವ್ಯಾಪ್ತಿಗೆ ಬರುತ್ತಿದ್ದು, ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ಹಣ ಬಳಸುತ್ತಿರುವುದರಿಂದ ಈ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ 32 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಾತ್ರ ಒಂದು ತಿಂಗಳಲ್ಲಿ ಖಾತೆ ತೆರೆಯಲು ಸೂಚನೆ ನೀಡಿದೆ.

ಈ ನಿರ್ಧಾರದಿಂದ ಎಜ್ ಜಿಓಗಳ ಹಣಕಾಸಿನ ವ್ಯವಹಾರದ ಮೇಲೆ ಕಣ್ಗಾವಲು ಇಡಲು ಅನುಕೂಲವಾಗಲಿದ್ದು, ಎನ್ ಜಿಓಗಳ ಯೋಜನೆಗಳು, ದಾಖಲೆಗಳನ್ನು ಸಂಗ್ರಹಿಸಲು ಮತ್ತು ಕೋರ್ ಬ್ಯಾಂಕಿಂಗ್ ಗೂ ಸಹಾಯಕವಾಗಲಿದೆ. ಅಲ್ಲದೇ ಎಜ್ ಜಿಓಗಳು ಒಂದೇ ವ್ಯವಸ್ಥೆಯ ಅಡಿಯಲ್ಲಿ ಬರುವುದರಿಂದ ಆಡಳಿತಕ್ಕೂ ಅನುಕೂಲವಾಗಲಿದೆ.

ಇನ್ನು ಈ ನಿರ್ಧಾರಿಂದ ವಿದೇಶಗಳಿಂದ ಬೇಕಾಬಿಟ್ಟಿಯಾಗಿ ಹಣ ಪಡೆದು, ದೇಶದ ವಿರುದ್ಧವೇ ಷಡ್ಯಂತ್ರ ಮಾಡುತ್ತಿರುವ ಎಜ್ ಜಿಓಗಳಿಗೆ ಭಾರಿ ಹೊಡೆತ ಬಿದ್ದಿದೆ. ದೇಶದಲ್ಲಿ ಅಶಾಂತಿ ಸೃಷ್ಟಿಸುವಲ್ಲಿ ಕೆಲ ವಿದೇಶಿ ದೇಣಿಗೆ ಆಶ್ರಯಿತ ಎನ್ ಜಿಓಗಳು ಷಡ್ಯಂತ್ರ ರೂಪಿಸುತ್ತಿದ್ದವು, ಇದೀಗ ಅವುಗಳಿಗೆ ಭಾರಿ ಹೊಡೆತ ಬಿದ್ದಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search