• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿದೇಶಿ ದೇಣಿಗೆ ಪಡೆದು ಅಸಹಿಷ್ಣು ನಾಟಕವಾಡುತ್ತಿದ್ದ ಎನ್ ಜಿಓಗಳಿಗೆ ಕೇಂದ್ರದ ಭಾರಿ ಹೊಡೆತ

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ವಿದೇಶಿ ದೇಣಿಗೆ ಪಡೆದು ದೇಶದ ವಿರುದ್ಧವೇ ಷಡ್ಯಂತ್ರ ಹೂಡುತ್ತಿದ್ದ ಸರ್ಕಾರೇತರ ಸಂಸ್ಥೆ (ಎನ್ ಜಿಒ)ಗಳಿಗೆ ಕೇಂದ್ರ ಸರ್ಕಾರ ಮೂಗುದಾರ ಹಾಕಲು ನಿರ್ಧರಿಸಿದೆ.  ವಿದೇಶಿ ದೇಣಿಗೆ ಸ್ವೀಕರಿಸುವ ಹಣವನ್ನು ಎಫ್ ಸಿಆರ್ ಎ 2010 ಕಾಯ್ದೆ ಪ್ರಕಾರ ಸೂಚಿಸಿರುವ ಬ್ಯಾಂಕ್ ಗಳಲ್ಲಿ ಖಾತೆ ತೆರೆದು ಹಣ ಸಂಗ್ರಹಿಸಬೇಕು ಎಂದು ಕೇಂದ್ರ ಸರ್ಕಾರ ಸರ್ಕಾರೇತರ ಸಂಸ್ಥೆಗಳಿಗೆ ಸೂಚಿಸಿದೆ.

ಸಾರ್ವಜನಿಕ ಹಣಕಾಸು ನಿರ್ವಹಣೆ ವ್ಯವಸ್ಥೆಯಲ್ಲಿ ಎನ್ ಜಿ ಓಗಳ ಹಣಕಾಸು ವ್ಯವಹಾರವನ್ನು ಮುಖ್ಯವಾಹಿನಿಗೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಎಲ್ಲ ಎನ್ ಜಿ ಓ ಗಳಿಗೆ ನೋಟಿಸ್ ನೀಡಿದ್ದು, ಖಾತೆ ತೆರೆಯಲು ಒಂದು ತಿಂಗಳು ಕಾಲಾವಕಾಶ ನೀಡಲು ಸೂಚಿಸಿದೆ.

ರಾಷ್ಟ್ರೀಯ ಹಿತಾಸಕ್ತಿ ಕಾಪಾಡಲು ಈ ನಿರ್ಧಾರ ಕೈಗೊಂಡಿದೆ. ವಿದೇಶಿ ದೇಣಿಗೆ ಕಾಯ್ದೆ 2010 ಪ್ರಕಾರ ಈ ನಿಯಮ ಜಾರಿಗೆ ತರಲಾಗಿದ್ದು, ವಿದೇಶಿ ಸಹಾಯಧನ ಪಡೆಯುವ ಕಂಪೆನಿಗಳು, ಎಜ್ ಜಿಓಗಳು, ಸಂಘಟನೆಗಳು ಈ ನಿಯಮದ ವ್ಯಾಪ್ತಿಗೆ ಬರುತ್ತಿದ್ದು, ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ಹಣ ಬಳಸುತ್ತಿರುವುದರಿಂದ ಈ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ 32 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಾತ್ರ ಒಂದು ತಿಂಗಳಲ್ಲಿ ಖಾತೆ ತೆರೆಯಲು ಸೂಚನೆ ನೀಡಿದೆ.

ಈ ನಿರ್ಧಾರದಿಂದ ಎಜ್ ಜಿಓಗಳ ಹಣಕಾಸಿನ ವ್ಯವಹಾರದ ಮೇಲೆ ಕಣ್ಗಾವಲು ಇಡಲು ಅನುಕೂಲವಾಗಲಿದ್ದು, ಎನ್ ಜಿಓಗಳ ಯೋಜನೆಗಳು, ದಾಖಲೆಗಳನ್ನು ಸಂಗ್ರಹಿಸಲು ಮತ್ತು ಕೋರ್ ಬ್ಯಾಂಕಿಂಗ್ ಗೂ ಸಹಾಯಕವಾಗಲಿದೆ. ಅಲ್ಲದೇ ಎಜ್ ಜಿಓಗಳು ಒಂದೇ ವ್ಯವಸ್ಥೆಯ ಅಡಿಯಲ್ಲಿ ಬರುವುದರಿಂದ ಆಡಳಿತಕ್ಕೂ ಅನುಕೂಲವಾಗಲಿದೆ.

ಇನ್ನು ಈ ನಿರ್ಧಾರಿಂದ ವಿದೇಶಗಳಿಂದ ಬೇಕಾಬಿಟ್ಟಿಯಾಗಿ ಹಣ ಪಡೆದು, ದೇಶದ ವಿರುದ್ಧವೇ ಷಡ್ಯಂತ್ರ ಮಾಡುತ್ತಿರುವ ಎಜ್ ಜಿಓಗಳಿಗೆ ಭಾರಿ ಹೊಡೆತ ಬಿದ್ದಿದೆ. ದೇಶದಲ್ಲಿ ಅಶಾಂತಿ ಸೃಷ್ಟಿಸುವಲ್ಲಿ ಕೆಲ ವಿದೇಶಿ ದೇಣಿಗೆ ಆಶ್ರಯಿತ ಎನ್ ಜಿಓಗಳು ಷಡ್ಯಂತ್ರ ರೂಪಿಸುತ್ತಿದ್ದವು, ಇದೀಗ ಅವುಗಳಿಗೆ ಭಾರಿ ಹೊಡೆತ ಬಿದ್ದಿದೆ.

0
Shares
  • Share On Facebook
  • Tweet It




Trending Now
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
  • Popular Posts

    • 1
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 2
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 3
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 4
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 5
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!

  • Privacy Policy
  • Contact
© Tulunadu Infomedia.

Press enter/return to begin your search