• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರು ಗುಂಡಿಟ್ಟು ಕೊಂದ, ಸಾವಿನ ವ್ಯಾಪಾರಿ, ನಾಲ್ಕೇ ಅಡಿ ಎತ್ತರದ ಆ ಉಗ್ರ ಎಂಥ ಅಪಾಯಕಾರಿಯಾಗಿದ್ದ ಗೊತ್ತಾ?

TNN Correspondent Posted On December 27, 2017
0


0
Shares
  • Share On Facebook
  • Tweet It

ಶ್ರೀನಗರ: ಇಷ್ಟುದ್ದ ಗಡ್ಡ ಬಿಟ್ಟಿದ್ದ, 47 ವಯಸ್ಸಿನ ಹಾಗೂ ನಾಲ್ಕೆಂದರೆ ನಾಲ್ಕೇ ಅಡಿ ಉದ್ದ ಇದ್ದ ಆ ಉಗ್ರ ಜಮ್ಮು-ಕಾಶ್ಮೀರದ ಜನರಿಗೇ ತಲೆನೋವಾಗಿದ್ದ. ಅವನನ್ನು ಹಿಡಿಯಲು ಹೊರಟ ಸೈನಿಕರಿಗೆ ಒಂಥರಾ ಮಾಯಾವಿಯಾಗಿದ್ದ. ಆತ ಸಾವಿನ ವ್ಯಾಪಾರಿಯೆಂದೇ ಖ್ಯಾತಿಯಾಗಿದ್ದ.

ಆದರೇನಂತೆ, ಕೊನೆಗೂ ಜೈಷೆ ಮೊಹಮ್ಮದ್ ಸಂಘಟನೆಯ ನೂರ್ ಮೊಹಮ್ಮದ್ ತಾಂಟ್ರೆಯನ್ನು ಕೊನೆಗೂ ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಆದರೆ ಅಷ್ಟಕ್ಕೂ ಅವನಿಗೇಕೆ ಸಾವಿನ ವ್ಯಾಪಾರಿ ಎಂದು ಏಕೆ ಗೊತ್ತಾ? ಆತ ಕಾಶ್ಮೀರದಲ್ಲಿ ಮಾಡಿದ ಉಪಟಳ, ದಾಳಿ ಎಂಥಾದ್ದು?

ಹೌದು, ನಾಲ್ಕು ಅಡಿ ಉದ್ದವಿದ್ದರೂ ತಾಂಟ್ರೆ ಭಯಾನಕ ಉಗ್ರನಾಗಿದ್ದ. ಕಳೆದ ಅಕ್ಟೋಬರ್ 3ರಂದು ಶ್ರೀನಗರದ ಬಿಎಸ್ಎಫ್ ಶಿಬಿರದ ಮೇಲೆ, ಸೆಪ್ಟೆಂಬರ್ ನಲ್ಲಿ ರಾಜ್ಯ ಸಚಿವ ನಯೀಮ್ ಅಖ್ತರ್ ಶ್ರೀನಗರಕ್ಕೆ ಬಂದಾಗ ಅವರಿಗಿಂತ ಸ್ವಲ್ಪ ದೂರದಲ್ಲೇ ದಾಳಿ ಮಾಡಿದ್ದ ಈ ನೂರ್ ಮೊಹಮ್ಮದ್.

ಅಷ್ಟೇ ಅಲ್ಲ, ಕಳೆದ ಡಿ.25 ಮತ್ತು 26ರಂದು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆ ಸಂಬೂರಾ ಪ್ರದೇಶದಲ್ಲಿ ನಡೆಸಿದ ದಾಳಿಯ ಹಿಂದೆಯೂ ಈತನ ಕೈವಾಡವಿತ್ತು. ಈತ ಉಗ್ರ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದಲ್ಲಿ 8 ವರ್ಷ ಸೆರೆವಾಸ ಅನುಭವಿಸಿ 2015ರಲ್ಲಿ ಬಿಡುಗಡೆಯಾಗಿದ್ದ.

2001ರಲ್ಲಿ ಸಂಸತ್ ಮೇಲೆ ನಡೆಸಿದ ದಾಳಿಯ ರೂವಾರಿ ಜೈಷೆ ಮೊಹಮ್ಮದ್ ಸಂಘಟನೆಯ ಕಮಾಂಡರ್ ಘಾಜಿ ಬಾಬಾನ ಸಹಚರ ಸಹ ಆಗಿದ್ದ ಈ ತಾಂಟ್ರಿ. ಅದಕ್ಕಾಗಿಯೇ ಆತನನ್ನು 2003ರಲ್ಲಿ ಬಂಧಿಸಲಾಗಿತ್ತು.

ಇವುಗಳ ಜತೆಗೆ ನೂರ್ ಮೊಹಮ್ಮದ್ ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣ ಸಹ ನೀಡುತ್ತಿದ್ದ ಆರೋಪ ಸಹ ಕೇಳಿಬಂದಿದೆ. ಅಷ್ಟಕ್ಕೂ ಅವನನ್ನು ಮಂಗಳವಾರ ಭಾರತೀಯ ಸೇನೆ ಹತ್ಯೆ ಮಾಡಿದ ಬಳಿಕ ಅವನಿಂದ 19ಕ್ಕೂ ಅಧಿಕ ಲಕ್ಷ ರುಪಾಯಿಯನ್ನು ವಶಪಡಿಸಿಕೊಂಡಿದ್ದೇ ಅವನ ಹಣ ಸರಬರಾಜಿಗೆ ಹಿಡಿದ ಕನ್ನಡಿಯಾಗಿದೆ. ಈ ಎಲ್ಲ ಕಾರಣಗಳಿಂದ ಆತ ಸಾವಿನ ವ್ಯಾಪಾರಿ ಎಂದು ಖ್ಯಾತಿಯಾಗಿದ್ದ ಹಾಗೂ ಆತನನ್ನು ಬಂಧಿಸಿದ್ದ ಮಹತ್ತರ ಮುನ್ನಡೆ ಎಂದು ಸೇನೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಿನಲ್ಲಿ ಜಮ್ಮು ಕಾಶ್ಮೀರದಲ್ಲಿ ಕಳೆದ ಮೇ ತಿಂಗಳಿಂದ ಭಾರತೀಯ ಸೇನೆ ಕೈಗೊಂಡ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇದುವರೆಗೆ 203 ಉಗ್ರರನ್ನು ಹತ್ಯೆ ಮಾಡಿದ್ದು, ಪಾಕಿಸ್ತಾನದ ಗಡಿ ರೇಖೆ ದಾಟಿ ಮೂವರು ಪಾಕಿಸ್ತಾನಿ ಸೈನಿಕರನ್ನು ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ನೂರ್ ಮೊಹಮ್ಮದ್ ತಾಂಟ್ರಿಯನ್ನೂ ಹತ್ಯೆ ಮಾಡಿದ್ದು, ಉಗ್ರರ ದಮನಕ್ಕೆ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search