• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನಿಕರು ಗುಂಡಿಟ್ಟು ಕೊಂದ, ಸಾವಿನ ವ್ಯಾಪಾರಿ, ನಾಲ್ಕೇ ಅಡಿ ಎತ್ತರದ ಆ ಉಗ್ರ ಎಂಥ ಅಪಾಯಕಾರಿಯಾಗಿದ್ದ ಗೊತ್ತಾ?

TNN Correspondent Posted On December 27, 2017
0


0
Shares
  • Share On Facebook
  • Tweet It

ಶ್ರೀನಗರ: ಇಷ್ಟುದ್ದ ಗಡ್ಡ ಬಿಟ್ಟಿದ್ದ, 47 ವಯಸ್ಸಿನ ಹಾಗೂ ನಾಲ್ಕೆಂದರೆ ನಾಲ್ಕೇ ಅಡಿ ಉದ್ದ ಇದ್ದ ಆ ಉಗ್ರ ಜಮ್ಮು-ಕಾಶ್ಮೀರದ ಜನರಿಗೇ ತಲೆನೋವಾಗಿದ್ದ. ಅವನನ್ನು ಹಿಡಿಯಲು ಹೊರಟ ಸೈನಿಕರಿಗೆ ಒಂಥರಾ ಮಾಯಾವಿಯಾಗಿದ್ದ. ಆತ ಸಾವಿನ ವ್ಯಾಪಾರಿಯೆಂದೇ ಖ್ಯಾತಿಯಾಗಿದ್ದ.

ಆದರೇನಂತೆ, ಕೊನೆಗೂ ಜೈಷೆ ಮೊಹಮ್ಮದ್ ಸಂಘಟನೆಯ ನೂರ್ ಮೊಹಮ್ಮದ್ ತಾಂಟ್ರೆಯನ್ನು ಕೊನೆಗೂ ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಆದರೆ ಅಷ್ಟಕ್ಕೂ ಅವನಿಗೇಕೆ ಸಾವಿನ ವ್ಯಾಪಾರಿ ಎಂದು ಏಕೆ ಗೊತ್ತಾ? ಆತ ಕಾಶ್ಮೀರದಲ್ಲಿ ಮಾಡಿದ ಉಪಟಳ, ದಾಳಿ ಎಂಥಾದ್ದು?

ಹೌದು, ನಾಲ್ಕು ಅಡಿ ಉದ್ದವಿದ್ದರೂ ತಾಂಟ್ರೆ ಭಯಾನಕ ಉಗ್ರನಾಗಿದ್ದ. ಕಳೆದ ಅಕ್ಟೋಬರ್ 3ರಂದು ಶ್ರೀನಗರದ ಬಿಎಸ್ಎಫ್ ಶಿಬಿರದ ಮೇಲೆ, ಸೆಪ್ಟೆಂಬರ್ ನಲ್ಲಿ ರಾಜ್ಯ ಸಚಿವ ನಯೀಮ್ ಅಖ್ತರ್ ಶ್ರೀನಗರಕ್ಕೆ ಬಂದಾಗ ಅವರಿಗಿಂತ ಸ್ವಲ್ಪ ದೂರದಲ್ಲೇ ದಾಳಿ ಮಾಡಿದ್ದ ಈ ನೂರ್ ಮೊಹಮ್ಮದ್.

ಅಷ್ಟೇ ಅಲ್ಲ, ಕಳೆದ ಡಿ.25 ಮತ್ತು 26ರಂದು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆ ಸಂಬೂರಾ ಪ್ರದೇಶದಲ್ಲಿ ನಡೆಸಿದ ದಾಳಿಯ ಹಿಂದೆಯೂ ಈತನ ಕೈವಾಡವಿತ್ತು. ಈತ ಉಗ್ರ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದಲ್ಲಿ 8 ವರ್ಷ ಸೆರೆವಾಸ ಅನುಭವಿಸಿ 2015ರಲ್ಲಿ ಬಿಡುಗಡೆಯಾಗಿದ್ದ.

2001ರಲ್ಲಿ ಸಂಸತ್ ಮೇಲೆ ನಡೆಸಿದ ದಾಳಿಯ ರೂವಾರಿ ಜೈಷೆ ಮೊಹಮ್ಮದ್ ಸಂಘಟನೆಯ ಕಮಾಂಡರ್ ಘಾಜಿ ಬಾಬಾನ ಸಹಚರ ಸಹ ಆಗಿದ್ದ ಈ ತಾಂಟ್ರಿ. ಅದಕ್ಕಾಗಿಯೇ ಆತನನ್ನು 2003ರಲ್ಲಿ ಬಂಧಿಸಲಾಗಿತ್ತು.

ಇವುಗಳ ಜತೆಗೆ ನೂರ್ ಮೊಹಮ್ಮದ್ ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣ ಸಹ ನೀಡುತ್ತಿದ್ದ ಆರೋಪ ಸಹ ಕೇಳಿಬಂದಿದೆ. ಅಷ್ಟಕ್ಕೂ ಅವನನ್ನು ಮಂಗಳವಾರ ಭಾರತೀಯ ಸೇನೆ ಹತ್ಯೆ ಮಾಡಿದ ಬಳಿಕ ಅವನಿಂದ 19ಕ್ಕೂ ಅಧಿಕ ಲಕ್ಷ ರುಪಾಯಿಯನ್ನು ವಶಪಡಿಸಿಕೊಂಡಿದ್ದೇ ಅವನ ಹಣ ಸರಬರಾಜಿಗೆ ಹಿಡಿದ ಕನ್ನಡಿಯಾಗಿದೆ. ಈ ಎಲ್ಲ ಕಾರಣಗಳಿಂದ ಆತ ಸಾವಿನ ವ್ಯಾಪಾರಿ ಎಂದು ಖ್ಯಾತಿಯಾಗಿದ್ದ ಹಾಗೂ ಆತನನ್ನು ಬಂಧಿಸಿದ್ದ ಮಹತ್ತರ ಮುನ್ನಡೆ ಎಂದು ಸೇನೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಿನಲ್ಲಿ ಜಮ್ಮು ಕಾಶ್ಮೀರದಲ್ಲಿ ಕಳೆದ ಮೇ ತಿಂಗಳಿಂದ ಭಾರತೀಯ ಸೇನೆ ಕೈಗೊಂಡ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇದುವರೆಗೆ 203 ಉಗ್ರರನ್ನು ಹತ್ಯೆ ಮಾಡಿದ್ದು, ಪಾಕಿಸ್ತಾನದ ಗಡಿ ರೇಖೆ ದಾಟಿ ಮೂವರು ಪಾಕಿಸ್ತಾನಿ ಸೈನಿಕರನ್ನು ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ನೂರ್ ಮೊಹಮ್ಮದ್ ತಾಂಟ್ರಿಯನ್ನೂ ಹತ್ಯೆ ಮಾಡಿದ್ದು, ಉಗ್ರರ ದಮನಕ್ಕೆ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search