• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರಕ್ಕಾಗಿ ಭಾರತದ ಮೇಲೆ ದಾಳಿ ಮಾಡುವೆನೆಂದ ಅಲ್ ಖೈದಾ ಉಗ್ರ

TNN Correspondent Posted On December 27, 2017
0


0
Shares
  • Share On Facebook
  • Tweet It

ದೆಹಲಿ: ಭಾರತ ಸರ್ಕಾರ ಕಾಶ್ಮೀರದಲ್ಲಿ ಆರು ಲಕ್ಷ ಸೈನಿಕರನ್ನು ನೇಮಿಸಿ ದ್ರೋಹ ಬಗೆಯುತ್ತಿದ್ದು, ಕಾಶ್ಮೀರಕ್ಕೆ ಸ್ವಾತಂತ್ರ್ಯ ನೀಡದಿದ್ದರೇ ಭಾರತದ ಪ್ರಮುಖ ನಗರಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಅಲ್ ಖೈದಾ ಉಗ್ರ ಸಂಘಟನೆಯ ಉಸಾಮ್ ಮೆಹ್ಮುದ್ ವಿಡಿಯೋದಲ್ಲಿ ಹೇಳಿದ್ದಾನೆ.
ಮಂಗಳವಾರ ರಾತ್ರಿ ವಿಡಿಯೋ ಬಿಡುಗಡೆ ಮಾಡಿರುವ ಅಲ್ ಖೈದಾ ಸಂಘಟನೆಯ ಕಮಾಂಡರ್ ಉಸಾಮ್ ಮೆಹಮುದ್ ‘ಕಾಶ್ಮೀರದ ಸ್ವಾತಂತ್ರ್ಯದ ಹೋರಾಟ ಮುಂದುವರಿಲಿದೆ. ಭಾರತ ಕಾಶ್ಮೀರದ ಮೇಲಿನ ಹಿಡಿತ ಹಿಂಪಡೆಯದಿದ್ದರೇ ಭಾರತ ಪ್ರಮುಖ ನಗರಗಳಾದ ಕೊಲ್ಕತ್ತಾ, ಬೆಂಗಳೂರು, ದೆಹಲಿ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾನೆ.
ಇದು ಮುಸ್ಲಿಮರ ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ ಹೋರಾಟ. ಕಾಶ್ಮೀರದ ಹೋರಾಟ ಜಿಹಾದ್ ಚಳುವಳಿಗ ಮುಖ್ಯ ಗುರಿ. ಕಾಶ್ಮೀರ ಚಳವಳಿಯಿಂದ ಜಿಹಾದ್ ಗೆ ಬಲ ಬರಲಿದೆ. ಮುಸ್ಲಿಮರೇ ಹೆಚ್ಚು ಇರುವ ಪ್ರದೇಶವೊಂದನ್ನು ಭಾರತ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಂಡಿರುವುದು ಸರಿಯಲ್ಲ ಎಂದು ಬೊಗಳಿದ್ದಾನೆ. ಭಾರತದ ಹಿಂದೂ ಸರ್ಕಾರ ಮತ್ತು ಸೈನ್ಯ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೇ ಕಠಿಣ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾನೆ.
ಮಂಗಳವಾರ ರಾತ್ರಿಯೇ ಅಲ್ ಖರಾರ್ ಎಂದು ಹೇಳಿಕೊಂಡಿರುವ ಉಗ್ರ ಸಂಘಟನೆಯೂ ವಿಡಿಯೋ ಬಿಡುಗಡೆ ಮಾಡಿದೆ. ಈ ಇಸ್ಲಾಂ ರಾಷ್ಟ್ರದ ಪ್ರತಿಪಾದಕಾರದ ಖಲೀಫ್, ಇಬ್ರಾಹಿಮ್ ಅವಾದ್ ಅಲ್-ಬದ್ರಿ ಅಲ್ಲದೇ ಅಬು ಬಕರ್ ಅಲ್ ಬಗಾದಿಯ ಜತೆ ಕೈಜೋಡಿಸಿ ಒಗ್ಗಟ್ಟಿನ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
ಶಸ್ತ್ರ ಸಜ್ಜಿತ ಜಿಹಾದಿ ಅಬು ವಲ್ ಬರಾರ್ ಎಂಬ ಗುಪ್ತ ಹೆಸರಿನಲ್ಲಿ ವಿಡಿಯೋ ಮಾಡಿದ್ದು ‘ದೇವರನ್ನು ಹೀಯಾಳಿಸಿ, ಪಾಕಿಸ್ತಾನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇನ್ನು ಈ ವಿಡಿಯೋ ಶ್ರೀನಗರದ ಕಾಶ್ಮೀರದ ಜಾಮಿಯಾ ಮಸೀದಿ ಬಳಿ ಮಾಡಲಾಗಿದೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search