• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರಕ್ಕಾಗಿ ಭಾರತದ ಮೇಲೆ ದಾಳಿ ಮಾಡುವೆನೆಂದ ಅಲ್ ಖೈದಾ ಉಗ್ರ

TNN Correspondent Posted On December 27, 2017
0


0
Shares
  • Share On Facebook
  • Tweet It

ದೆಹಲಿ: ಭಾರತ ಸರ್ಕಾರ ಕಾಶ್ಮೀರದಲ್ಲಿ ಆರು ಲಕ್ಷ ಸೈನಿಕರನ್ನು ನೇಮಿಸಿ ದ್ರೋಹ ಬಗೆಯುತ್ತಿದ್ದು, ಕಾಶ್ಮೀರಕ್ಕೆ ಸ್ವಾತಂತ್ರ್ಯ ನೀಡದಿದ್ದರೇ ಭಾರತದ ಪ್ರಮುಖ ನಗರಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಅಲ್ ಖೈದಾ ಉಗ್ರ ಸಂಘಟನೆಯ ಉಸಾಮ್ ಮೆಹ್ಮುದ್ ವಿಡಿಯೋದಲ್ಲಿ ಹೇಳಿದ್ದಾನೆ.
ಮಂಗಳವಾರ ರಾತ್ರಿ ವಿಡಿಯೋ ಬಿಡುಗಡೆ ಮಾಡಿರುವ ಅಲ್ ಖೈದಾ ಸಂಘಟನೆಯ ಕಮಾಂಡರ್ ಉಸಾಮ್ ಮೆಹಮುದ್ ‘ಕಾಶ್ಮೀರದ ಸ್ವಾತಂತ್ರ್ಯದ ಹೋರಾಟ ಮುಂದುವರಿಲಿದೆ. ಭಾರತ ಕಾಶ್ಮೀರದ ಮೇಲಿನ ಹಿಡಿತ ಹಿಂಪಡೆಯದಿದ್ದರೇ ಭಾರತ ಪ್ರಮುಖ ನಗರಗಳಾದ ಕೊಲ್ಕತ್ತಾ, ಬೆಂಗಳೂರು, ದೆಹಲಿ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾನೆ.
ಇದು ಮುಸ್ಲಿಮರ ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ ಹೋರಾಟ. ಕಾಶ್ಮೀರದ ಹೋರಾಟ ಜಿಹಾದ್ ಚಳುವಳಿಗ ಮುಖ್ಯ ಗುರಿ. ಕಾಶ್ಮೀರ ಚಳವಳಿಯಿಂದ ಜಿಹಾದ್ ಗೆ ಬಲ ಬರಲಿದೆ. ಮುಸ್ಲಿಮರೇ ಹೆಚ್ಚು ಇರುವ ಪ್ರದೇಶವೊಂದನ್ನು ಭಾರತ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಂಡಿರುವುದು ಸರಿಯಲ್ಲ ಎಂದು ಬೊಗಳಿದ್ದಾನೆ. ಭಾರತದ ಹಿಂದೂ ಸರ್ಕಾರ ಮತ್ತು ಸೈನ್ಯ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೇ ಕಠಿಣ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾನೆ.
ಮಂಗಳವಾರ ರಾತ್ರಿಯೇ ಅಲ್ ಖರಾರ್ ಎಂದು ಹೇಳಿಕೊಂಡಿರುವ ಉಗ್ರ ಸಂಘಟನೆಯೂ ವಿಡಿಯೋ ಬಿಡುಗಡೆ ಮಾಡಿದೆ. ಈ ಇಸ್ಲಾಂ ರಾಷ್ಟ್ರದ ಪ್ರತಿಪಾದಕಾರದ ಖಲೀಫ್, ಇಬ್ರಾಹಿಮ್ ಅವಾದ್ ಅಲ್-ಬದ್ರಿ ಅಲ್ಲದೇ ಅಬು ಬಕರ್ ಅಲ್ ಬಗಾದಿಯ ಜತೆ ಕೈಜೋಡಿಸಿ ಒಗ್ಗಟ್ಟಿನ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
ಶಸ್ತ್ರ ಸಜ್ಜಿತ ಜಿಹಾದಿ ಅಬು ವಲ್ ಬರಾರ್ ಎಂಬ ಗುಪ್ತ ಹೆಸರಿನಲ್ಲಿ ವಿಡಿಯೋ ಮಾಡಿದ್ದು ‘ದೇವರನ್ನು ಹೀಯಾಳಿಸಿ, ಪಾಕಿಸ್ತಾನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇನ್ನು ಈ ವಿಡಿಯೋ ಶ್ರೀನಗರದ ಕಾಶ್ಮೀರದ ಜಾಮಿಯಾ ಮಸೀದಿ ಬಳಿ ಮಾಡಲಾಗಿದೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search