• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಬೆಂಗಳೂರಿನಲ್ಲಿ ಗೆಸ್ಟ್ ಹೌಸ್ ಯಾಕೆ ಭೈರಪ್ಪನವರೇ?

Tulunadu News Posted On December 27, 2017
0


0
Shares
  • Share On Facebook
  • Tweet It

ಮಂಗಳೂರು ವಿಶ್ವವಿದ್ಯಾನಿಲಯದ ನೇರ ಅಧೀನದಲ್ಲಿ ಬರುವ ಕೊಣಾಜೆ ಕ್ಯಾಂಪಸ್, ಹಂಪನಕಟ್ಟೆ, ಮಡಿಕೇರಿ, ಚಿಕ್ಕ ಆಳುವಾರ ಕ್ಯಾಂಪಸ್ ಗೆ ಎಗ್ಗಿಲ್ಲದೆ ಮೈಸೂರು, ಮಂಡ್ಯ, ಪರಿಯಾಪಟ್ಟಣ, ಹುಣಸೂರು ಭಾಗಗಳಿಂದ ಎಟೆಂಡರ್, ಪಿಯೋನ್, ಕ್ಲಾರ್ಕ್ ನುಗ್ಗಿ ಬರುತ್ತಿದ್ದಾರೆ. ಕೆಲವೊಂದು ಕಡೆ ಇವರಿಗೆ ಕೊಡಲು ಕೆಲಸ ಇಲ್ಲ. ಉಂಡಾಡಿ ಗುಂಡರಂತೆ ತಿರುಗಾಡುತ್ತಿದ್ದಾರೆ. ಇಷ್ಟೊಂದು ಹಂಗಾಮಿ ನೇಮಕಾತಿಯಾಗಿದೆ. ಹೆಚ್ಚಿನವು 5 ರಿಂದ 8 ಲಕ್ಷ ಲಂಚ ಕೊಟ್ಟು ಬಂದಿದ್ದಾರೆ. ಕೆಲವರು ಮಾತ್ರ ಸಚಿವರ,ಗಣ್ಯರ ಶಿಫಾರಸ್ಸಿನಿಂದ ಬಂದಿದ್ದಾರೆ. ಹಲವರು ಮಂಗಳೂರು ವಿವಿ ಕುಲಪತಿ ಭೈರಪ್ಪನವರ ಗುರು ಮತ್ತು ಮೈಸೂರಿನ ಭಾವಿ ಎಂಎಲ್ ಎ ಎಂದು ಸಿದ್ಧವಾಗುತ್ತಿರುವ ರಂಗಪ್ಪನವರ ಕೃಪಾಪೋಷಿತರು. ಇವರಿಗೆಲ್ಲ ನೀಡಿರುವ ಆಶ್ವಾಸನೆ ಎನೆಂದರೆ ಜೂನ್ 5, 2018 ಅಂದರೆ ಭೈರಪ್ಪನವರು ತಾನು ನಿವೃತ್ತಿಯಾಗಿ ಹೋಗುವುದರೊಳಗೆ ತನಗೆ ಲಂಚ ಕೊಟ್ಟು ಬಂದಿರುವವರನ್ನು ಪರ್ಮನೆಂಟ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಅದಕ್ಕಾಗಿ ಹಂಗಾಮಿ ನೌಕರರು ಚಾತಕಪಕ್ಷಿಯಾಗಿ ಕಾದುಕುಳಿತುಕೊಂಡಿದ್ದಾರೆ.

ಹೆಚ್ಚಿನ ಹಂಗಾಮಿ ನೌಕರರಲ್ಲಿ ಒಂದು ಸಮಾಧಾನದ ಸಂಗತಿಯೆಂದರೆ ಯೂನಿವರ್ಸಿಟಿ ಒಳಗೆ ಹೊಕ್ಕಿ ಆಯ್ತಲ್ಲ, ಇನ್ನು ಏನಾದರೂ ಆಗುತ್ತೆ ಎನ್ನುವ ಭರವಸೆ. ಹೀಗೆ ನೇಮಕಾತಿ ಹೊಂದಿರುವವರಿಗೆ ಯಾವ ನಿಶ್ಚಿತ ನೆಲೆ ಇಲ್ಲ. ಒಬ್ಬನಿಗೆ 10 ಸಾವಿರ, ಇನ್ನೊಬ್ಬನಿಗೆ ಹದಿನೈದು, ಮತ್ತೊಬ್ಬನಿಗೆ 20 ಸಾವಿರ ಹೀಗೆ ಹೋಗುತ್ತದೆ. ಅಷ್ಟು ಸಂಬಳ ಕೊಟ್ಟು ಸರಿಯಾದ ಕೆಲಸ ಮಾಡಿಸುತ್ತಾರಾ, ಅದು ಇಲ್ಲ. ತನ್ನ ಆಪ್ತರಿಗೆ ಸಂಭ್ಯಾವ್ಯ ತೊಂದರೆಗಳಿಂದ ತಪ್ಪಿಸಿಕೊಳ್ಳಲು ಉನ್ನತ ಹುದ್ದೆ ಕೊಟ್ಟು ಕೂರಿಸಿದ್ದಾರೆ. ಡೆಲ್ಲಿಯಲ್ಲಿ ಒಬ್ಬರು, ಬೆಂಗಳೂರಿನಲ್ಲಿ ಒಬ್ಬರು, ಮಂಗಳೂರಿನಲ್ಲಿ ಒಬ್ಬರು ಹೀಗೆ ತನ್ನವರಿಗಾಗಿ ಬೇರೆ ಬೇರೆ ಹೆಸರು ಕೊಟ್ಟು ಅನಾವಶ್ಯಕ ಹುದ್ದೆಗಳನ್ನು ಸೃಷ್ಟಿಸಿದ್ದಾರೆ. ಒಬ್ಬರಿಗೆ ಪಬ್ಲಿಕ್ ರಿಲೆಶನ್ ಆಫೀಸರ್ ಎಂದರೆ ಇನ್ನೊಬ್ಬರಿಗೆ ಎಚ್ ಆರ್ ಎಂದು ಕರೆದು ಹುದ್ದೆ ಕ್ರಿಯೆಟ್ ಮಾಡಿದ್ದಾರೆ. ಉದ್ದೇಶ ಒಂದೇ. ವಿಶ್ವವಿದ್ಯಾಲಯದ ಹಣ ಪೋಲು ಮಾಡುವುದು. ತಾನೂ ತಿನ್ನುವುದು, ತಿನ್ನುವವರಿಗೂ ತಿನ್ನಿಸುವುದು. ಮಂಗಳೂರಿನಲ್ಲಿ ಓಕೆ. ಆದರೆ ಡೆಲ್ಲಿ, ಬೆಂಗಳೂರಿನಲ್ಲಿ ಪಿಆರ್ ಒ ಯಾಕೆ? ಅಷ್ಟೇ ಅಲ್ಲ, ವಿವಿಯ ಹಣದಿಂದ ಬೆಂಗಳೂರಿನಲ್ಲಿ ಗೆಸ್ಟ್ ಹೌಸ್ ಬಾಡಿಗೆಗೆ ತೆಗೆದುಕೊಳ್ಳಲಾಗಿದೆ. ಅದು ಯಾರ ಮೋಜಿಗಾಗಿ? ವರ್ಷಗಟ್ಟಲೆ ಅದಕ್ಕೆ ಲಕ್ಷಗಟ್ಟಲೆ ಬಾಡಿಗೆ ಕೊಡುವುದು ಯಾಕೆ? ಅದು ಹಣ ವ್ಯರ್ಥವಲ್ಲವೇ? ಬೆಂಗಳೂರಿನಲ್ಲಿ ಕಚೇರಿಗೆ ಸಂಬಂಧಪಟ್ಟದ್ದು ಕೆಲಸ ಒಂದು ವೇಳೆ ಇದ್ದರೆ ಸರಕಾರಿ ಅತಿಥಿ ಗೃಹವಿದೆ. ಇಲ್ಲವಾದರೆ ಒಂದೆರಡು ದಿನಗಳಿಗೆ ಬಾಡಿಗೆ ರೂಂ ಮಾಡಿದರೆ ಆಯಿತು? ಅದಕ್ಕಾಗಿ ಇಡೀ ವರ್ಷ ಬಾಡಿಗೆ ಕೊಟ್ಟು ಗೆಸ್ಟ್ ಹೌಸ್ ಮಾಡುವುದು ಯಾಕೆ? ವಿವಿಯ ಹಣದಲ್ಲಿ ಈ ಕಾಮಗಾರಿಯ ಗುಟ್ಟೆನು ಎನ್ನುವುದು ಭೈರಪ್ಪನವರಿಗೆ ಮಾತ್ರ ಗೊತ್ತು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search