• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಂಗಳೂರಿನಲ್ಲಿ ಗೆಸ್ಟ್ ಹೌಸ್ ಯಾಕೆ ಭೈರಪ್ಪನವರೇ?

Tulunadu News Posted On December 27, 2017


  • Share On Facebook
  • Tweet It

ಮಂಗಳೂರು ವಿಶ್ವವಿದ್ಯಾನಿಲಯದ ನೇರ ಅಧೀನದಲ್ಲಿ ಬರುವ ಕೊಣಾಜೆ ಕ್ಯಾಂಪಸ್, ಹಂಪನಕಟ್ಟೆ, ಮಡಿಕೇರಿ, ಚಿಕ್ಕ ಆಳುವಾರ ಕ್ಯಾಂಪಸ್ ಗೆ ಎಗ್ಗಿಲ್ಲದೆ ಮೈಸೂರು, ಮಂಡ್ಯ, ಪರಿಯಾಪಟ್ಟಣ, ಹುಣಸೂರು ಭಾಗಗಳಿಂದ ಎಟೆಂಡರ್, ಪಿಯೋನ್, ಕ್ಲಾರ್ಕ್ ನುಗ್ಗಿ ಬರುತ್ತಿದ್ದಾರೆ. ಕೆಲವೊಂದು ಕಡೆ ಇವರಿಗೆ ಕೊಡಲು ಕೆಲಸ ಇಲ್ಲ. ಉಂಡಾಡಿ ಗುಂಡರಂತೆ ತಿರುಗಾಡುತ್ತಿದ್ದಾರೆ. ಇಷ್ಟೊಂದು ಹಂಗಾಮಿ ನೇಮಕಾತಿಯಾಗಿದೆ. ಹೆಚ್ಚಿನವು 5 ರಿಂದ 8 ಲಕ್ಷ ಲಂಚ ಕೊಟ್ಟು ಬಂದಿದ್ದಾರೆ. ಕೆಲವರು ಮಾತ್ರ ಸಚಿವರ,ಗಣ್ಯರ ಶಿಫಾರಸ್ಸಿನಿಂದ ಬಂದಿದ್ದಾರೆ. ಹಲವರು ಮಂಗಳೂರು ವಿವಿ ಕುಲಪತಿ ಭೈರಪ್ಪನವರ ಗುರು ಮತ್ತು ಮೈಸೂರಿನ ಭಾವಿ ಎಂಎಲ್ ಎ ಎಂದು ಸಿದ್ಧವಾಗುತ್ತಿರುವ ರಂಗಪ್ಪನವರ ಕೃಪಾಪೋಷಿತರು. ಇವರಿಗೆಲ್ಲ ನೀಡಿರುವ ಆಶ್ವಾಸನೆ ಎನೆಂದರೆ ಜೂನ್ 5, 2018 ಅಂದರೆ ಭೈರಪ್ಪನವರು ತಾನು ನಿವೃತ್ತಿಯಾಗಿ ಹೋಗುವುದರೊಳಗೆ ತನಗೆ ಲಂಚ ಕೊಟ್ಟು ಬಂದಿರುವವರನ್ನು ಪರ್ಮನೆಂಟ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಅದಕ್ಕಾಗಿ ಹಂಗಾಮಿ ನೌಕರರು ಚಾತಕಪಕ್ಷಿಯಾಗಿ ಕಾದುಕುಳಿತುಕೊಂಡಿದ್ದಾರೆ.

ಹೆಚ್ಚಿನ ಹಂಗಾಮಿ ನೌಕರರಲ್ಲಿ ಒಂದು ಸಮಾಧಾನದ ಸಂಗತಿಯೆಂದರೆ ಯೂನಿವರ್ಸಿಟಿ ಒಳಗೆ ಹೊಕ್ಕಿ ಆಯ್ತಲ್ಲ, ಇನ್ನು ಏನಾದರೂ ಆಗುತ್ತೆ ಎನ್ನುವ ಭರವಸೆ. ಹೀಗೆ ನೇಮಕಾತಿ ಹೊಂದಿರುವವರಿಗೆ ಯಾವ ನಿಶ್ಚಿತ ನೆಲೆ ಇಲ್ಲ. ಒಬ್ಬನಿಗೆ 10 ಸಾವಿರ, ಇನ್ನೊಬ್ಬನಿಗೆ ಹದಿನೈದು, ಮತ್ತೊಬ್ಬನಿಗೆ 20 ಸಾವಿರ ಹೀಗೆ ಹೋಗುತ್ತದೆ. ಅಷ್ಟು ಸಂಬಳ ಕೊಟ್ಟು ಸರಿಯಾದ ಕೆಲಸ ಮಾಡಿಸುತ್ತಾರಾ, ಅದು ಇಲ್ಲ. ತನ್ನ ಆಪ್ತರಿಗೆ ಸಂಭ್ಯಾವ್ಯ ತೊಂದರೆಗಳಿಂದ ತಪ್ಪಿಸಿಕೊಳ್ಳಲು ಉನ್ನತ ಹುದ್ದೆ ಕೊಟ್ಟು ಕೂರಿಸಿದ್ದಾರೆ. ಡೆಲ್ಲಿಯಲ್ಲಿ ಒಬ್ಬರು, ಬೆಂಗಳೂರಿನಲ್ಲಿ ಒಬ್ಬರು, ಮಂಗಳೂರಿನಲ್ಲಿ ಒಬ್ಬರು ಹೀಗೆ ತನ್ನವರಿಗಾಗಿ ಬೇರೆ ಬೇರೆ ಹೆಸರು ಕೊಟ್ಟು ಅನಾವಶ್ಯಕ ಹುದ್ದೆಗಳನ್ನು ಸೃಷ್ಟಿಸಿದ್ದಾರೆ. ಒಬ್ಬರಿಗೆ ಪಬ್ಲಿಕ್ ರಿಲೆಶನ್ ಆಫೀಸರ್ ಎಂದರೆ ಇನ್ನೊಬ್ಬರಿಗೆ ಎಚ್ ಆರ್ ಎಂದು ಕರೆದು ಹುದ್ದೆ ಕ್ರಿಯೆಟ್ ಮಾಡಿದ್ದಾರೆ. ಉದ್ದೇಶ ಒಂದೇ. ವಿಶ್ವವಿದ್ಯಾಲಯದ ಹಣ ಪೋಲು ಮಾಡುವುದು. ತಾನೂ ತಿನ್ನುವುದು, ತಿನ್ನುವವರಿಗೂ ತಿನ್ನಿಸುವುದು. ಮಂಗಳೂರಿನಲ್ಲಿ ಓಕೆ. ಆದರೆ ಡೆಲ್ಲಿ, ಬೆಂಗಳೂರಿನಲ್ಲಿ ಪಿಆರ್ ಒ ಯಾಕೆ? ಅಷ್ಟೇ ಅಲ್ಲ, ವಿವಿಯ ಹಣದಿಂದ ಬೆಂಗಳೂರಿನಲ್ಲಿ ಗೆಸ್ಟ್ ಹೌಸ್ ಬಾಡಿಗೆಗೆ ತೆಗೆದುಕೊಳ್ಳಲಾಗಿದೆ. ಅದು ಯಾರ ಮೋಜಿಗಾಗಿ? ವರ್ಷಗಟ್ಟಲೆ ಅದಕ್ಕೆ ಲಕ್ಷಗಟ್ಟಲೆ ಬಾಡಿಗೆ ಕೊಡುವುದು ಯಾಕೆ? ಅದು ಹಣ ವ್ಯರ್ಥವಲ್ಲವೇ? ಬೆಂಗಳೂರಿನಲ್ಲಿ ಕಚೇರಿಗೆ ಸಂಬಂಧಪಟ್ಟದ್ದು ಕೆಲಸ ಒಂದು ವೇಳೆ ಇದ್ದರೆ ಸರಕಾರಿ ಅತಿಥಿ ಗೃಹವಿದೆ. ಇಲ್ಲವಾದರೆ ಒಂದೆರಡು ದಿನಗಳಿಗೆ ಬಾಡಿಗೆ ರೂಂ ಮಾಡಿದರೆ ಆಯಿತು? ಅದಕ್ಕಾಗಿ ಇಡೀ ವರ್ಷ ಬಾಡಿಗೆ ಕೊಟ್ಟು ಗೆಸ್ಟ್ ಹೌಸ್ ಮಾಡುವುದು ಯಾಕೆ? ವಿವಿಯ ಹಣದಲ್ಲಿ ಈ ಕಾಮಗಾರಿಯ ಗುಟ್ಟೆನು ಎನ್ನುವುದು ಭೈರಪ್ಪನವರಿಗೆ ಮಾತ್ರ ಗೊತ್ತು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search