• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ, ಪುರೋಹಿತ್ ಅವರಿಗೆ ತಾತ್ಕಾಲಿಕ ನಿರಾಳ

TNN Correspondent Posted On December 28, 2017
0


0
Shares
  • Share On Facebook
  • Tweet It

ಮುಂಬೈ: 2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹಾಗೂ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರ ವಿರುದ್ಧದ ದೋಷಾರೋಪವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೈಬಿಟ್ಟಿದ್ದು, ಇಬ್ಬರಿಗೂ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಆದರೂ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್ ಗಳ ಅನ್ವಯ ವಿಚಾರಣೆ ಮುಂದುವರಿಸಲಾಗುವುದು ಎಂದು ಎನ್ಐಎ ತಿಳಿಸಿದೆ.

ಸೆ.29, 2008ರಲ್ಲಿ ಮಹಾರಾಷ್ಟ್ರ ಮಾಲೇಗಾಂವ್ ಎಂಬಲ್ಲಿ ದ್ವಿಚಕ್ರ ವಾಹನ ಬಳಿಸಿ ಬಾಂಬ್ ಸ್ಫೋಟಿಸಿದ ಕಾರಣ 7 ಮಂದಿ ಮೃತಪಟ್ಟಿದ್ದಲ್ಲದೆ 100ಕ್ಕೂ ಅಧಿಕ ಜನ ಗಾಯಗೊಂಡಿದ್ದರು.

ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹಾಗೂ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಪ್ರಮುಖ ಆರೋಪಿಗಳಾಗಿದ್ದು, ಇಬ್ಬರನ್ನೂ ಬಂಧಿಸಲಾಗಿತ್ತು. ಬಳಿಕ 2017ರ ಏಪ್ರಿಲ್ ನಲ್ಲಿ ಸಾದ್ವಿ ಪ್ರಜ್ಞಾ ಸಿಂಗ್ ಗೆ ಮದ್ರಾಸ್  ಹೈಕೋರ್ಟ್ ಹಾಗೂ ಆಗಸ್ಟ್ ನಲ್ಲಿ ಪುರೋಹಿತ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಒಟ್ಟಿನಲ್ಲಿ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಎನ್ಐಎ ದೋಷಾರೋಪ ಕೈ ಬಿಟ್ಟಿರುವುದು ಇಬ್ಬರೂ ಆರೋಪಿಗಳು ಪ್ರಕರಣದಲ್ಲಿ ನಿರಪರಾಧಿಗಳಾಗಿ ಹೊರಬರುತ್ತಾರೆ ಎಂಬ ಆಶಾಭಾವನೆ ಮೂಡಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search