• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಸ್ಪೃಷ್ಯತೆ ಹಿಂದೂ ಮೌಲ್ಯಗಳಿಗೆ ವಿರುದ್ಧವಾದದ್ದು: ವಿಶ್ವಹಿಂದೂ ಪರಿಷತ್

TNN Correspondent Posted On December 28, 2017
0


0
Shares
  • Share On Facebook
  • Tweet It

ಭುವನೇಶ್ವರ: ಅಸ್ಪೃಷ್ಯತೆ ಹಿಂದೂ ಧರ್ಮದ ಮೌಲ್ಯಗಳಿಗೆ ವಿರುದ್ಧವಾದ್ದು, ಅಸ್ಪೃಷ್ಯತೆಗೆ ಹಿಂದೂ ಧರ್ಮದಲ್ಲಿ ಸ್ಥಾನವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಭುವನೇಶ್ವರದಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಟ್ರಸ್ಟಿಗಳ, ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಡುಪಿಯಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಸಮಾವೇಶದಲ್ಲಿ ಅಸ್ಪೃಷ್ಯತೆ ಆಚರಣೆ ವಿರುದ್ಧ ಮತ್ತು ಅಸ್ಪೃಷ್ಯತೆ ತಡೆಯುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಭುವನೇಶ್ವರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ನ ಮುಖ್ಯವಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಒತ್ತು ನೀಡಲಾಗಿದೆ. 35 ರಾಷ್ಟ್ರಗಳ ಹಿಂದೂ ಧರ್ಮದ ಮುಖಂಡರು ಭಾಗವಹಿಸಿದ್ದು ಈ ಸಭೆಯನ್ನು ವಿಎಚ್ ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ಭಾಯಿ ತೊಗಾಡಿಯಾ ಉದ್ಘಾಟಿಸಿದರು.

ಸಮಾಜಿಕ ಸಮಾನತೆಯ ವಿಭಾಗ ಸದಾ ದೇಶದಲ್ಲಿ ಸಮಾನತೆ ಸಾಧಿಸಲು ಶ್ರಮಿಸುತ್ತಿದೆ. 52 ವರ್ಷಗಳಿಂದ ನಿರಂತರವಾಗಿ ವಿಎಚ್ ಪಿ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಅಸ್ಪೃಷ್ಯತೆ ಮುಕ್ತ ಭಾರತವನ್ನು ನಿರ್ಮಿಸುವ ಪಣ ತೊಡಲಾಗಿದೆ.  ವಿಎಚ್ ಪಿ ದೇಶದ ಹಲವು ಜಿಲ್ಲೆಗಳಲ್ಲಿ 500 ಉನ್ನತ ಜಾತಿಗಳನ್ನು ಗುರುತಿಸಿದ್ದು, ಅವರೆಲ್ಲರೂ ಆರ್ಥಿಕವಾಗಿ, ಸಾಮಾಜಿಕವಾಗಿ ಕೀಳು ಮಟ್ಟದಲ್ಲಿರುವವರ ಸ್ನೇಹ ಬೆಳೆಸಿಕೊಳ್ಳಬೇಕು, ಅವರಿಗೆ ಸಹಾಯ ಮಾಡಬೇಕು ಎಂದು ಸೂಚನೆ ನೀಡಿದೆ.

ಅಲ್ಲದೇ ವಿಶ್ವ ಹಿಂದೂ ಪರಿಷತ್ ನಿಂದ ಡಾ.ಬಿ.ಆರ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಸಂತ ಕಬೀರ, ನಾರಾಯಣ ಗುರು, ರವಿದಾಸ ಸೇರಿ ಹಲವರ ಜಯಂತಿ ಆಚರಿಸಲು ನಿರ್ಧರಿಸಲಾಯಿತು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search