• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಸ್ಪೃಷ್ಯತೆ ಹಿಂದೂ ಮೌಲ್ಯಗಳಿಗೆ ವಿರುದ್ಧವಾದದ್ದು: ವಿಶ್ವಹಿಂದೂ ಪರಿಷತ್

TNN Correspondent Posted On December 28, 2017
0


0
Shares
  • Share On Facebook
  • Tweet It

ಭುವನೇಶ್ವರ: ಅಸ್ಪೃಷ್ಯತೆ ಹಿಂದೂ ಧರ್ಮದ ಮೌಲ್ಯಗಳಿಗೆ ವಿರುದ್ಧವಾದ್ದು, ಅಸ್ಪೃಷ್ಯತೆಗೆ ಹಿಂದೂ ಧರ್ಮದಲ್ಲಿ ಸ್ಥಾನವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಭುವನೇಶ್ವರದಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಟ್ರಸ್ಟಿಗಳ, ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಡುಪಿಯಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಸಮಾವೇಶದಲ್ಲಿ ಅಸ್ಪೃಷ್ಯತೆ ಆಚರಣೆ ವಿರುದ್ಧ ಮತ್ತು ಅಸ್ಪೃಷ್ಯತೆ ತಡೆಯುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಭುವನೇಶ್ವರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ನ ಮುಖ್ಯವಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಒತ್ತು ನೀಡಲಾಗಿದೆ. 35 ರಾಷ್ಟ್ರಗಳ ಹಿಂದೂ ಧರ್ಮದ ಮುಖಂಡರು ಭಾಗವಹಿಸಿದ್ದು ಈ ಸಭೆಯನ್ನು ವಿಎಚ್ ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ಭಾಯಿ ತೊಗಾಡಿಯಾ ಉದ್ಘಾಟಿಸಿದರು.

ಸಮಾಜಿಕ ಸಮಾನತೆಯ ವಿಭಾಗ ಸದಾ ದೇಶದಲ್ಲಿ ಸಮಾನತೆ ಸಾಧಿಸಲು ಶ್ರಮಿಸುತ್ತಿದೆ. 52 ವರ್ಷಗಳಿಂದ ನಿರಂತರವಾಗಿ ವಿಎಚ್ ಪಿ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಅಸ್ಪೃಷ್ಯತೆ ಮುಕ್ತ ಭಾರತವನ್ನು ನಿರ್ಮಿಸುವ ಪಣ ತೊಡಲಾಗಿದೆ.  ವಿಎಚ್ ಪಿ ದೇಶದ ಹಲವು ಜಿಲ್ಲೆಗಳಲ್ಲಿ 500 ಉನ್ನತ ಜಾತಿಗಳನ್ನು ಗುರುತಿಸಿದ್ದು, ಅವರೆಲ್ಲರೂ ಆರ್ಥಿಕವಾಗಿ, ಸಾಮಾಜಿಕವಾಗಿ ಕೀಳು ಮಟ್ಟದಲ್ಲಿರುವವರ ಸ್ನೇಹ ಬೆಳೆಸಿಕೊಳ್ಳಬೇಕು, ಅವರಿಗೆ ಸಹಾಯ ಮಾಡಬೇಕು ಎಂದು ಸೂಚನೆ ನೀಡಿದೆ.

ಅಲ್ಲದೇ ವಿಶ್ವ ಹಿಂದೂ ಪರಿಷತ್ ನಿಂದ ಡಾ.ಬಿ.ಆರ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಸಂತ ಕಬೀರ, ನಾರಾಯಣ ಗುರು, ರವಿದಾಸ ಸೇರಿ ಹಲವರ ಜಯಂತಿ ಆಚರಿಸಲು ನಿರ್ಧರಿಸಲಾಯಿತು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search