• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಸ್ಪೃಷ್ಯತೆ ಹಿಂದೂ ಮೌಲ್ಯಗಳಿಗೆ ವಿರುದ್ಧವಾದದ್ದು: ವಿಶ್ವಹಿಂದೂ ಪರಿಷತ್

TNN Correspondent Posted On December 28, 2017
0


0
Shares
  • Share On Facebook
  • Tweet It

ಭುವನೇಶ್ವರ: ಅಸ್ಪೃಷ್ಯತೆ ಹಿಂದೂ ಧರ್ಮದ ಮೌಲ್ಯಗಳಿಗೆ ವಿರುದ್ಧವಾದ್ದು, ಅಸ್ಪೃಷ್ಯತೆಗೆ ಹಿಂದೂ ಧರ್ಮದಲ್ಲಿ ಸ್ಥಾನವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಭುವನೇಶ್ವರದಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಟ್ರಸ್ಟಿಗಳ, ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಡುಪಿಯಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಸಮಾವೇಶದಲ್ಲಿ ಅಸ್ಪೃಷ್ಯತೆ ಆಚರಣೆ ವಿರುದ್ಧ ಮತ್ತು ಅಸ್ಪೃಷ್ಯತೆ ತಡೆಯುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಭುವನೇಶ್ವರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ನ ಮುಖ್ಯವಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಒತ್ತು ನೀಡಲಾಗಿದೆ. 35 ರಾಷ್ಟ್ರಗಳ ಹಿಂದೂ ಧರ್ಮದ ಮುಖಂಡರು ಭಾಗವಹಿಸಿದ್ದು ಈ ಸಭೆಯನ್ನು ವಿಎಚ್ ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ಭಾಯಿ ತೊಗಾಡಿಯಾ ಉದ್ಘಾಟಿಸಿದರು.

ಸಮಾಜಿಕ ಸಮಾನತೆಯ ವಿಭಾಗ ಸದಾ ದೇಶದಲ್ಲಿ ಸಮಾನತೆ ಸಾಧಿಸಲು ಶ್ರಮಿಸುತ್ತಿದೆ. 52 ವರ್ಷಗಳಿಂದ ನಿರಂತರವಾಗಿ ವಿಎಚ್ ಪಿ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಅಸ್ಪೃಷ್ಯತೆ ಮುಕ್ತ ಭಾರತವನ್ನು ನಿರ್ಮಿಸುವ ಪಣ ತೊಡಲಾಗಿದೆ.  ವಿಎಚ್ ಪಿ ದೇಶದ ಹಲವು ಜಿಲ್ಲೆಗಳಲ್ಲಿ 500 ಉನ್ನತ ಜಾತಿಗಳನ್ನು ಗುರುತಿಸಿದ್ದು, ಅವರೆಲ್ಲರೂ ಆರ್ಥಿಕವಾಗಿ, ಸಾಮಾಜಿಕವಾಗಿ ಕೀಳು ಮಟ್ಟದಲ್ಲಿರುವವರ ಸ್ನೇಹ ಬೆಳೆಸಿಕೊಳ್ಳಬೇಕು, ಅವರಿಗೆ ಸಹಾಯ ಮಾಡಬೇಕು ಎಂದು ಸೂಚನೆ ನೀಡಿದೆ.

ಅಲ್ಲದೇ ವಿಶ್ವ ಹಿಂದೂ ಪರಿಷತ್ ನಿಂದ ಡಾ.ಬಿ.ಆರ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಸಂತ ಕಬೀರ, ನಾರಾಯಣ ಗುರು, ರವಿದಾಸ ಸೇರಿ ಹಲವರ ಜಯಂತಿ ಆಚರಿಸಲು ನಿರ್ಧರಿಸಲಾಯಿತು.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search