• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಫ್ಜಲ್ ಗುರುವಿಗೆ ಜೈ ಎನ್ನುವ ಮನಸ್ಥಿತಿಯವರಿಗೆ ಜಾಧವ್ ಉಗ್ರನಾಗಿ ಕಾಣುವುದರಲ್ಲಿ ಅಚ್ಚರಿಯಿಲ್ಲ ಬಿಡಿ!

TNN Correspondent Posted On December 28, 2017


  • Share On Facebook
  • Tweet It

ಲಖನೌ: ಪ್ರಾಯಶಃ ಹೀಗೆ ಭಾರತ ಬಿಟ್ಟು ಯಾವ ದೇಶದಲ್ಲೂ ನಡೆಯಲಿಕ್ಕಿಲ್ಲ ಬಿಡಿ. ಎಲ್ಲೋ ಇರಾಕ್ ನಲ್ಲಿ ಯುದ್ಧವಾಗಿ ಮುಸ್ಲಿಮರು ಸತ್ತರೆ ಭಾರತದಲ್ಲಿ ಮೇಣದ ಬತ್ತಿ ಉರಿಸುತ್ತಾರೆ. ಸಂಸತ್ತಿನ ಮೇಲೆ ದಾಳಿ ಮಾಡಿದ ಅಫ್ಜಲ್ ಗುರು ಜೆಎನ್ ಯು ವಿದ್ಯಾರ್ಥಿಗಳಿಗೆ ಮಾದರಿಯಾಗುತ್ತಾನೆ. ಪಾಕಿಸ್ತಾನ ಕ್ರಿಕೆಟ್ ನಲ್ಲಿ ಗೆಲುವು ಸಾಧಿಸಿದರೆ ವಿಜಯಪುರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುತ್ತಾರೆ. ಇವರೆಲ್ಲ ದೇಶದ್ರೋಹಿ ಮನಸ್ಥಿತಿಯವರೆಂದು ಬಿಡಿಸಿ ಹೇಳಬೇಕಿಲ್ಲ.

ಇದೇ ರೀತಿ, ಸಮಾಜವಾದಿ ಪಕ್ಷದ ಮುಖಂಡನೊಬ್ಬ ಹೇಳಿಕೆ ನೀಡಿದ್ದು, ಪಾಕಿಸ್ತಾನದಿಂದ ಬಂಧಿತರಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ವಿಷಯದಲ್ಲಿ ಪಾಕಿಸ್ತಾನದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಭಾರತ ಭಯೋತ್ಪಾದಕರನ್ನು ಹೇಗೆ ನಡೆಸಿಕೊಳ್ಳುತ್ತದೆಯೋ ಅದೇ ರೀತಿ ಜಾಧವ್ ಅವರನ್ನೂ ಉಗ್ರರಂತೆಯೇ ಪಾಕಿಸ್ತಾನ ನೋಡಿಕೊಳ್ಳುತ್ತದೆ ಎಂದು ಸಂಸದ ನರೇಶ್ ಅಗರ್ ವಾಲ್ ಹೇಳಿಕೆ ನೀಡಿದ್ದಾರೆ.

ಜಾಧವ್ ಅವರಂತೆ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ಜೈಲುಗಳಲ್ಲಿ ಪಾಕಿಸ್ತಾನಿಯರು ಇದ್ದಾರೆ. ಪಾಕಿಸ್ತಾನ ಸಹ ಬೇಹುಗಾರಿಕೆ ಆರೋಪದಲ್ಲಿ ಜಾಧವ್ ಅವರನ್ನು ಬಂಧಿಸಿ ಇಟ್ಟಿದೆ. ಆದರೆ ಭಾರತೀಯ ಮಾಧ್ಯಮಗಳೇಕೆ ಜಾಧವ್ ಅವರ ಬಗ್ಗೆ ಮಾತ್ರ ಆಸಕ್ತಿ ಹೊಂದಿವೆ ಎಂಬುದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಅಲ್ಲ ಸುಖಾಸುಮ್ಮನೆ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿದ್ದಲ್ಲದೆ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯವೇ ಮಂಗಳಾರತಿ ಮಾಡಿದ್ದರೂ, ಇಡೀ ದೇಶವೇ ಜಾಧವ್ ಪರ ನಿಂತಿದ್ದರೂ, ಅವರನ್ನು ಉಗ್ರರೊಂದಿಗೆ ಸಮೀಕರಿಸುತ್ತಾರಲ್ಲ, ಇಂಥ ಮನಸ್ಥಿತಿಗಳಿಗೆ ಧಿಕ್ಕಾರವಿರಲಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search