• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಪಿ ಪಾಕಿಸ್ತಾನ ಜಾಧವ್, ತಾಯಿ, ಪತ್ನಿಗಷ್ಟೇ ಅಲ್ಲ ಇಡೀ ದೇಶಕ್ಕೆ ಅವಮಾನ ಮಾಡಿದೆ

TNN Correspondent Posted On December 28, 2017
0


0
Shares
  • Share On Facebook
  • Tweet It

ದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಬಂಧಿತನಾಗಿ ಪಾಕಿಸ್ತಾನ ಜೈಲಿನಲ್ಲಿರುವ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡುವ ವೇಳೆ ಜಾಧವ್ ಪತ್ನಿ ಮತ್ತು ತಾಯಿಯನ್ನು ಅವಮಾನಿಸಿರುವುದನ್ನು ಇಂದು ಸುಷ್ಮಾ ಸ್ವರಾಜ್ ಲೋಕಸಭೆಯಲ್ಲಿ ಖಂಡಿಸಿ, ಇದು ಜಾಧವ್ ತಾಯಿ ಮತ್ತು ಪತ್ನಿಗೆ ಮಾಡಿದ ಅವಮಾನವಲ್ಲ ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಇಂದು ಬೆಳಗ್ಗೆ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ‘ಪಾಕಿಸ್ತಾನ ಸರ್ಕಾರ ಕುಲಭೂಷಣ್ ಜಾಧವ್ ಅವರನ್ನು ಕುಟುಂಬಸ್ಥರು ಭೇಟಿ ಮಾಡಲು ಅವಕಾಶ ನೀಡಿ, ಉತ್ತಮ ಬಾಂಧವ್ಯ ಬೆಳೆಸಲು ಮುನ್ನುಡಿ ಬರೆದಿತ್ತು. ಆದರೆ ಪಾಕಿಸ್ತಾನ ತನ್ನ ಹಳೆ ಚಾಳಿ ಮುಂದುವರಿಸಿದ್ದು, ಅದರಲ್ಲೂ ತನ್ನ ಹೀನ ಬುದ್ಧಿ ತೋರಿದೆ ಆಕ್ಷೇಪ ವ್ಯಕ್ತಪಡಿಸಿದರು.

ಭೇಟಿ ವೇಳೆ ಕುಲಭೂಷಣ್ ಜಾಧವ್ ಅವರ ತಾಯಿ ಮತ್ತು ಪತ್ನಿಯ ಕುಂಕುಮ ಅಳಿಸಿ, ಮಾಂಗಲ್ಯ ಸೂತ್ರ ತೆಗೆಸಿ, ಬಟ್ಟೆ ಬದಲಾಯಿಸಿ ದಾರ್ಷ್ಟ್ಯತನ ಮೆರೆದಿದೆ. ಈ ಮೂಲಕ ಕೋಟ್ಯಂತರ ಜನರ ಮನಸ್ಸಿಗೆ ಘಾಸಿ ಉಂಟು ಮಾಡಿದೆ. ಪಾಕಿಸ್ತಾನ ನಿಯಮ ಮೀರಿ ಜಾಧವ್ ಪತ್ನಿ ಮತ್ತು ತಾಯಿಯೊಂದಿಗೆ ವರ್ತಿಸಿದೆ. ಜಾಧವ್ ಧರಿಸಿದ ಶೂಗಳನ್ನು ಪಡೆಯುವ ಮೂಲಕ ಹೀನ ಸ್ಥಿತಿಗೆ ಇಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಾಧವ್ ಜತೆ ಮಾತಾಡುವ ವೇಳೆ ಪಾಕಿಸ್ತಾನ ಸರ್ಕಾರ ಇಂಟರ್ಕಾಮ್ ಬಂದ ಮಾಡುವ ಮೂಲಕ ಮಾತನಾಡಲೂ ಕೂಡ ಅಡ್ಡಿ ಪಡಿಸಿದ್ದಾರೆ ಎಂದು ಜಾಧವ್ ತಾಯಿ ನನಗೆ ತಿಳಿಸಿದ್ದಾರೆ. ಸೌಭಾಗ್ಯವತಿಯರಾದ ಪತ್ನಿಯನ್ನು ವಿಧವೆಯಂತೆ ಜಾಧವ್ ಅವರ ಎದುರು ಬಿಟ್ಟಿದ್ದಾರೆ. ಅಂತಹ ಸ್ಥಿತಿಯಲ್ಲಿ ಜಾಧವ್ ಅವರನ್ನು ಅವರ ಪತ್ನಿ ಹೇಗೆ ನೋಡಬೇಕು ಎಂದು ಸುಷ್ಮಾ ಕೆಲ ಕ್ಷಣ ಗದ್ಗದಿತರಾದರು. ಇದನ್ನು ಭಾರತ ಸದಾ ಖಂಡಿಸುತ್ತದೆ. ಈ ಕುರಿತು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪಾಕಿಸ್ತಾನದ ಪಾಷವಿ ಕೃತ್ಯಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು. ಕುಲಭೂಷಣ್ ರನ್ನು ಭಾರತಕ್ಕೆ ಕರೆದುಕೊಂಡು ಬರಲಾಗುವುದು ಎಂದು ಮಾಹಿತಿ ನೀಡಿದರು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search