• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಪಿ ಪಾಕಿಸ್ತಾನ ಜಾಧವ್, ತಾಯಿ, ಪತ್ನಿಗಷ್ಟೇ ಅಲ್ಲ ಇಡೀ ದೇಶಕ್ಕೆ ಅವಮಾನ ಮಾಡಿದೆ

TNN Correspondent Posted On December 28, 2017
0


0
Shares
  • Share On Facebook
  • Tweet It

ದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಬಂಧಿತನಾಗಿ ಪಾಕಿಸ್ತಾನ ಜೈಲಿನಲ್ಲಿರುವ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡುವ ವೇಳೆ ಜಾಧವ್ ಪತ್ನಿ ಮತ್ತು ತಾಯಿಯನ್ನು ಅವಮಾನಿಸಿರುವುದನ್ನು ಇಂದು ಸುಷ್ಮಾ ಸ್ವರಾಜ್ ಲೋಕಸಭೆಯಲ್ಲಿ ಖಂಡಿಸಿ, ಇದು ಜಾಧವ್ ತಾಯಿ ಮತ್ತು ಪತ್ನಿಗೆ ಮಾಡಿದ ಅವಮಾನವಲ್ಲ ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಇಂದು ಬೆಳಗ್ಗೆ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ‘ಪಾಕಿಸ್ತಾನ ಸರ್ಕಾರ ಕುಲಭೂಷಣ್ ಜಾಧವ್ ಅವರನ್ನು ಕುಟುಂಬಸ್ಥರು ಭೇಟಿ ಮಾಡಲು ಅವಕಾಶ ನೀಡಿ, ಉತ್ತಮ ಬಾಂಧವ್ಯ ಬೆಳೆಸಲು ಮುನ್ನುಡಿ ಬರೆದಿತ್ತು. ಆದರೆ ಪಾಕಿಸ್ತಾನ ತನ್ನ ಹಳೆ ಚಾಳಿ ಮುಂದುವರಿಸಿದ್ದು, ಅದರಲ್ಲೂ ತನ್ನ ಹೀನ ಬುದ್ಧಿ ತೋರಿದೆ ಆಕ್ಷೇಪ ವ್ಯಕ್ತಪಡಿಸಿದರು.

ಭೇಟಿ ವೇಳೆ ಕುಲಭೂಷಣ್ ಜಾಧವ್ ಅವರ ತಾಯಿ ಮತ್ತು ಪತ್ನಿಯ ಕುಂಕುಮ ಅಳಿಸಿ, ಮಾಂಗಲ್ಯ ಸೂತ್ರ ತೆಗೆಸಿ, ಬಟ್ಟೆ ಬದಲಾಯಿಸಿ ದಾರ್ಷ್ಟ್ಯತನ ಮೆರೆದಿದೆ. ಈ ಮೂಲಕ ಕೋಟ್ಯಂತರ ಜನರ ಮನಸ್ಸಿಗೆ ಘಾಸಿ ಉಂಟು ಮಾಡಿದೆ. ಪಾಕಿಸ್ತಾನ ನಿಯಮ ಮೀರಿ ಜಾಧವ್ ಪತ್ನಿ ಮತ್ತು ತಾಯಿಯೊಂದಿಗೆ ವರ್ತಿಸಿದೆ. ಜಾಧವ್ ಧರಿಸಿದ ಶೂಗಳನ್ನು ಪಡೆಯುವ ಮೂಲಕ ಹೀನ ಸ್ಥಿತಿಗೆ ಇಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಾಧವ್ ಜತೆ ಮಾತಾಡುವ ವೇಳೆ ಪಾಕಿಸ್ತಾನ ಸರ್ಕಾರ ಇಂಟರ್ಕಾಮ್ ಬಂದ ಮಾಡುವ ಮೂಲಕ ಮಾತನಾಡಲೂ ಕೂಡ ಅಡ್ಡಿ ಪಡಿಸಿದ್ದಾರೆ ಎಂದು ಜಾಧವ್ ತಾಯಿ ನನಗೆ ತಿಳಿಸಿದ್ದಾರೆ. ಸೌಭಾಗ್ಯವತಿಯರಾದ ಪತ್ನಿಯನ್ನು ವಿಧವೆಯಂತೆ ಜಾಧವ್ ಅವರ ಎದುರು ಬಿಟ್ಟಿದ್ದಾರೆ. ಅಂತಹ ಸ್ಥಿತಿಯಲ್ಲಿ ಜಾಧವ್ ಅವರನ್ನು ಅವರ ಪತ್ನಿ ಹೇಗೆ ನೋಡಬೇಕು ಎಂದು ಸುಷ್ಮಾ ಕೆಲ ಕ್ಷಣ ಗದ್ಗದಿತರಾದರು. ಇದನ್ನು ಭಾರತ ಸದಾ ಖಂಡಿಸುತ್ತದೆ. ಈ ಕುರಿತು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪಾಕಿಸ್ತಾನದ ಪಾಷವಿ ಕೃತ್ಯಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು. ಕುಲಭೂಷಣ್ ರನ್ನು ಭಾರತಕ್ಕೆ ಕರೆದುಕೊಂಡು ಬರಲಾಗುವುದು ಎಂದು ಮಾಹಿತಿ ನೀಡಿದರು.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search