• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಪಿ ಪಾಕಿಸ್ತಾನ ಜಾಧವ್, ತಾಯಿ, ಪತ್ನಿಗಷ್ಟೇ ಅಲ್ಲ ಇಡೀ ದೇಶಕ್ಕೆ ಅವಮಾನ ಮಾಡಿದೆ

TNN Correspondent Posted On December 28, 2017
0


0
Shares
  • Share On Facebook
  • Tweet It

ದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಬಂಧಿತನಾಗಿ ಪಾಕಿಸ್ತಾನ ಜೈಲಿನಲ್ಲಿರುವ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡುವ ವೇಳೆ ಜಾಧವ್ ಪತ್ನಿ ಮತ್ತು ತಾಯಿಯನ್ನು ಅವಮಾನಿಸಿರುವುದನ್ನು ಇಂದು ಸುಷ್ಮಾ ಸ್ವರಾಜ್ ಲೋಕಸಭೆಯಲ್ಲಿ ಖಂಡಿಸಿ, ಇದು ಜಾಧವ್ ತಾಯಿ ಮತ್ತು ಪತ್ನಿಗೆ ಮಾಡಿದ ಅವಮಾನವಲ್ಲ ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಇಂದು ಬೆಳಗ್ಗೆ ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ‘ಪಾಕಿಸ್ತಾನ ಸರ್ಕಾರ ಕುಲಭೂಷಣ್ ಜಾಧವ್ ಅವರನ್ನು ಕುಟುಂಬಸ್ಥರು ಭೇಟಿ ಮಾಡಲು ಅವಕಾಶ ನೀಡಿ, ಉತ್ತಮ ಬಾಂಧವ್ಯ ಬೆಳೆಸಲು ಮುನ್ನುಡಿ ಬರೆದಿತ್ತು. ಆದರೆ ಪಾಕಿಸ್ತಾನ ತನ್ನ ಹಳೆ ಚಾಳಿ ಮುಂದುವರಿಸಿದ್ದು, ಅದರಲ್ಲೂ ತನ್ನ ಹೀನ ಬುದ್ಧಿ ತೋರಿದೆ ಆಕ್ಷೇಪ ವ್ಯಕ್ತಪಡಿಸಿದರು.

ಭೇಟಿ ವೇಳೆ ಕುಲಭೂಷಣ್ ಜಾಧವ್ ಅವರ ತಾಯಿ ಮತ್ತು ಪತ್ನಿಯ ಕುಂಕುಮ ಅಳಿಸಿ, ಮಾಂಗಲ್ಯ ಸೂತ್ರ ತೆಗೆಸಿ, ಬಟ್ಟೆ ಬದಲಾಯಿಸಿ ದಾರ್ಷ್ಟ್ಯತನ ಮೆರೆದಿದೆ. ಈ ಮೂಲಕ ಕೋಟ್ಯಂತರ ಜನರ ಮನಸ್ಸಿಗೆ ಘಾಸಿ ಉಂಟು ಮಾಡಿದೆ. ಪಾಕಿಸ್ತಾನ ನಿಯಮ ಮೀರಿ ಜಾಧವ್ ಪತ್ನಿ ಮತ್ತು ತಾಯಿಯೊಂದಿಗೆ ವರ್ತಿಸಿದೆ. ಜಾಧವ್ ಧರಿಸಿದ ಶೂಗಳನ್ನು ಪಡೆಯುವ ಮೂಲಕ ಹೀನ ಸ್ಥಿತಿಗೆ ಇಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಾಧವ್ ಜತೆ ಮಾತಾಡುವ ವೇಳೆ ಪಾಕಿಸ್ತಾನ ಸರ್ಕಾರ ಇಂಟರ್ಕಾಮ್ ಬಂದ ಮಾಡುವ ಮೂಲಕ ಮಾತನಾಡಲೂ ಕೂಡ ಅಡ್ಡಿ ಪಡಿಸಿದ್ದಾರೆ ಎಂದು ಜಾಧವ್ ತಾಯಿ ನನಗೆ ತಿಳಿಸಿದ್ದಾರೆ. ಸೌಭಾಗ್ಯವತಿಯರಾದ ಪತ್ನಿಯನ್ನು ವಿಧವೆಯಂತೆ ಜಾಧವ್ ಅವರ ಎದುರು ಬಿಟ್ಟಿದ್ದಾರೆ. ಅಂತಹ ಸ್ಥಿತಿಯಲ್ಲಿ ಜಾಧವ್ ಅವರನ್ನು ಅವರ ಪತ್ನಿ ಹೇಗೆ ನೋಡಬೇಕು ಎಂದು ಸುಷ್ಮಾ ಕೆಲ ಕ್ಷಣ ಗದ್ಗದಿತರಾದರು. ಇದನ್ನು ಭಾರತ ಸದಾ ಖಂಡಿಸುತ್ತದೆ. ಈ ಕುರಿತು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪಾಕಿಸ್ತಾನದ ಪಾಷವಿ ಕೃತ್ಯಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು. ಕುಲಭೂಷಣ್ ರನ್ನು ಭಾರತಕ್ಕೆ ಕರೆದುಕೊಂಡು ಬರಲಾಗುವುದು ಎಂದು ಮಾಹಿತಿ ನೀಡಿದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search