• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ರಕ್ಷಣೆಗಾಗಿ ಜೀವ ನೀಡುವ ಸಿಖ್ ರನ್ನೇ ಐಸಿಸ್ ಬೇಹುಗಾರರೆಂದು ಬಿರುಕು ಹುಟ್ಟಿಸಲು ವಿಫಲ ಯತ್ನ ನಡೆಸುವವನ ಕತೆ ಕೇಳಿ..

TNN Correspondent Posted On December 29, 2017
0


0
Shares
  • Share On Facebook
  • Tweet It

‘ಭಾರತದ ಸೈನ್ಯದಲ್ಲಿರುವ ಸಿಖ್ ರೇ ಐಸಿಸ್ ಉಗ್ರ ಸಂಘಟನೆ ಪರ ಬೇಹುಗಾರಿಕೆ ನಡೆಸುತ್ತಾರೆ. ಖಲಿಸ್ತಾನ ಪ್ರತ್ಯೇಕ ರಾಷ್ಟ್ರವಾಗಬೇಕು. ಲಕ್ಷಾಂತರ ಸಿಖ್ ರು ಅವರ ಸ್ವಂತ ರಾಷ್ಟ್ರಕ್ಕಾಗಿ ಹೋರಾಟ ಮಾಡಲು ಸಜ್ಜಾಗಿದ್ದಾರೆ. ಭಾರತದೊಂದಿಗೆ ಅಷ್ಟೇ ವಿಶ್ವದೊಂದಿಗೆ ಕೂಡ ಅವರು ಹೋರಾಟ ನಡೆಸಲಿದ್ದಾರೆ. ಇದು ಸಿಖ್ ರ ನರಮೇದ ನಡೆಸಿದ ಹಿಂದೂ ಮತ್ತು ಬ್ರಾಹ್ಮಿಣರ ಆಡಳಿತದ ವಿರುದ್ಧ. ಭಾರತ ಆ ನರಮೇದಕ್ಕೆ ತಕ್ಕ ಬೆಲೆ ತೆರಬೇಕಾಗಿದೆ’…

ಇದು ಸೋವಿಯತ್ ತ್ತು ಅಪ್ಘನ್ ಯುದ್ಧದಲ್ಲಿ ಪಾಕ್ ವಕ್ತಾರ, ಪ್ರಸ್ತುತ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ವಿಶ್ಲೇಷಕ, ರಕ್ಷಣಾ ತಜ್ಞ ಜೈದ್ ಹಮೀದ್ ತನ್ನ ಟ್ವೀಟರ್ ನಲ್ಲಿ ಬರೆದುಕೊಂಡಿರುವ ವಿಷಯ. ಹೀಗೆ ಅಖಂಡ ಭಾರತದವನ್ನು ಹೇಗೆ ಬ್ರಿಟಿಷರು ಒಡೆದು ಆಳಿದರೋ ಅವರ ಹಾಗೆಯೇ ಟ್ವೀಟರ್ ನಲ್ಲಿ ಜೈದ್ ಹಮೀದ್ ಎಂಬಾತ  ಬರೆದುಕೊಂಡು, ಭಾರತದಲ್ಲಿ ಬಿರುಕು ಮೂಡಿಸುವ ವಿಷಯ ವ್ಯಕ್ತಪಡಿಸಿದ್ದಾರೆ.

ನೂರಾರು ವರ್ಷಗಳಿಂದ ಶ್ರದ್ಧೆ, ಭಕ್ತಿ, ಶಕ್ತಿಯಿಂದ ದೇಶದ ಏಕತೆಗೆ ದುಡಿಯುತ್ತಿರುವ ಸಿಖ್ ರ ಮೇಲೆ ಅನುಮಾನ ಹುಟ್ಟಿಸುವ ಈತನ ಟ್ವೀಟರ್ ಹಿಂದಿನ ಉದ್ದೇಶ ಮಾತ್ರ ಸ್ಪಷ್ಟ. ಭಾರತದಲ್ಲಿ ಆಂತರಿಕ ಗಲಭೆ ಸೃಷ್ಟಿಸಿ, ಜನರ ಒಗ್ಗಟ್ಟು ಮುರಿಯಬೇಕು ಎಂಬ ದುರುದ್ದೇಶ ಈತನದ್ದು.

ಭಾರತದ ಸ್ವಾತಂತ್ರ್ಯ, ಏಕತೆ ತಮ್ಮ ರಕ್ತ ಬಸಿದು ಸೇವೆ ನೀಡುತ್ತಿರುವ ಸಿಖ್ ರ ಮೇಲೆ ಭಾರತ ಅನುಮಾನ ಪಡಬೇಕು ಎಂಬ ದೂರಾಲೋಚನೆಯ ಟ್ವೀಟ್ ಜೈದ್ ಹಮೀದ್ ಮಾಡಿದ್ದಾರೆ. ಪದೇ ಪದೆ ಇಂದಿರಾ ಗಾಂಧಿ ಆಡಳಿತದಲ್ಲಿ ನಡೆದ ಸಿಖ್ ರ ನರಮೇಧಕ್ಕೆ ಪ್ರತಿಕಾರ ತೀರಿಸಿಕೊಳ್ಳಲಿದ್ದಾರೆ ಎಂದು ಹಳೆ ನೆನಪುಗಳನ್ನು ಕೆರಳಿಸಿ, ದೇಶದ ಆಂತರಿಕ ಭದ್ರತೆಗೆ ಹೊಡೆತ ನೀಡುವ ಪಾಪಿಸ್ತಾನದ ಜೈದ್ ಹಮೀದ್ ಉದ್ದೇಶ ಸ್ಪಷ್ಟವಾಗಿದೆ. ಇದುವರೆಗೆ ದೇಶಕ್ಕೆ ಕಂಟಕವಾಗಿರುವ ಮುಸ್ಲಿಂ ಮೂಲಭೂತವಾದಿಗಳನ್ನು ಉಲ್ಲೇಖಿಸದೆ, ಕೇವಲ ಖಲಿಸ್ತಾನದ ನೆಪವಿಟ್ಟುಕೊಂಡು ಜೈದ್ ಹಮೀದ್ ತನ್ನ ರಾಷ್ಟ್ರ ಪಾಕಿಸ್ತಾನ ಹಿತ ಕಾಯಲು ಭಾರತದಲ್ಲಿರುವ ಧರ್ಮಗಳ ಮಧ್ಯೆ, ರಾಜ್ಯಗಳ ಮಧ್ಯೆ ಬೆಂಕಿ ಹಚ್ಚುವ ಕಾರ್ಯ ಮಾಡುತ್ತಿದ್ದಾನೆ.

ಭಾರತದ ಸೈನ್ಯದಲ್ಲೇ ಅತ್ಯಂತ ಬಲಿಷ್ಠ ಸೈನಿಕರ ತಂಡವನ್ನು ಹೊಂದಿರುವ ಮತ್ತು ನಿಷ್ಠೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿರುವ ಸಿಖ್ ರೆಜಿಮೆಂಟ್ ನ ಸೇವೆ ಅಪಾರ. ಇಡೀ ವಿಶ್ವದಲ್ಲೇ ಅತ್ಯಂತ ಬಲಿಷ್ಠವಾಗಿರುವ ಸಿಖ್ ರೆಜಿಮೆಂಟ್ ಭಾರತದ ರಕ್ಷಣಾ ವ್ಯವಸ್ಥೆಗೆ ಒಂದು ಬಲ ನೀಡುತ್ತಿದೆ. ಸಿಖ್ ಸೈನಿಕರ ಮಧ್ಯೆ ವಿಷ ಬೀಜ ಬಿತ್ತಲು, ಒಡಕು ಮೂಡಿಸಲು ಜೈದ್ ಹಮೀದ್ ಇತರಹ ಟ್ವೀಟ್ ಮಾಡಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಸಿಖ್ ಸೈನ್ಯವನ್ನು ಅನುಮಾನಿಸಿ, ಸಿಖ್ ರನ್ನು ಪ್ರಚೋದಿಸಿ ಪಾಕಿಸ್ತಾನ ಲಾಭ ಪಡೆಯಲು ಹವಣಿಸುತ್ತಿರುವುದು ಇಲ್ಲಿ ಸ್ಪಷ್ಟವಾಗಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search