• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸಂವಿಧಾನ ಬದಲಾಯಿಸಿದರೆ ರಕ್ತಪಾತವಾಗುತ್ತದೆ ಎನ್ನುವವರು 42ನೇ ತಿದ್ದುಪಡಿ ಬಗ್ಗೆ ಏನೆನುತ್ತಾರೆ?

ವಿಶಾಲ್ ಗೌಡ, ಕುಶಾಲನಗರ Posted On December 29, 2017
0


0
Shares
  • Share On Facebook
  • Tweet It

ಕೇಂದ್ರ ಕೌಶಲಾಭಿವೃದ್ಧಿ ಖಾತೆ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ “ನಾವು ಸಂವಿಧಾನ ಬದಲಾಯಿಸುತ್ತೇವೆ” ಎಂದು ಹೇಳುತ್ತಲೇ, ಭಾರಿ ವಿರೋಧ ವ್ಯಕ್ತವಾಗಿದೆ. ಅನಂತಕುಮಾರ್ ಒಬ್ಬ ಸಂವಿಧಾನ ವಿರೋಧಿ, ಸಂವಿಧಾನ ಬದಲಾಯಿಸಿದರೆ ರಕ್ತಪಾತವಾಗುತ್ತದೆ ಎಂದು ಕಾಂಗ್ರೆಸ್ ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ವಿರೋಧ ವ್ಯಕ್ತವಾಗಿದೆ. ಕೊನೆಗೆ ಅನಂತಕುಮಾರ್ ಸಂಸತ್ತಿನಲ್ಲಿ ಕ್ಷಮೆ ಕೇಳುವಂತಾಗಿದೆ.

ಹಾಗಾದರೆ ಇದುವರೆಗೆ ಸಂವಿಧಾನ ಬದಲಾವಣೆಯೇ ಆಗಿಲ್ಲವೇ? ಬದಲಾಯಿಸಿಲ್ಲ ಎಂದರೆ 100ಕ್ಕೂ ಅಧಿಕ ಬಾರಿ ತಿದ್ದುಪಡಿ ಹೇಗೆ ತರಲಾಯಿತು? ತಿದ್ದುಪಡಿ ತಂದಮೇಲೆ ಬದಲಾವಣೆಯಾಯಿತು ಎಂದರ್ಥವಲ್ಲವೇ? ಈ ಕನಿಷ್ಠ ಜ್ಞಾನವೂ ಮಲ್ಲಿಕಾರ್ಜುನ ಖರ್ಗೆಯವರಿಗೆ ಇಲ್ಲವೇ? ಕಾಂಗ್ರೆಸ್ ಸರ್ಕಾರದಲ್ಲೇ ಬಹುತೇಕ ತಿದ್ದುಪಡಿ ತರಲಾಗಿದೆ ಎಂಬುದು ಖರ್ಗೆಯವರಿಗೆ ಮರೆತು ಹೋಯಿತೇ? ಅವರಿಗೆ ಸಂವಿಧಾನದ 42ನೇ ತಿದ್ದುಪಡಿಯ ಬಗ್ಗೆ ಗೊತ್ತಿದೆಯೇ?

ಹೌದು, ಇದುವರೆಗೂ ಸಂವಿಧಾನಕ್ಕೆ ತಂದ 100ಕ್ಕೂ ಅಧಿಕ ತಿದ್ದುಪಡಿ ಮಾಡಿದ ತೂಕವೂ ಒಂದೇ, ಸಂವಿಧಾನದ 42ನೇ ತಿದ್ದುಪಡಿಯೂ ಒಂದೇ. ಹೀಗೆ ಎನ್ನುವಷ್ಟರಮಟ್ಟಿಗೆ 42ನೇ ತಿದ್ದುಪಡಿ ಮೂಲಕ ಸಂವಿಧಾನದಲ್ಲಿ ಹಲವು ಮಾರ್ಪಾಡು ಮಾಡಲಾಗಿದೆ.

ಹಾಗಿದ್ದರೂ ಇದರ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರೇಕೆ ಹೇಳುವುದಿಲ್ಲ. 1976ರಲ್ಲಿ ಇಂದೇ ಕಾಂಗ್ರೆಸ್ ಪಕ್ಷದ ಇಂದಿರಾಗಾಂಧಿ ಅವರ ನೇತೃತ್ವದಲ್ಲೇ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಹೀಗೆ ಸಂವಿಧಾನ ಮಾರ್ಪಾಡು ಮಾಡಿದವರು ಕಾಂಗ್ರೆಸ್ಸಿನವರೇ ಅಲ್ಲವೇ ಖರ್ಗೆಯವರೇ?

42ನೇ ತಿದ್ದುಪಡಿ ಮೂಲಕ ಸಂವಿಧಾನದ ಪ್ರಸ್ತಾವನೆ (ಪ್ರಿಯಾಂಬಲ್)ಗೆ ಸಮಾಜವಾದ, ಸಮಗ್ರತೆ ಹಾಗೂ ಜಾತ್ಯತೀತ ವಾದ ಎಂಬ ಪದ ಸೇರಿಸಲಾಯಿತು. ಮೂಲಭೂತ ಕರ್ತವ್ಯಗಳನ್ನು ಸೇರಿಸಲಾಯಿತು. ನಾಲ್ಕು ನಿರ್ದೇಶನಾತ್ಮಕ ತತ್ವ, ರಾಜ್ಯಗಳ ಮೇಲೆ ರಾಷ್ಟ್ರಪತಿಯವರು ಹೇರುವ ತುರ್ತುಪರಿಸ್ಥಿತಿಗೆ ಇದ್ದ ಆರು ತಿಂಗಳ ಸಮಯವನ್ನು ವರ್ಷಕ್ಕೆ ಹೆಚ್ಚಿಸಲಾಯಿತು. ಅಲ್ಲದೆ ನ್ಯಾಯಾಂಗ ಸೇರಿ ಹಲವು ಕ್ಷೇತ್ರಗಳಲ್ಲಿ ಒಂದೇ ತಿದ್ದುಪಡಿ ಮೂಲಕ ವಿವಿಧ ಬದಲಾವಣೆ ಮಾಡಲಾಯಿತು.

ಈ ಎಲ್ಲ ಕಾರಣಗಳಿಂದಲೇ ಸಂವಿಧಾನದ 42ನೇ ತಿದ್ದುಪಡಿಯನ್ನೇ ಮಿನಿ ಸಂವಿಧಾನ ಎಂದು ಕರೆಯುತ್ತಾರೆ. ಅಷ್ಟು ದೊಡ್ಡ ಮಟ್ಟದಲ್ಲಿ ತಿದ್ದುಪಡಿ ಮಾಡಲಾಗಿದೆ. ಹೀಗಿದ್ದರೂ ಅನಂತಕುಮಾರ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸುವುದೇಕೆ? ರಕ್ತಪಾತವಾಗುತ್ತದೆ ಎಂದು ಬೆದರಿಸುವುದೇಕೆ ಖರ್ಗೆಯವರೇ? ಅನಂತಕುಮಾರ್ ಅವರ ಹೇಳಿಕೆ ಟೀಕಿಸುವ ಮೊದಲು ಸಂವಿಧಾನದ 42ನೇ ತಿದ್ದುಪಡಿ ನೆನಪಿಸಿಕೊಳ್ಳಿ. ಅಷ್ಟಕ್ಕೂ ಸಂವಿಧಾನದ ತಿದ್ದುಪಡಿಗೆ ಅವಕಾಶವಿದೆ ಎಂದು ಅದೇ ಸಂವಿಧಾನವೇ ಹೇಳಿದೆ ಎಂಬುದು ಸಹ ನಿಮಗೆ ಗೊತ್ತಿಲ್ಲ ಎಂದರೆ ಎಂಥ ಬೌದ್ಧಿಕ ದಿವಾಳಿತನ ನಿಮಗೆ ಆವರಿಸಿರಬೇಕು ಎಂಬ ಅನುಮಾನ ಕಾಡುತ್ತಿದೆ. ಛೇ!

 

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
ವಿಶಾಲ್ ಗೌಡ, ಕುಶಾಲನಗರ March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
ವಿಶಾಲ್ ಗೌಡ, ಕುಶಾಲನಗರ March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search