• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸಂವಿಧಾನ ಬದಲಾಯಿಸಿದರೆ ರಕ್ತಪಾತವಾಗುತ್ತದೆ ಎನ್ನುವವರು 42ನೇ ತಿದ್ದುಪಡಿ ಬಗ್ಗೆ ಏನೆನುತ್ತಾರೆ?

ವಿಶಾಲ್ ಗೌಡ, ಕುಶಾಲನಗರ Posted On December 29, 2017
0


0
Shares
  • Share On Facebook
  • Tweet It

ಕೇಂದ್ರ ಕೌಶಲಾಭಿವೃದ್ಧಿ ಖಾತೆ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ “ನಾವು ಸಂವಿಧಾನ ಬದಲಾಯಿಸುತ್ತೇವೆ” ಎಂದು ಹೇಳುತ್ತಲೇ, ಭಾರಿ ವಿರೋಧ ವ್ಯಕ್ತವಾಗಿದೆ. ಅನಂತಕುಮಾರ್ ಒಬ್ಬ ಸಂವಿಧಾನ ವಿರೋಧಿ, ಸಂವಿಧಾನ ಬದಲಾಯಿಸಿದರೆ ರಕ್ತಪಾತವಾಗುತ್ತದೆ ಎಂದು ಕಾಂಗ್ರೆಸ್ ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ವಿರೋಧ ವ್ಯಕ್ತವಾಗಿದೆ. ಕೊನೆಗೆ ಅನಂತಕುಮಾರ್ ಸಂಸತ್ತಿನಲ್ಲಿ ಕ್ಷಮೆ ಕೇಳುವಂತಾಗಿದೆ.

ಹಾಗಾದರೆ ಇದುವರೆಗೆ ಸಂವಿಧಾನ ಬದಲಾವಣೆಯೇ ಆಗಿಲ್ಲವೇ? ಬದಲಾಯಿಸಿಲ್ಲ ಎಂದರೆ 100ಕ್ಕೂ ಅಧಿಕ ಬಾರಿ ತಿದ್ದುಪಡಿ ಹೇಗೆ ತರಲಾಯಿತು? ತಿದ್ದುಪಡಿ ತಂದಮೇಲೆ ಬದಲಾವಣೆಯಾಯಿತು ಎಂದರ್ಥವಲ್ಲವೇ? ಈ ಕನಿಷ್ಠ ಜ್ಞಾನವೂ ಮಲ್ಲಿಕಾರ್ಜುನ ಖರ್ಗೆಯವರಿಗೆ ಇಲ್ಲವೇ? ಕಾಂಗ್ರೆಸ್ ಸರ್ಕಾರದಲ್ಲೇ ಬಹುತೇಕ ತಿದ್ದುಪಡಿ ತರಲಾಗಿದೆ ಎಂಬುದು ಖರ್ಗೆಯವರಿಗೆ ಮರೆತು ಹೋಯಿತೇ? ಅವರಿಗೆ ಸಂವಿಧಾನದ 42ನೇ ತಿದ್ದುಪಡಿಯ ಬಗ್ಗೆ ಗೊತ್ತಿದೆಯೇ?

ಹೌದು, ಇದುವರೆಗೂ ಸಂವಿಧಾನಕ್ಕೆ ತಂದ 100ಕ್ಕೂ ಅಧಿಕ ತಿದ್ದುಪಡಿ ಮಾಡಿದ ತೂಕವೂ ಒಂದೇ, ಸಂವಿಧಾನದ 42ನೇ ತಿದ್ದುಪಡಿಯೂ ಒಂದೇ. ಹೀಗೆ ಎನ್ನುವಷ್ಟರಮಟ್ಟಿಗೆ 42ನೇ ತಿದ್ದುಪಡಿ ಮೂಲಕ ಸಂವಿಧಾನದಲ್ಲಿ ಹಲವು ಮಾರ್ಪಾಡು ಮಾಡಲಾಗಿದೆ.

ಹಾಗಿದ್ದರೂ ಇದರ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರೇಕೆ ಹೇಳುವುದಿಲ್ಲ. 1976ರಲ್ಲಿ ಇಂದೇ ಕಾಂಗ್ರೆಸ್ ಪಕ್ಷದ ಇಂದಿರಾಗಾಂಧಿ ಅವರ ನೇತೃತ್ವದಲ್ಲೇ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಹೀಗೆ ಸಂವಿಧಾನ ಮಾರ್ಪಾಡು ಮಾಡಿದವರು ಕಾಂಗ್ರೆಸ್ಸಿನವರೇ ಅಲ್ಲವೇ ಖರ್ಗೆಯವರೇ?

42ನೇ ತಿದ್ದುಪಡಿ ಮೂಲಕ ಸಂವಿಧಾನದ ಪ್ರಸ್ತಾವನೆ (ಪ್ರಿಯಾಂಬಲ್)ಗೆ ಸಮಾಜವಾದ, ಸಮಗ್ರತೆ ಹಾಗೂ ಜಾತ್ಯತೀತ ವಾದ ಎಂಬ ಪದ ಸೇರಿಸಲಾಯಿತು. ಮೂಲಭೂತ ಕರ್ತವ್ಯಗಳನ್ನು ಸೇರಿಸಲಾಯಿತು. ನಾಲ್ಕು ನಿರ್ದೇಶನಾತ್ಮಕ ತತ್ವ, ರಾಜ್ಯಗಳ ಮೇಲೆ ರಾಷ್ಟ್ರಪತಿಯವರು ಹೇರುವ ತುರ್ತುಪರಿಸ್ಥಿತಿಗೆ ಇದ್ದ ಆರು ತಿಂಗಳ ಸಮಯವನ್ನು ವರ್ಷಕ್ಕೆ ಹೆಚ್ಚಿಸಲಾಯಿತು. ಅಲ್ಲದೆ ನ್ಯಾಯಾಂಗ ಸೇರಿ ಹಲವು ಕ್ಷೇತ್ರಗಳಲ್ಲಿ ಒಂದೇ ತಿದ್ದುಪಡಿ ಮೂಲಕ ವಿವಿಧ ಬದಲಾವಣೆ ಮಾಡಲಾಯಿತು.

ಈ ಎಲ್ಲ ಕಾರಣಗಳಿಂದಲೇ ಸಂವಿಧಾನದ 42ನೇ ತಿದ್ದುಪಡಿಯನ್ನೇ ಮಿನಿ ಸಂವಿಧಾನ ಎಂದು ಕರೆಯುತ್ತಾರೆ. ಅಷ್ಟು ದೊಡ್ಡ ಮಟ್ಟದಲ್ಲಿ ತಿದ್ದುಪಡಿ ಮಾಡಲಾಗಿದೆ. ಹೀಗಿದ್ದರೂ ಅನಂತಕುಮಾರ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸುವುದೇಕೆ? ರಕ್ತಪಾತವಾಗುತ್ತದೆ ಎಂದು ಬೆದರಿಸುವುದೇಕೆ ಖರ್ಗೆಯವರೇ? ಅನಂತಕುಮಾರ್ ಅವರ ಹೇಳಿಕೆ ಟೀಕಿಸುವ ಮೊದಲು ಸಂವಿಧಾನದ 42ನೇ ತಿದ್ದುಪಡಿ ನೆನಪಿಸಿಕೊಳ್ಳಿ. ಅಷ್ಟಕ್ಕೂ ಸಂವಿಧಾನದ ತಿದ್ದುಪಡಿಗೆ ಅವಕಾಶವಿದೆ ಎಂದು ಅದೇ ಸಂವಿಧಾನವೇ ಹೇಳಿದೆ ಎಂಬುದು ಸಹ ನಿಮಗೆ ಗೊತ್ತಿಲ್ಲ ಎಂದರೆ ಎಂಥ ಬೌದ್ಧಿಕ ದಿವಾಳಿತನ ನಿಮಗೆ ಆವರಿಸಿರಬೇಕು ಎಂಬ ಅನುಮಾನ ಕಾಡುತ್ತಿದೆ. ಛೇ!

 

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
ವಿಶಾಲ್ ಗೌಡ, ಕುಶಾಲನಗರ July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
ವಿಶಾಲ್ ಗೌಡ, ಕುಶಾಲನಗರ July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search