• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಲಾಮಿಗೆ ಮತಾಂತರವಾಗಲು ಒಪ್ಪಲಿಲ್ಲ ಎಂದು ಸೊಸೆಯನ್ನೇ ಅತ್ಯಾಚಾರವೆಸಗಿ ಕೊಲೆ ಮಾಡಿದ ಮಾವ!

TNN Correspondent Posted On December 29, 2017
0


0
Shares
  • Share On Facebook
  • Tweet It

ರಾಂಚಿ: ದೇಶದಲ್ಲಿ ನಾಯಿಕೊಡೆಯಂತೆ ಲವ್ ಜಿಹಾದ್ ಪ್ರಕರಣಗಳು ಕೇಳಿಬರುತ್ತಿರುವ ಬೆನ್ನಲ್ಲೇ ಜಾರ್ಖಂಡ್ ನ ರಾಮಗಡ ಜಿಲ್ಲೆಯಲ್ಲಿ ಸೊಸೆ (ಮಗನ ಹೆಂಡತಿ) ಇಸ್ಲಾಮಿಗೆ ಮತಾಂತರವಾಗಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಕುಪಿತಗೊಂಡ ವ್ಯಕ್ತಿ ತನ್ನ ಸಂಬಂಧಿಕರೊಂದಿಗೆ ಸೇರಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಲ್ಲದೇ, ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಳೆದ ನವೆಂಬರ್ 6ರಂದು ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಗಾರ್ನಾ ನದಿಯಲ್ಲಿ ಕೈ, ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಬಳಿಕ ಸಾವಿನ ಜಾಡು ಹಿಡಿದು ಹೊರಟ ಪೊಲೀಸರು ಮೊದಲು ಮಹಿಳೆಯ ಪತಿ ಆದಿಲ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಆಗ ನಿಜಾಂಶ ಗೊತ್ತಾಗಿದೆ.

ಆದಿಲ್ ಹಾಗೂ ಮಹಿಳೆ ಪರಸ್ಪರ ಪ್ರೀತಿಸುತ್ತಿದ್ದು, ಯುವತಿಯ ಕುಟುಂಬಸ್ಥರ ವಿರೋಧದ ನಡುವೆಯೇ ಮದುವೆಯಾಗಿದ್ದರು. ಆದರೆ ಮದುವೆಯಾದ ಬಳಿಕ ಆದಿಲ್ ಕುಟುಂಬಸ್ಥರು ಮಹಿಳೆಗೆ ಇಸ್ಲಾಂಗೆ ಮತಾಂತರವಾಗು ಎಂದು ಒತ್ತಾಯಿಸಿದ್ದಾರೆ.

ಆದರೆ ಮಹಿಳೆ ಇದಕ್ಕೆ ಒಪ್ಪದ ಕಾರಣ ಆದಿಲ್ ಅಪ್ಪ ಹಾಗೂ ಆತನ ಚಿಕ್ಕಪ್ಪ ಸೇರಿ ಹಲವು ಸಾಮೂಹಿಕವಾಗಿ ಅತ್ಯಾಚಾರ ಎಸಗಿ ನದಿಯಲ್ಲಿ ಬಿಸಾಕಿದ್ದಾರೆ ಎಂದು ಆದಿಲ್ ಬಾಯಿಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಮಹಿಳೆಯನ್ನು ತಾವೇ ಕೊಲೆ ಮಾಡಿ ನದಿಗೆ ಬಿಸಾಕಿದರೂ ಆದಿಲ್ ಕುಟುಂಬಸ್ಥರು ಆಕೆಗೆ ಬೇರೆ ಸಂಬಂಧವಿತ್ತು, ಓಡಿ ಹೋಗಿದ್ದಾಳೆ ಎಂದು ಜನರನ್ನು ದಾರಿತಪ್ಪಿಸಿದ್ದರು ಎಂದು ತಿಳಿದುಬಂದಿದೆ. ಆದಾಗ್ಯೂ ಮುಸ್ಲಿಂ ಕುಟುಂಬಸ್ಥರ ವಿರುದ್ಧ ಹಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search