• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳ ಸಿಎಂ ದ್ವೇಷ ರಾಜಕೀಯ: ಭಾಗವತ್ ರಾಷ್ಟ್ರಧ್ವಜ ಹಾರಿಸಿದ ಶಾಲೆ ವಿರುದ್ಧ ಕ್ರಮಕ್ಕೆ ಆದೇಶ

TNN Correspondent Posted On December 29, 2017
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಆರ್ ಎಸ್ ಎಸ್ ಮುಖಂಡರು ಮತ್ತು ಬೆಂಬಲಿಗರ ವಿರುದ್ಧ ಸಿಪಿಐ(ಎಂ) ಸರ್ಕಾರ ದ್ವೇಷ ರಾಜಕಾರಣ ಮಾಡಲಾಗುತ್ತಿದೆ. ಆರ್ ಎಸ್ ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಸ್ವಾತಂತ್ರ್ಯ ದಿನಾಚರಣೆ ಆಗಸ್ಟ್ 15ರಂದು ರಾಷ್ಟ್ರ ಧ್ವಜಾರೋಹಣ ಮಾಡಲು ಅವಕಾಶ ನೀಡಿದ ಪಲ್ಲಕಾಡದಲ್ಲಿರುವ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆದೇಶ ಹೊರಡಿಸಿದ್ದಾರೆ.

ಪಲ್ಲಕ್ಕಾಡ್ ಶಾಲೆ ಮುಖ್ಯೋಪಾಧ್ಯಯ ಮತ್ತು ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಇನ್ನು ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಲ್ಲಿ ದೂರು ದಾಖಲಿಸಿ, ತನಿಖೆ ನಡೆಸಲೂ ಕೂಡ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಧನಸಹಾಯದಲ್ಲಿ ನಡೆಯುತ್ತಿರುವ ಶಾಲೆ, ಸರ್ಕಾರದ ನಿರ್ದೇಶನದಂತೆ ಕಾರ್ಯನಿರ್ವಹಿಸಬೇಕು. ಸ್ವಾರಂತ್ರ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿದ ಕುರಿತ ರಾಜಕೀಯ ಹಸ್ತಕ್ಷೇಪವಲ್ಲ ಎಂದು ವಿಜಯನ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಮತ್ತು ಪೊಲೀಸರು ಈ ಕುರಿತು ಸ್ಪಷ್ಟನೆ ನೀಡಿದ್ದು, ಶಾಲೆಯ ಮುಖ್ಯಸ್ಥರು ಅಥವಾ ಜನಪ್ರತಿನಿಧಿಗಳು ಮಾತ್ರ ಧ್ವಜಾರೋಹಣ ಮಾಡಬೇಕು. ಆದರೆ ಶಾಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೆಂಬಲಿಗರದ್ದಾಗಿದ್ದು, ಸರಸಂಘಚಾಲಕ ಮೋಹನ್ ಭಾಗವತ್ ರನ್ನು ವಿಶೇಷ ಅತಿಥಿಯಾಗಿ, ಆಹ್ವಾನಿಸಿ, ಧ್ವಜಾರೋಹಣ ಮಾಡಲಾಗಿತ್ತು.

ಕೇರಳ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಆರ್ ಎಸ್ ಎಸ್ ಮುಖ್ಯಸ್ಥರು ಪಲಕ್ಕಾಡದಲ್ಲಿ ಕೆಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಂದಿದ್ದರು. ಆರ್ ಎಸ್ ಎಸ್ ರಾಜಕೀಯ ಪಕ್ಷವಲ್ಲ. ಭಾಗವತ್ ರಾಜಕೀಯ ಮುಖಂಡರು ಅಲ್ಲ ಎಂದು ಕೇರಳ ಬಿಜೆಪಿ ಕಾರ್ಯದರ್ಶಿ ಎಮ್ .ಟಿ. ರಮೇಶ್ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕುಮಾನೆಮ್ ರಾಜಶೇಖರನ್ ಪ್ರತಿಕ್ರಿಯಿಸಿದ್ದು, ಶಾಲೆಯಲ್ಲಿ ಧ್ವಜಾರೋಹಣ ನಿಯಮದಂತೆ ನಡೆದಿದೆ. ಅಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ. ಅದೇ ರೀತಿ ರಾಜ್ಯದ ನಾನಾ ಕಡೆ ಧ್ವಜಾರೋಹಣ ಮಾಡಲಾಗಿದೆ. ಆದರೆ ಕೇವಲ ಆರ್ ಎಸ್ ಎಸ್ ವಿರುದ್ಧ ಮಾತ್ರ ಏಕೆ ಸಿಪಿಐ (ಎಂ) ಕ್ರಮ. ವಿಜಯನ್ ರಾಜಕೀಯ ದುರುದ್ದೇಶಪೂರ್ವಕವಾಗಿ ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search