• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಧವ್ ಪತ್ನಿ ಶೂ ಪಡೆದ ಪಾಕ್ ಗೆ ಚಪ್ಪಲಿ ಪಾರ್ಸೆಲ್ ಕಳುಹಿಸಿ ಅವಮಾನ

TNN Correspondent Posted On December 30, 2017
0


0
Shares
  • Share On Facebook
  • Tweet It

ದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನದಲ್ಲಿ ಬಂಧಿಸಲಾಗಿರುವ ಕುಲಭೂಷಣ್ ಜಾಧವ್ ಅವರ ಭೇಟಿ ವೇಳೆ ತಾಯಿ ಮತ್ತು ಪತ್ನಿಯನ್ನು ಅವಮಾನ ಮಾಡಿದ ಪಾಕ್ ಗೆ ಬಿಜೆಪಿ ಮುಖಂಡರೊಬ್ಬರು ಚಪ್ಪಲಿ ಕಳುಹಿಸಿ, ಸೇಡು ತೀರಿಸಿಕೊಂಡಿದ್ದಾರೆ.

ಪಾಕಿಸ್ತಾನಕ್ಕೆ ಭೇಟಿ ನೀಡುವ ವೇಳೆ ಕುಲಭೂಷಣ್ ಜಾಧವ್ ಅವರ ತಾಯಿ ಮತ್ತು ಪತ್ನಿಯ ಮಾಂಗಲ್ಯ, ಕುಂಕುಮ ಅಳಿಸಿ, ಬಟ್ಟೆ ಬದಲಾಯಿಸಿ ಮಾತನಾಡಲು ಅವಕಾಶ ನೀಡಿದ್ದರು. ಅಲ್ಲದೇ ಮಾತನಾಡಿ ಹೊರ ಬಂದ ನಂತರ ಜಾಧವ್ ಪತ್ನಿಯ ಶೂಗಳನ್ನು ಬಿಚ್ಚಿಕೊಂಡು ಅವಮಾನ ಮಾಡಿದ್ದರು. ಸಿಟ್ಟಿಗೆ ಸೇಡು ತೀರಿಸಿಕೊಂಡಿರುವ ದೆಹಲಿಯ ಬಿಜೆಪಿ ಮುಖಂಡ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ಆನ್ ಲೈನ್ ಮೂಲಕ ಚಪ್ಪಲಿ ಖರೀದಿಸಿ, ಪಾಕ್ ಹೈ ಕಮಿಷನರ್ ಕಚೇರಿಗೆ ಪಾರ್ಸೆಲ್ ಕಳುಹಿಸಿದ್ದಾರೆ.

ಪಾಕಿಸ್ತಾನದವರಿಗೆ ನಮ್ಮ ದೇಶದ ಮಹಿಳೆಯರ ಚಪ್ಪಲಿ ಬೇಕಲ್ಲವೇ, ಅದಕ್ಕಾಗಿ ಈ ಚಪ್ಪಲಿಗಳನ್ನು ಕಳುಹಿಸುತ್ತಿದ್ದೇನ. ಅವರು ಮಾಡಿದ ಅವಮಾನಕ್ಕೆ ಪ್ರತಿಕ್ರಿಯೆ ಇದು ಎಂದು ಬಗ್ಗಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ಟ್ವೀಟ್ ಮಾಡಿರುವ ತೇಜಿಂದರ್ ಪಾಲ್  ಸಿಂಗ್ ಬಗ್ಗಾ ‘ತೆಗೆದುಕೊಳ್ಳಿ ನಿಮಗೆ ಭಾರತದ ಚಪ್ಪಲಿ ಬೇಕಲ್ಲವೇ ಎಂದು ಪ್ರಶ್ನಿಸಿದ್ದು, ದೇಶವಾಸಿಗಳು ಆನ್ ಲೈನ್ ಮೂಲಕ ಪಾಕಿಸ್ತಾನಕ್ಕೆ ಚಪ್ಪಲಿಗಳನ್ನು ಕಳುಹಿಸುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪಾಕಿಸ್ತಾನಕ್ಕೆ ಚಪ್ಪಲಿ ಕಳುಹಿಸುವುದು ಒಂದು ಆಂದೋಲನವಾಗಲಿ. ಪಾಕಿಸ್ತಾನ ಮಾಡಿರುವ ಅವಮಾನಕ್ಕೆ ಇದೇ ಸರಿಯಾದ ಉತ್ತರ ಎಂದು ಹೇಳಿದ್ದು, ರಾಷ್ಟ್ರೀಯವಾದಿಗಳು ಪಾಕಿಸ್ತಾನಕ್ಕೆ ಚಪ್ಪಲಿ ಕಳುಹಿಸಬೇಕು ಎಂಬ ಆನ್ ಲೈನ್ ಅಭಿಯಾನ ಆರಂಭಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search