• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಧವ್ ಪತ್ನಿ ಶೂ ಪಡೆದ ಪಾಕ್ ಗೆ ಚಪ್ಪಲಿ ಪಾರ್ಸೆಲ್ ಕಳುಹಿಸಿ ಅವಮಾನ

TNN Correspondent Posted On December 30, 2017
0


0
Shares
  • Share On Facebook
  • Tweet It

ದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನದಲ್ಲಿ ಬಂಧಿಸಲಾಗಿರುವ ಕುಲಭೂಷಣ್ ಜಾಧವ್ ಅವರ ಭೇಟಿ ವೇಳೆ ತಾಯಿ ಮತ್ತು ಪತ್ನಿಯನ್ನು ಅವಮಾನ ಮಾಡಿದ ಪಾಕ್ ಗೆ ಬಿಜೆಪಿ ಮುಖಂಡರೊಬ್ಬರು ಚಪ್ಪಲಿ ಕಳುಹಿಸಿ, ಸೇಡು ತೀರಿಸಿಕೊಂಡಿದ್ದಾರೆ.

ಪಾಕಿಸ್ತಾನಕ್ಕೆ ಭೇಟಿ ನೀಡುವ ವೇಳೆ ಕುಲಭೂಷಣ್ ಜಾಧವ್ ಅವರ ತಾಯಿ ಮತ್ತು ಪತ್ನಿಯ ಮಾಂಗಲ್ಯ, ಕುಂಕುಮ ಅಳಿಸಿ, ಬಟ್ಟೆ ಬದಲಾಯಿಸಿ ಮಾತನಾಡಲು ಅವಕಾಶ ನೀಡಿದ್ದರು. ಅಲ್ಲದೇ ಮಾತನಾಡಿ ಹೊರ ಬಂದ ನಂತರ ಜಾಧವ್ ಪತ್ನಿಯ ಶೂಗಳನ್ನು ಬಿಚ್ಚಿಕೊಂಡು ಅವಮಾನ ಮಾಡಿದ್ದರು. ಸಿಟ್ಟಿಗೆ ಸೇಡು ತೀರಿಸಿಕೊಂಡಿರುವ ದೆಹಲಿಯ ಬಿಜೆಪಿ ಮುಖಂಡ ತೇಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ಆನ್ ಲೈನ್ ಮೂಲಕ ಚಪ್ಪಲಿ ಖರೀದಿಸಿ, ಪಾಕ್ ಹೈ ಕಮಿಷನರ್ ಕಚೇರಿಗೆ ಪಾರ್ಸೆಲ್ ಕಳುಹಿಸಿದ್ದಾರೆ.

ಪಾಕಿಸ್ತಾನದವರಿಗೆ ನಮ್ಮ ದೇಶದ ಮಹಿಳೆಯರ ಚಪ್ಪಲಿ ಬೇಕಲ್ಲವೇ, ಅದಕ್ಕಾಗಿ ಈ ಚಪ್ಪಲಿಗಳನ್ನು ಕಳುಹಿಸುತ್ತಿದ್ದೇನ. ಅವರು ಮಾಡಿದ ಅವಮಾನಕ್ಕೆ ಪ್ರತಿಕ್ರಿಯೆ ಇದು ಎಂದು ಬಗ್ಗಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕುರಿತು ಟ್ವೀಟ್ ಮಾಡಿರುವ ತೇಜಿಂದರ್ ಪಾಲ್  ಸಿಂಗ್ ಬಗ್ಗಾ ‘ತೆಗೆದುಕೊಳ್ಳಿ ನಿಮಗೆ ಭಾರತದ ಚಪ್ಪಲಿ ಬೇಕಲ್ಲವೇ ಎಂದು ಪ್ರಶ್ನಿಸಿದ್ದು, ದೇಶವಾಸಿಗಳು ಆನ್ ಲೈನ್ ಮೂಲಕ ಪಾಕಿಸ್ತಾನಕ್ಕೆ ಚಪ್ಪಲಿಗಳನ್ನು ಕಳುಹಿಸುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪಾಕಿಸ್ತಾನಕ್ಕೆ ಚಪ್ಪಲಿ ಕಳುಹಿಸುವುದು ಒಂದು ಆಂದೋಲನವಾಗಲಿ. ಪಾಕಿಸ್ತಾನ ಮಾಡಿರುವ ಅವಮಾನಕ್ಕೆ ಇದೇ ಸರಿಯಾದ ಉತ್ತರ ಎಂದು ಹೇಳಿದ್ದು, ರಾಷ್ಟ್ರೀಯವಾದಿಗಳು ಪಾಕಿಸ್ತಾನಕ್ಕೆ ಚಪ್ಪಲಿ ಕಳುಹಿಸಬೇಕು ಎಂಬ ಆನ್ ಲೈನ್ ಅಭಿಯಾನ ಆರಂಭಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search