• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಉತ್ತರ ಪ್ರದೇಶ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ಯೋಗಿ ಸರ್ಕಾರ ಆದೇಶ

TNN Correspondent Posted On December 30, 2017
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಆದೇಶ ಹೊರಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಯೋಗಿ ಆದಿತ್ಯನಾಥ್ ಸರ್ಕಾರ ವಿಧಾನಸಭೆಯ ಮೇಲ್ಮನೆ, ಕೆಳಮನೆ, ರಾಜ್ಯ ಮಟ್ಟದ ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳು, ಮಹಾನಗರ ಪಾಲಿಕೆಗಳು, ಸರ್ಕಾರಿ ಶಾಲೆಗಳು ಸೇರಿ ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಡಿಸೆಂಬರ್ 6 ರಂದು ಸೂಚನೆ ಹೊರಡಿಸಲಾಗಿತ್ತು. ಆದರೂ ಕೆಲವ ಕಚೇರಿಗಳಲ್ಲಿ ಸರಿಯಾಗಿ ಪಾಲನೆ ಮಾಡಿರಲಿಲ್ಲ. ಆದ್ದರಿಂದ ಬಾರಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಶೀಘ್ರದಲ್ಲಿ ಅಂಬೇಡ್ಕರ್ ಭಾವಚಿತ್ರಗಳನ್ನು ಅಳವಡಿಸಬೇಕು ಎಂದು ಹೇಳಿದೆ. ಅಲ್ಲದೇ ಅಂಬೇಡ್ಕರ್ ಜನ್ಮದಿನ, ಮಹಾ ಪರಿನಿರ್ವಾಣ ದಿನಗಳನ್ನು ಆಚರಿಸುವಾಗ ಚಿತ್ರ ಕಡ್ಡಾಯವಾಗಿ ಇರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ದಲಿತ ವಿರೋಧಿ ಎನ್ನುವ ವಿರೋಧ ಪಕ್ಷಗಳಿಗೆ ಈ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಕ್ಕ ಉತ್ತರ ನೀಡಿದ್ದು, ಕೇವಲ ಭಾವಚಿತ್ರವಷ್ಟೇ ಅಲ್ಲ, ದಲಿತರ ಏಳಿಗೆಗೆ, ರಕ್ಷಣೆಗೆ ಇನ್ನು ಹೊಸ ಅಸ್ತ್ರಗಳು ಹೊರ ಬರಲಿವೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. 2014ರ ಲೋಕಸಭೆ ಚುನಾವಣೆ ಮತ್ತು 2017 ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ದಲಿತರು  ಬಿಜೆಪಿ ಭಾರಿ ಬೆಂಬಲ ನೀಡಿದ್ದರು. ಅಲ್ಲದೇ ದಲಿತರ ಪಕ್ಷ ಎಂದೇ ಗುರುತಿಸಿಕೊಂಡಿದ್ದ ಬಹುಜನ್ ಸಮಾಜ ಪಾರ್ಟಿಯನ್ನು ಬಿಟ್ಟು ಜನರ ಬಿಜೆಪಿ ಮತ ನೀಡಿದ್ದರು. ದಲಿತರು ಬಿಜೆಪಿ ಮೇಲೆ ವಿಶ್ವಾಸವಿಟ್ಟಿದ್ದು, ಅದನ್ನು ಕಾಯ್ದುಕೊಂಡು ಹೋಗಲಾವುದು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದ ಈ ನಿರ್ಧಾರಕ್ಕೆ ದಲಿತರು ಸೇರಿ ಉತ್ತರ ಪ್ರದೇಶದ ಎಲ್ಲ ವರ್ಗದ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search